ಚಿತ್ರ ಮಂಜರಿ

ತೆಲುಗಿನಲ್ಲಿ ಶ್ರೀಲೀಲಾ ಕಮಾಲ್ : ಬಾಲಿವುಡ್ ನತ್ತ ಹೆಜ್ಜೆ ಹಾಕಿದ ರಶ್ಮಿಕಾ ಮಂದಣ್ಣ

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರು ಕನ್ನಡ ಚಿತ್ರದಿಂದ ನಟನೆಗೆ ಎಂಟ್ರಿ ಕೊಟ್ಟಿದ್ದರು ಕೂಡ. ಸೌತ್ ಸಿನಿಮಾಗಳ ಮೂಲಕ ಹೆಚ್ಚು ಜನಪ್ರಿಯತೆ ಪಡೆದುಕೊಂಡವರು. ರಶ್ಮಿಕಾ ನಟಿಸಬೇಕಿದ್ದ ಸಿನಿಮಾಗಳು ಒಂದೊಂದೇ ಪ್ರಾಜೆಕ್ಟ್‌ಗಳು ಶ್ರೀಲೀಲಾ ಕೈ ಸೇರುತ್ತಿದೆ. ನಿತಿನ್ ಸಿನಿಮಾಶದಿಂದ ರಶ್ಮಿಕಾ ಹೊರಬಂದಿದ್ದರು. ಈ ಚಿತ್ರಕ್ಕೆ ಶ್ರೀಲೀಲಾ ನಾಯಕಿಯಾಗಿದ್ದಾರೆ. ಈ ಬೆನ್ನಲ್ಲೇ ರಶ್ಮಿಕಾ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ.

ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಅವರ ಮೇಲಿರುವ ಕ್ರೇಜ್ ಎಲ್ಲೂ ಕಮ್ಮಿ ಆಗಿಲ್ಲ. ಪುಷ್ಪ 2, ಅನಿಮಲ್, ರೈನ್ ಬೋ ಸಿನಿಮಾ ಅಂತಾ ನಟಿ ಬ್ಯುಸಿಯಾಗಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶ್ರೀಲೀಲಾ ಎಂಟ್ರಿಯಿಂದ ರಶ್ಮಿಕಾ ಮಂದಣ್ಣಗೆ ಕೊಂಚ ಎಫೆಕ್ಟ್ ಆದಂತಿದೆ. ರಶ್ಮಿಕಾ ಕೈಯಲ್ಲಿ 4-5 ಪ್ರಾಜೆಕ್ಟ್ ಇದ್ರೆ, ಶ್ರೀಲೀಲಾ ಕೈಯಲ್ಲಿ 10ಕ್ಕೂ ಹೆಚ್ಚು ಸಿನಿಮಾಗಳಿವೆ.

ಈ ಹಿಂದೆ ತೆಲುಗು ನಟ ನಿತಿನ್ ಚಿತ್ರಕ್ಕೆ ರಶ್ಮಿಕಾ ನಾಯಕಿಯಾಗಿ ಫೈನಲ್ ಆಗಿದ್ದರು. ಆದರೆ ಏಕಾಏಕಿ ಏನಾಯ್ತೋ ಏನೋ ಸಿನಿಮಾ ತಂಡಕ್ಕೆ ನಟಿ ಗುಡ್ ಬೈ ಹೇಳಿದ್ದರು. ಹೀಗೆ ರಶ್ಮಿಕಾ ಕೈಬಿಟ್ಟ ಸಿನಿಮಾಗಳೆಲ್ಲ ಶ್ರೀಲೀಲಾ ಪಾಲಾಗುತ್ತಿದೆ. ಇದೆಲ್ಲದರನಡುವೆ ತೆಲುಗಿನಲ್ಲಿ ಡಿಮ್ಯಾಂಡ್ ಕಮ್ಮಿಯಾಗುತ್ತಿದ್ದಂತೆ ಕೊಡಗಿನ ಕುವರಿ ಬಾಲಿವುಡ್‌ನತ್ತ ಮುಖ ಮಾಡಿದ್ದಾರೆ. ರಶ್ಮಿಕಾ ನಟನೆಯ ಹೊಸ ಹಿಂದಿ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ. ಅನೀಸ್ ಬಾಜ್ಮೀ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬರಲಿದೆ.

ಗುಡ್ ಬೈ, ಮಿಷನ್ ಮಜ್ನು, ಅನಿಮಲ್ ಸಿನಿಮಾಗಳಲ್ಲಿ ನಟಿಸಿದ್ದಾರೆ. ಈಗ ಶಾಹಿದ್ ಕಪೂರ್ ಜೊತೆ ನಟಿಸಲು ರಶ್ಮಿಕಾ ಸಜ್ಜಾಗಿದ್ದಾರೆ. ಹೊಸ ಪ್ರೇಮಕಥೆಯನ್ನ ಹೇಳಲು ಈ ಜೋಡಿ ಸಜ್ಜಾಗಿದೆ. `ಏಕ್ ಸಾಥ್ ದೋ ದೋ’ ಎಂದು ಈ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ. ಈ ವರ್ಷದ ಅಂತ್ಯದಲ್ಲಿ ಸಿನಿಮಾ ಚಿತ್ರೀಕರಣ ಶುರುವಾಗಿದೆ.

lokesh

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

40 mins ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

3 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

3 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

7 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

12 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

12 hours ago