ನಟ ಸುದೀಪ್ ಅವರು ನನಗೆ ಸಿನಿಮಾ ಮಾಡಿಕೊಡ್ತೀನಿ ಅಂತ 8 ವರ್ಷದಿಂದ ಹೇಳಿಕೊಂಡು ಬರುತ್ತಿದ್ದಾರೆ ಎಂಬ ನಿರ್ಮಾಪಕರ ಆರೋಪಕ್ಕೆ ಟ್ವೀಟ್ ಮೂಲಕ ಕಿಚ್ಚ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಡಿಸೆಂಬರ್ 2022 ರಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೂಲಕ ಸುದೀಪ್ ಅವರಿಗೆ ಆರು ಪತ್ರಗಳನ್ನು ಬರೆದಿದ್ದೇನೆ, ಆದರೆ ಅವುಗಳಲ್ಲಿ ಒಂದಕ್ಕೆ ಮಾತ್ರ ಉತ್ತರಿಸಲಾಗಿದೆ ಎಂದು ಎಂಎನ್ ಕುಮಾರ್ ಆರೋಪ ಮಾಡಿದ್ದಾರೆ.
ಆಂಗ್ಲ ಭಾಷೆಯ ವಾಕ್ಯವನ್ನು ಉಲ್ಲೇಖಿಸಿರುವ ಸುದೀಪ್, ‘ಇದು ನಿಮಗೆ ತಿಳಿದಿರಲಿ. ಒಳ್ಳೆಯತನವು ಕುಶಲತೆ ಮತ್ತು ದುರುಪಯೋಗದ ಸಾಧನವಲ್ಲ. ಅದು ನಿಜವಾಗಿ ಪ್ರಕಾಶಿಸುತ್ತದೆ. ದುರಹಂಕಾರವು ಅದರ ಪ್ರಕಾಶವನ್ನು ಹಾಳುಮಾಡಲು ನಾನು ಬಿಡುವುದಿಲ್ಲ. ವಿನಮ್ರರಾಗಿರಿ ಮತ್ತು ಸತ್ಯವಂತರಾಗಿರಿ’ ಎಂದು ಅರ್ಥ ಬರುವ ಮಾತೊಂದನ್ನು ಪೋಸ್ಟ್ ಮಾಡಿರುವ ಸುದೀಪ್ ಈ ಕೋಟ್ ನನಗೆ ಇಷ್ಟವಾಯಿತು. ನೀವೂ ಓದಿ ಎಂದಿದ್ದಾರೆ.
ನಿರ್ಮಾಪಕರು ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಯಾಗಿ ಸುದೀಪ್ ಈ ಟ್ವೀಟ್ ಮಾಡಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿವೆ, ಆದರೆ ಅವರ ಹಿತೈಷಿಗಳು ಹಾಗೂ ಹತ್ತಿರದವರು ಹೇಳುವ ಪ್ರಕಾರ, ಸುದೀಪ್ ಯಾರಿಗೂ ಹಿಂಜರಿಯುವುದಿಲ್ಲ, ತಮ್ಮ ವಿರುದ್ಧದ ಆರೋಪಗಳಿಗೆ ಅವರು ನೇರವಾಗಿಯೇ ಉತ್ತರ ತಿಳಿಸಲು ಬಯಸುತ್ತಾರೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕು.
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…
ಬೆಂಗಳೂರು : ಕೃಷಿ ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ನಿರಂತರವಾಗಿ ಅಧಿಕಾರಿಗಳ ಸಭೆ ಮಾಡುವುದರೊಂದಿಗೆ ರೈತರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ವಿಮೆ…
ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…
ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…
ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…