ನಟ ಸುದೀಪ್ ಅವರು ನನಗೆ ಸಿನಿಮಾ ಮಾಡಿಕೊಡ್ತೀನಿ ಅಂತ 8 ವರ್ಷದಿಂದ ಹೇಳಿಕೊಂಡು ಬರುತ್ತಿದ್ದಾರೆ ಎಂಬ ನಿರ್ಮಾಪಕರ ಆರೋಪಕ್ಕೆ ಟ್ವೀಟ್ ಮೂಲಕ ಕಿಚ್ಚ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಡಿಸೆಂಬರ್ 2022 ರಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೂಲಕ ಸುದೀಪ್ ಅವರಿಗೆ ಆರು ಪತ್ರಗಳನ್ನು ಬರೆದಿದ್ದೇನೆ, ಆದರೆ ಅವುಗಳಲ್ಲಿ ಒಂದಕ್ಕೆ ಮಾತ್ರ ಉತ್ತರಿಸಲಾಗಿದೆ ಎಂದು ಎಂಎನ್ ಕುಮಾರ್ ಆರೋಪ ಮಾಡಿದ್ದಾರೆ.
ಆಂಗ್ಲ ಭಾಷೆಯ ವಾಕ್ಯವನ್ನು ಉಲ್ಲೇಖಿಸಿರುವ ಸುದೀಪ್, ‘ಇದು ನಿಮಗೆ ತಿಳಿದಿರಲಿ. ಒಳ್ಳೆಯತನವು ಕುಶಲತೆ ಮತ್ತು ದುರುಪಯೋಗದ ಸಾಧನವಲ್ಲ. ಅದು ನಿಜವಾಗಿ ಪ್ರಕಾಶಿಸುತ್ತದೆ. ದುರಹಂಕಾರವು ಅದರ ಪ್ರಕಾಶವನ್ನು ಹಾಳುಮಾಡಲು ನಾನು ಬಿಡುವುದಿಲ್ಲ. ವಿನಮ್ರರಾಗಿರಿ ಮತ್ತು ಸತ್ಯವಂತರಾಗಿರಿ’ ಎಂದು ಅರ್ಥ ಬರುವ ಮಾತೊಂದನ್ನು ಪೋಸ್ಟ್ ಮಾಡಿರುವ ಸುದೀಪ್ ಈ ಕೋಟ್ ನನಗೆ ಇಷ್ಟವಾಯಿತು. ನೀವೂ ಓದಿ ಎಂದಿದ್ದಾರೆ.
ನಿರ್ಮಾಪಕರು ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಯಾಗಿ ಸುದೀಪ್ ಈ ಟ್ವೀಟ್ ಮಾಡಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿವೆ, ಆದರೆ ಅವರ ಹಿತೈಷಿಗಳು ಹಾಗೂ ಹತ್ತಿರದವರು ಹೇಳುವ ಪ್ರಕಾರ, ಸುದೀಪ್ ಯಾರಿಗೂ ಹಿಂಜರಿಯುವುದಿಲ್ಲ, ತಮ್ಮ ವಿರುದ್ಧದ ಆರೋಪಗಳಿಗೆ ಅವರು ನೇರವಾಗಿಯೇ ಉತ್ತರ ತಿಳಿಸಲು ಬಯಸುತ್ತಾರೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…