ನಟ ಸುದೀಪ್ ಅವರು ನನಗೆ ಸಿನಿಮಾ ಮಾಡಿಕೊಡ್ತೀನಿ ಅಂತ 8 ವರ್ಷದಿಂದ ಹೇಳಿಕೊಂಡು ಬರುತ್ತಿದ್ದಾರೆ ಎಂಬ ನಿರ್ಮಾಪಕರ ಆರೋಪಕ್ಕೆ ಟ್ವೀಟ್ ಮೂಲಕ ಕಿಚ್ಚ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಡಿಸೆಂಬರ್ 2022 ರಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೂಲಕ ಸುದೀಪ್ ಅವರಿಗೆ ಆರು ಪತ್ರಗಳನ್ನು ಬರೆದಿದ್ದೇನೆ, ಆದರೆ ಅವುಗಳಲ್ಲಿ ಒಂದಕ್ಕೆ ಮಾತ್ರ ಉತ್ತರಿಸಲಾಗಿದೆ ಎಂದು ಎಂಎನ್ ಕುಮಾರ್ ಆರೋಪ ಮಾಡಿದ್ದಾರೆ.
ಆಂಗ್ಲ ಭಾಷೆಯ ವಾಕ್ಯವನ್ನು ಉಲ್ಲೇಖಿಸಿರುವ ಸುದೀಪ್, ‘ಇದು ನಿಮಗೆ ತಿಳಿದಿರಲಿ. ಒಳ್ಳೆಯತನವು ಕುಶಲತೆ ಮತ್ತು ದುರುಪಯೋಗದ ಸಾಧನವಲ್ಲ. ಅದು ನಿಜವಾಗಿ ಪ್ರಕಾಶಿಸುತ್ತದೆ. ದುರಹಂಕಾರವು ಅದರ ಪ್ರಕಾಶವನ್ನು ಹಾಳುಮಾಡಲು ನಾನು ಬಿಡುವುದಿಲ್ಲ. ವಿನಮ್ರರಾಗಿರಿ ಮತ್ತು ಸತ್ಯವಂತರಾಗಿರಿ’ ಎಂದು ಅರ್ಥ ಬರುವ ಮಾತೊಂದನ್ನು ಪೋಸ್ಟ್ ಮಾಡಿರುವ ಸುದೀಪ್ ಈ ಕೋಟ್ ನನಗೆ ಇಷ್ಟವಾಯಿತು. ನೀವೂ ಓದಿ ಎಂದಿದ್ದಾರೆ.
ನಿರ್ಮಾಪಕರು ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಯಾಗಿ ಸುದೀಪ್ ಈ ಟ್ವೀಟ್ ಮಾಡಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿವೆ, ಆದರೆ ಅವರ ಹಿತೈಷಿಗಳು ಹಾಗೂ ಹತ್ತಿರದವರು ಹೇಳುವ ಪ್ರಕಾರ, ಸುದೀಪ್ ಯಾರಿಗೂ ಹಿಂಜರಿಯುವುದಿಲ್ಲ, ತಮ್ಮ ವಿರುದ್ಧದ ಆರೋಪಗಳಿಗೆ ಅವರು ನೇರವಾಗಿಯೇ ಉತ್ತರ ತಿಳಿಸಲು ಬಯಸುತ್ತಾರೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕು.
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…