ನಟ ಸುದೀಪ್ ಅವರು ನನಗೆ ಸಿನಿಮಾ ಮಾಡಿಕೊಡ್ತೀನಿ ಅಂತ 8 ವರ್ಷದಿಂದ ಹೇಳಿಕೊಂಡು ಬರುತ್ತಿದ್ದಾರೆ ಎಂಬ ನಿರ್ಮಾಪಕರ ಆರೋಪಕ್ಕೆ ಟ್ವೀಟ್ ಮೂಲಕ ಕಿಚ್ಚ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಡಿಸೆಂಬರ್ 2022 ರಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೂಲಕ ಸುದೀಪ್ ಅವರಿಗೆ ಆರು ಪತ್ರಗಳನ್ನು ಬರೆದಿದ್ದೇನೆ, ಆದರೆ ಅವುಗಳಲ್ಲಿ ಒಂದಕ್ಕೆ ಮಾತ್ರ ಉತ್ತರಿಸಲಾಗಿದೆ ಎಂದು ಎಂಎನ್ ಕುಮಾರ್ ಆರೋಪ ಮಾಡಿದ್ದಾರೆ.
ಆಂಗ್ಲ ಭಾಷೆಯ ವಾಕ್ಯವನ್ನು ಉಲ್ಲೇಖಿಸಿರುವ ಸುದೀಪ್, ‘ಇದು ನಿಮಗೆ ತಿಳಿದಿರಲಿ. ಒಳ್ಳೆಯತನವು ಕುಶಲತೆ ಮತ್ತು ದುರುಪಯೋಗದ ಸಾಧನವಲ್ಲ. ಅದು ನಿಜವಾಗಿ ಪ್ರಕಾಶಿಸುತ್ತದೆ. ದುರಹಂಕಾರವು ಅದರ ಪ್ರಕಾಶವನ್ನು ಹಾಳುಮಾಡಲು ನಾನು ಬಿಡುವುದಿಲ್ಲ. ವಿನಮ್ರರಾಗಿರಿ ಮತ್ತು ಸತ್ಯವಂತರಾಗಿರಿ’ ಎಂದು ಅರ್ಥ ಬರುವ ಮಾತೊಂದನ್ನು ಪೋಸ್ಟ್ ಮಾಡಿರುವ ಸುದೀಪ್ ಈ ಕೋಟ್ ನನಗೆ ಇಷ್ಟವಾಯಿತು. ನೀವೂ ಓದಿ ಎಂದಿದ್ದಾರೆ.
ನಿರ್ಮಾಪಕರು ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಯಾಗಿ ಸುದೀಪ್ ಈ ಟ್ವೀಟ್ ಮಾಡಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿವೆ, ಆದರೆ ಅವರ ಹಿತೈಷಿಗಳು ಹಾಗೂ ಹತ್ತಿರದವರು ಹೇಳುವ ಪ್ರಕಾರ, ಸುದೀಪ್ ಯಾರಿಗೂ ಹಿಂಜರಿಯುವುದಿಲ್ಲ, ತಮ್ಮ ವಿರುದ್ಧದ ಆರೋಪಗಳಿಗೆ ಅವರು ನೇರವಾಗಿಯೇ ಉತ್ತರ ತಿಳಿಸಲು ಬಯಸುತ್ತಾರೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕು.
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…