ಚಿತ್ರ ಮಂಜರಿ

ದುಡ್ಡು ತಗೊಂಡು ಸುದೀಪ್ ಸಿನಿಮಾ ಮಾಡಿಕೊಡ್ತಿಲ್ಲ: ನಿರ್ಮಾಪಕರ ಆರೋಪಕ್ಕೆ ‘ಕಿಚ್ಚ’ನ ಖಡಕ್ ರಿಯಾಕ್ಷನ್!

ನಟ ಸುದೀಪ್ ಅವರು ನನಗೆ ಸಿನಿಮಾ ಮಾಡಿಕೊಡ್ತೀನಿ ಅಂತ 8 ವರ್ಷದಿಂದ ಹೇಳಿಕೊಂಡು ಬರುತ್ತಿದ್ದಾರೆ ಎಂಬ ನಿರ್ಮಾಪಕರ ಆರೋಪಕ್ಕೆ ಟ್ವೀಟ್ ಮೂಲಕ ಕಿಚ್ಚ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಡಿಸೆಂಬರ್ 2022 ರಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೂಲಕ ಸುದೀಪ್ ಅವರಿಗೆ ಆರು ಪತ್ರಗಳನ್ನು ಬರೆದಿದ್ದೇನೆ, ಆದರೆ ಅವುಗಳಲ್ಲಿ ಒಂದಕ್ಕೆ ಮಾತ್ರ ಉತ್ತರಿಸಲಾಗಿದೆ ಎಂದು ಎಂಎನ್ ಕುಮಾರ್ ಆರೋಪ ಮಾಡಿದ್ದಾರೆ.

ಆಂಗ್ಲ ಭಾಷೆಯ ವಾಕ್ಯವನ್ನು ಉಲ್ಲೇಖಿಸಿರುವ ಸುದೀಪ್, ‘ಇದು ನಿಮಗೆ ತಿಳಿದಿರಲಿ. ಒಳ್ಳೆಯತನವು ಕುಶಲತೆ ಮತ್ತು ದುರುಪಯೋಗದ ಸಾಧನವಲ್ಲ. ಅದು ನಿಜವಾಗಿ ಪ್ರಕಾಶಿಸುತ್ತದೆ. ದುರಹಂಕಾರವು ಅದರ ಪ್ರಕಾಶವನ್ನು ಹಾಳುಮಾಡಲು ನಾನು ಬಿಡುವುದಿಲ್ಲ. ವಿನಮ್ರರಾಗಿರಿ ಮತ್ತು ಸತ್ಯವಂತರಾಗಿರಿ’ ಎಂದು ಅರ್ಥ ಬರುವ ಮಾತೊಂದನ್ನು ಪೋಸ್ಟ್ ಮಾಡಿರುವ ಸುದೀಪ್ ಈ ಕೋಟ್ ನನಗೆ ಇಷ್ಟವಾಯಿತು. ನೀವೂ ಓದಿ ಎಂದಿದ್ದಾರೆ.

ನಿರ್ಮಾಪಕರು ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಯಾಗಿ ಸುದೀಪ್ ಈ ಟ್ವೀಟ್ ಮಾಡಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿವೆ, ಆದರೆ ಅವರ ಹಿತೈಷಿಗಳು ಹಾಗೂ ಹತ್ತಿರದವರು ಹೇಳುವ ಪ್ರಕಾರ, ಸುದೀಪ್ ಯಾರಿಗೂ ಹಿಂಜರಿಯುವುದಿಲ್ಲ, ತಮ್ಮ ವಿರುದ್ಧದ ಆರೋಪಗಳಿಗೆ ಅವರು ನೇರವಾಗಿಯೇ ಉತ್ತರ ತಿಳಿಸಲು ಬಯಸುತ್ತಾರೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕು.

andolanait

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

23 mins ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

4 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

8 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

10 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

12 hours ago