ಚಿತ್ರ ಮಂಜರಿ

ದುಡ್ಡು ತಗೊಂಡು ಸುದೀಪ್ ಸಿನಿಮಾ ಮಾಡಿಕೊಡ್ತಿಲ್ಲ: ನಿರ್ಮಾಪಕರ ಆರೋಪಕ್ಕೆ ‘ಕಿಚ್ಚ’ನ ಖಡಕ್ ರಿಯಾಕ್ಷನ್!

ನಟ ಸುದೀಪ್ ಅವರು ನನಗೆ ಸಿನಿಮಾ ಮಾಡಿಕೊಡ್ತೀನಿ ಅಂತ 8 ವರ್ಷದಿಂದ ಹೇಳಿಕೊಂಡು ಬರುತ್ತಿದ್ದಾರೆ ಎಂಬ ನಿರ್ಮಾಪಕರ ಆರೋಪಕ್ಕೆ ಟ್ವೀಟ್ ಮೂಲಕ ಕಿಚ್ಚ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಡಿಸೆಂಬರ್ 2022 ರಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮೂಲಕ ಸುದೀಪ್ ಅವರಿಗೆ ಆರು ಪತ್ರಗಳನ್ನು ಬರೆದಿದ್ದೇನೆ, ಆದರೆ ಅವುಗಳಲ್ಲಿ ಒಂದಕ್ಕೆ ಮಾತ್ರ ಉತ್ತರಿಸಲಾಗಿದೆ ಎಂದು ಎಂಎನ್ ಕುಮಾರ್ ಆರೋಪ ಮಾಡಿದ್ದಾರೆ.

ಆಂಗ್ಲ ಭಾಷೆಯ ವಾಕ್ಯವನ್ನು ಉಲ್ಲೇಖಿಸಿರುವ ಸುದೀಪ್, ‘ಇದು ನಿಮಗೆ ತಿಳಿದಿರಲಿ. ಒಳ್ಳೆಯತನವು ಕುಶಲತೆ ಮತ್ತು ದುರುಪಯೋಗದ ಸಾಧನವಲ್ಲ. ಅದು ನಿಜವಾಗಿ ಪ್ರಕಾಶಿಸುತ್ತದೆ. ದುರಹಂಕಾರವು ಅದರ ಪ್ರಕಾಶವನ್ನು ಹಾಳುಮಾಡಲು ನಾನು ಬಿಡುವುದಿಲ್ಲ. ವಿನಮ್ರರಾಗಿರಿ ಮತ್ತು ಸತ್ಯವಂತರಾಗಿರಿ’ ಎಂದು ಅರ್ಥ ಬರುವ ಮಾತೊಂದನ್ನು ಪೋಸ್ಟ್ ಮಾಡಿರುವ ಸುದೀಪ್ ಈ ಕೋಟ್ ನನಗೆ ಇಷ್ಟವಾಯಿತು. ನೀವೂ ಓದಿ ಎಂದಿದ್ದಾರೆ.

ನಿರ್ಮಾಪಕರು ತಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ಪ್ರತಿಯಾಗಿ ಸುದೀಪ್ ಈ ಟ್ವೀಟ್ ಮಾಡಿದ್ದಾರೆ ಎಂಬ ಅನುಮಾನಗಳು ವ್ಯಕ್ತವಾಗಿವೆ, ಆದರೆ ಅವರ ಹಿತೈಷಿಗಳು ಹಾಗೂ ಹತ್ತಿರದವರು ಹೇಳುವ ಪ್ರಕಾರ, ಸುದೀಪ್ ಯಾರಿಗೂ ಹಿಂಜರಿಯುವುದಿಲ್ಲ, ತಮ್ಮ ವಿರುದ್ಧದ ಆರೋಪಗಳಿಗೆ ಅವರು ನೇರವಾಗಿಯೇ ಉತ್ತರ ತಿಳಿಸಲು ಬಯಸುತ್ತಾರೆ ಎಂದಿದ್ದಾರೆ. ಮುಂದಿನ ದಿನಗಳಲ್ಲಿ ಈ ಪ್ರಕರಣ ಯಾವ ಸ್ವರೂಪ ಪಡೆಯಲಿದೆ ಎಂಬುದನ್ನು ಕಾದು ನೋಡಬೇಕು.

andolanait

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

12 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

12 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

13 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

13 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

14 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

14 hours ago