ಚಿತ್ರ ಮಂಜರಿ

ಪುಣ್ಯಕೋಟಿ ಯೋಜನೆಯ  ರಾಯಭಾರಿಯಾದ ಕಿಚ್ಚ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ  ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.

ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ  ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ  ಈ ಶುಭಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆ ಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.

ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್‌ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್‌ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ. ಇಂದು ಅವರ ಜನ್ಮದಿನದ ಅಂಗವಾಗಿ  ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಿರುವ ಕುರಿತು ಅಧಿಕೃತವಾಗಿ ಪತ್ರ ಬರೆಯಲಾಗಿದೆ. ಸುದೀಪ್ ಈ ಕೆಲಸಕ್ಕ ಯಾವುದೇ ಸಂಭಾವನೆ ಪಡೆಯದೇ ಗೋಸಂಪತ್ತಿನ ಸಂರಕ್ಷಣೆಗೆ ತಮ್ಮ ಸಣ್ಣದೊಂದು ಅಳಿಲು ಸೇವೆ ಸಲ್ಲಿಸುವುದಾಗಿ ತಿಳಿಸಿರುವುದಾಗಿ ಪ್ರಭು ಚವ್ಹಾಣ್ ವಿವರಿಸಿ, ಜನ್ಮದಿನಕ್ಕೆ ಶುಭ ಕೋರಿದ್ದಾರೆ.

ರಾಜ್ಯದಲ್ಲಿ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ, 100 ಸರ್ಕಾರಿ ಗೋಶಾಲೆಗಳು, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮನಿರ್ಭರ ಗೋಶಾಲೆ, ಸಂಚಾರಿ ಪಶು ಚಿಕಿತ್ಸಾ ವಾಹನಗಳು, ಪಶು ಜಿಲ್ಲಾಸ್ಪತ್ರೆಗಳ ನಿರ್ಮಾಣ, ಸ್ಪೇಷಲ್, ಸೂಪರ್ ಸ್ಪೇಷಾಲಿಟಿ ಹಾಗೂ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಳು, 100 ಪಶು ಚಿಕಿತ್ಸಾಲಯಗಳು, 400 ಪಶು ವೈದ್ಯರ ನೇಮಕಾತಿ, 250 ಕಿರಿಯ ಪಶು ವೈದ್ಯಕೀಯ ಸಹಾಯಕರ ನೇಮಕಾತಿ, ಪುಣ್ಯಕೋಟಿ ದತ್ತು ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ ಕಿಚ್ಚ ಸುದೀಪ್ ರಾಯಭಾರಿಯಾಗಲು ಒಪ್ಪಿರುವುದು ಗೋಸೇವೆಯಲ್ಲಿ ತೋಡಗಿರುವ ನಮಗೆ ಆನೆಬಲ ಬಂದಂತಾಗಿದೆ ಎಂದು ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

andolana

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

32 mins ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

39 mins ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

1 hour ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

2 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

2 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

3 hours ago