ಚಿತ್ರ ಮಂಜರಿ

ಸನ್ನಿ ಡಿಯೋಲ್‌ ಬಂಗಲೆ ಹರಾಜು: ಒಂದೇ ದಿನದಲ್ಲಿ ನೋಟಿಸ್‌ ವಾಪಸ್‌ ಪಡೆದ ಬ್ಯಾಂಕ್‌ ಆಫ್‌ ಬರೋಡಾ

ಮುಂಬೈ: ಮುಂಬೈನ ಜುಹು ಪ್ರದೇಶದಲ್ಲಿರುವ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್‌ ಅವರ ಬಂಗಲೆಯ ಹರಾಜು ನೋಟಿಸ್‌ ವಾಪಸ್‌ ಪಡೆದುಕೊಳ್ಳಲಾಗಿದೆ ಎಂದು ಬ್ಯಾಂಕ್‌ ಆಫ್‌ ಬರೋಡಾ ಇಂದು ಹೇಳಿದೆ.

ಭಾನುವಾರ ಬ್ಯಾಂಕ್‌ ಇ-ಹರಾಜು ಮೂಲಕ ಸನ್ನಿ ಅವರ ಆಸ್ತಿಯನ್ನು ಆಗಸ್ಟ್‌ 25 ರಂದು ಹರಾಜು ಹಾಕಿ ಬಾಕಿಯಿರುವ ರೂ. 56 ಕೋಟಿ ಮೊತ್ತವನ್ನು ಈ ಮೂಲಕ ವಸೂಲು ಮಾಡಲಾಗುವುದು ಎಂದು ಹೇಳಿತ್ತು. ಗುರುದಾಸ್ಪುರ್‌ ಕ್ಷೇತ್ರದ ಸಂಸದರಾಗಿರುವ ಸನ್ನಿ ಡಿಯೋಲ್‌ ಡಿಸೆಂಬರ್‌ 2022ರಿಂದ ಬ್ಯಾಂಕ್‌ ಆಫ್‌ ಬರೋಡಾಗೆ ಅವರು ವಾಪಸ್‌ ನೀಡಬೇಕಿರುವ ರೂ 55.99 ಕೋಟಿ ನೀಡಿಲ್ಲ.

ಸನ್ನಿಯ ಬಂಗಲೆ- ಸನ್ನಿ ವಿಲ್ಲಾ ಹೊರತಾಗಿ ಅದರ ಸುತ್ತ ಇರುವ 599.44 ಚದರ ಮೀಟರ್‌ ಪ್ರದೇಶ ಹಾಗೂ ನಟನ ಕುಟುಂಬದ ಒಡೆತನದ ಸನ್ನಿ ಸೌಂಡ್ಸ್‌ ಕಂಪೆನಿಯನ್ನೂ ಹರಾಜು ಹಾಕಲಾಗುವುದು ಎಂದು ಬ್ಯಾಂಕ್‌ ಭಾನುವಾರ ಹೇಳಿತ್ತು. ಈ ಸಂಸ್ಥೆ ಸಾಲಕ್ಕೆ ಗ್ಯಾರೆಂಟರ್‌ ಆಗಿದ್ದರೆ ಸನ್ನಿ ಡಿಯೋಲ್‌ ತಂದೆ ಧರ್ಮೇಂದ್ರ ವೈಯಕ್ತಿಕ ಗ್ಯಾರಂಟರ್‌ ಆಗಿದ್ದರು.

ಆದರೆ ಇಂದು ಏಕಾಏಕಿ ಬ್ಯಾಂಕ್‌ ತಾಂತ್ರಿಕ ಕಾರಣಗಳನ್ನು ಮುಂದೊಡ್ಡಿ ಹರಾಜು ನೋಟಿಸ್‌ ವಾಪಸ್‌ ಪಡೆದಿದೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನೋಟಿಸ್‌ ವಾಪಸಾತಿಗೆ ಕಾರಣವಾದ ತಾಂತ್ರಿಕ ಸಮಸ್ಯೆಯನ್ನು ಯಾರು ಉಂಟು ಮಾಡಿದರು ಎಂದು ಪ್ರಶ್ನಿಸಿದೆ.

“ಬ್ಯಾಂಕ್‌ 24 ಗಂಟೆಗಳಿಗೂ ಕಡಿಮೆ ಅವಧಿಯಲ್ಲಿ ತನ್ನ ನೋಟಿಸ್‌ ವಾಪಸ್‌ ಪಡೆದಿರುವುದಕ್ಕೆ ಕಾರಣವೇನು” ಎಂದು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ಟ್ವೀಟ್‌ ಮಾಡಿದ್ದಾರೆ.

andolanait

Recent Posts

ಸಿಎಂ ರಾಜಕೀಯ ಕಾರ್ಯದರ್ಶಿ ವಜಾ : ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ : ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್‌ ಅಹಮ್ಮದ್‌ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್‌ ಜಾರಕಿಹೊಳಿ ಪ್ರತಿಕ್ರಿಯೆ…

24 mins ago

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌, ಸ್ಟವ್‌ ಪತ್ತೆ

ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್‌ ಸಿಲಿಂಡರ್‌ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…

2 hours ago

ತಮಿಳುನಾಡು ಚುನಾವಣೆ: ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ

ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್‍ಪಿಜಿ…

2 hours ago

ಮೈಸೂರು: ವಿನೂತನ ರೀತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಆಚರಣೆ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್‌ ಡಾ.ಬಿ.ಆರ್.‌ಅಂಬೇಡ್ಕರ್‌ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…

3 hours ago

ನಾಳೆ ಮಂಡ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…

4 hours ago

ದೇಶದ ಹಲವು ರಾಜ್ಯಗಳಲ್ಲಿ ಒಂದು ವಾರ ಹೆಚ್ಚಲಿದೆ ತಾಪಮಾನ

ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…

4 hours ago