ಚಿತ್ರ ಮಂಜರಿ

ಸಂಜು ವೆಡ್ಸ್ ಗೀತಾ ೨’ಗೆ ಸುದೀಪ್ ಕಥೆ!

ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ ೨’ ಚಿತ್ರ ಮುಂದಿನ ವಾರ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ಚಿತ್ರದ ಕುರಿತು ನಿರ್ದೇಶಕ ನಾಗಶೇಖರ್ ಹಲವು ವಿಷಯಗಳನ್ನು ಈಗಾಗಲೇ ಹಂಚಿಕೊಂಡಿದ್ದಾರೆ. ಇದೇ ಮೊದಲ ಬಾರಿಗೆ ಅವರು, ಈ ಚಿತ್ರಕ್ಕೆ ಕಥೆ ಕೊಟ್ಟವರು ಸುದೀಪ್ ಎಂದು ಬಹಿರಂಗಪಡಿಸಿದ್ದಾರೆ.

ಇತ್ತೀಚೆಗೆ, ಚಿತ್ರಕ್ಕಾಗಿ ಕವಿರಾಜ್ ಬರೆದ ‘ಮಳೆಯಂತೇ ಬಾ?’ ಎಂಬ ಹಾಡನ್ನು ಲೋಕಾರ್ಪಣೆ ಮಾಡಲಾಗಿದೆ. ಈ ಹಾಡನ್ನು ಸುದೀಪ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭ ಕೋರಿದ್ದಾರೆ. ಸುದೀಪ್ ಈ ಹಾಡನ್ನು ಬಿಡುಗಡೆ ಮಾಡಿರುವುದಷ್ಟೇ ಅಲ್ಲ, ಚಿತ್ರಕ್ಕೆ ಕಥೆಯ ಎಳೆಯನ್ನೂ ಕೊಟ್ಟಿದ್ದಾರೆ ಎಂದು ನಾಗಶೇಖರ್ ಹೇಳಿಕೊಂಡಿದ್ದಾರೆ.

‘ರೇಷ್ಮೆ ಬೆಳೆಗಾರರ ಕುರಿತ ಒಂದು ಪ್ರಮುಖ ವಿಷಯ ವನ್ನು ಇಟ್ಟುಕೊಂಡು ಈ ಚಿತ್ರ ಮಾಡಿದ್ದೇನೆ. ಅದರ ಜತೆಗೊಂದು ಪ್ರೇಮಕಥೆಯೂ ಸಾಗುತ್ತದೆ. ಈ ಚಿತ್ರದ ಎಳೆಯನ್ನು ಕೊಟ್ಟಿದ್ದು ಸುದೀಪ್. ‘ಮಾಣಿಕ್ಯ’ ಚಿತ್ರದಲ್ಲಿ ಒಟ್ಟಿಗೆ ಕೆಲಸ ಮಾಡುವ ಸಂದರ್ಭದಲ್ಲಿ ಅವರು ನನಗೆ ಈ ಎಳೆ ಹೇಳಿದರು. ಇಂಥ ಕಥೆಗಳನ್ನು ನೀನು ಚೆನ್ನಾಗಿ ಮಾಡುತ್ತೀಯ ಎಂದು ಈ ಚಿತ್ರ ಮಾಡುವುದಕ್ಕೆ ಹುರಿದುಂಬಿಸಿದರು. ಹಾಗಾಗಿ, ಈ ಚಿತ್ರ ರೂಪುಗೊಂಡಿರುವ ಶ್ರೇಯಸ್ಸು ಅವರಿಗೇ ಸಲ್ಲುತ್ತದೆ. ಇಂದು ನಮ್ಮ ಚಿತ್ರದ ಹಾಡನ್ನು ಬಿಡುಗಡೆ ಮಾಡುವ ಮೂಲಕ ನಮಗೆ ಮತ್ತೊಮ್ಮೆ ಹರಸಿದ್ದಾರೆ’ ಎಂದು ಈ ಕುರಿತು ನಾಗಶೇಖರ್ ಹೇಳಿದ್ದಾರೆ.

ಶಿಡ್ಲಘಟ್ಟದ ರೇಷ್ಮೆ ಬೆಳೆಗಾರರ ವಿಷಯವನ್ನಿಟ್ಟುಕೊಂಡು ನವಿರಾದ ಪ್ರೇಮಕಥೆಯನ್ನು ನಿರ್ದೇಶಕ ನಾಗಶೇಖರ್ ಈ ಚಿತ್ರದಲ್ಲಿ ಹೇಳಲು ಪ್ರಯತ್ನಿಸಿದ್ದಾರಂತೆ. ಶಿಡ್ಲಘಟ್ಟದಲ್ಲಿ ಪ್ರಾರಂಭವಾಗುವ ಕಥೆ ಸ್ವಿಟ್ಜರ್ ಲ್ಯಾಂಡ್ ವರೆಗೂ ಹೋಗುತ್ತದಂತೆ. ಚಿತ್ರದಲ್ಲಿ ರೇಷ್ಮೆ ಬೆಳೆಗಾರ ಸಂಜು ಆಗಿ ಶ್ರೀನಗರ ಕಿಟ್ಟಿ ಕಾಣಿಸಿಕೊಂಡಿದ್ದು, ಗೀತಾ ಪಾತ್ರದಲ್ಲಿ ರಚಿತಾ ರಾಮ್ ಅಭಿನಯಿಸಿದ್ದಾರೆ.

ಪವಿತ್ರ ಇಂಟರ್ ನ್ಯಾಷನಲ್ ಮೂವೀ ಮೇಕರ್ಸ್ ಅಡಿಯಲ್ಲಿ ಛಲವಾದಿ ಕುಮಾರ್ ನಿರ್ಮಾಣದ ಈ ಚಿತ್ರದಲ್ಲಿ ರಂಗಾಯಣ ರಘು, ಸಾಧು ಕೋಕಿಲ, ತಬಲಾ ನಾಣಿ, ಸಂಪತ್ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣ ಮತ್ತು ಶ್ರೀಧರ್ ವಿ.ಸಂಭ್ರಮ್ ಸಂಗೀತ ಸಂಯೋಜನೆ ಇದೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

3 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

3 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

4 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

4 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

4 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

4 hours ago