ಚಿತ್ರ ಮಂಜರಿ

ಪುಣ್ಯಕೋಟಿ ಯೋಜನೆಯ  ರಾಯಭಾರಿಯಾದ ಕಿಚ್ಚ

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ  ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.

ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ  ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ  ಈ ಶುಭಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆ ಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.

ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್‌ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್‌ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ. ಇಂದು ಅವರ ಜನ್ಮದಿನದ ಅಂಗವಾಗಿ  ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಿರುವ ಕುರಿತು ಅಧಿಕೃತವಾಗಿ ಪತ್ರ ಬರೆಯಲಾಗಿದೆ. ಸುದೀಪ್ ಈ ಕೆಲಸಕ್ಕ ಯಾವುದೇ ಸಂಭಾವನೆ ಪಡೆಯದೇ ಗೋಸಂಪತ್ತಿನ ಸಂರಕ್ಷಣೆಗೆ ತಮ್ಮ ಸಣ್ಣದೊಂದು ಅಳಿಲು ಸೇವೆ ಸಲ್ಲಿಸುವುದಾಗಿ ತಿಳಿಸಿರುವುದಾಗಿ ಪ್ರಭು ಚವ್ಹಾಣ್ ವಿವರಿಸಿ, ಜನ್ಮದಿನಕ್ಕೆ ಶುಭ ಕೋರಿದ್ದಾರೆ.

ರಾಜ್ಯದಲ್ಲಿ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ, 100 ಸರ್ಕಾರಿ ಗೋಶಾಲೆಗಳು, ಪಶು ಸಂಜೀವಿನಿ ಆ್ಯಂಬುಲೆನ್ಸ್, ಗೋಮಾತಾ ಸಹಕಾರ ಸಂಘ, ಆತ್ಮನಿರ್ಭರ ಗೋಶಾಲೆ, ಸಂಚಾರಿ ಪಶು ಚಿಕಿತ್ಸಾ ವಾಹನಗಳು, ಪಶು ಜಿಲ್ಲಾಸ್ಪತ್ರೆಗಳ ನಿರ್ಮಾಣ, ಸ್ಪೇಷಲ್, ಸೂಪರ್ ಸ್ಪೇಷಾಲಿಟಿ ಹಾಗೂ ಮಲ್ಟಿ ಸ್ಪೇಷಾಲಿಟಿ ಆಸ್ಪತ್ರೆಗಳು, 100 ಪಶು ಚಿಕಿತ್ಸಾಲಯಗಳು, 400 ಪಶು ವೈದ್ಯರ ನೇಮಕಾತಿ, 250 ಕಿರಿಯ ಪಶು ವೈದ್ಯಕೀಯ ಸಹಾಯಕರ ನೇಮಕಾತಿ, ಪುಣ್ಯಕೋಟಿ ದತ್ತು ಯೋಜನೆ ಸೇರಿದಂತೆ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದೀಗ ಕಿಚ್ಚ ಸುದೀಪ್ ರಾಯಭಾರಿಯಾಗಲು ಒಪ್ಪಿರುವುದು ಗೋಸೇವೆಯಲ್ಲಿ ತೋಡಗಿರುವ ನಮಗೆ ಆನೆಬಲ ಬಂದಂತಾಗಿದೆ ಎಂದು ಪ್ರಭು ಚವ್ಹಾಣ್ ಹರ್ಷ ವ್ಯಕ್ತಪಡಿಸಿದ್ದಾರೆ.

andolana

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

54 mins ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

1 hour ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago