ಚಿತ್ರ ಮಂಜರಿ

ಸನ್ನಿ ಡಿಯೋಲ್‌ ಬಂಗಲೆ ಹರಾಜು: ಒಂದೇ ದಿನದಲ್ಲಿ ನೋಟಿಸ್‌ ವಾಪಸ್‌ ಪಡೆದ ಬ್ಯಾಂಕ್‌ ಆಫ್‌ ಬರೋಡಾ

ಮುಂಬೈ: ಮುಂಬೈನ ಜುಹು ಪ್ರದೇಶದಲ್ಲಿರುವ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್‌ ಅವರ ಬಂಗಲೆಯ ಹರಾಜು ನೋಟಿಸ್‌ ವಾಪಸ್‌ ಪಡೆದುಕೊಳ್ಳಲಾಗಿದೆ ಎಂದು ಬ್ಯಾಂಕ್‌ ಆಫ್‌ ಬರೋಡಾ ಇಂದು ಹೇಳಿದೆ.

ಭಾನುವಾರ ಬ್ಯಾಂಕ್‌ ಇ-ಹರಾಜು ಮೂಲಕ ಸನ್ನಿ ಅವರ ಆಸ್ತಿಯನ್ನು ಆಗಸ್ಟ್‌ 25 ರಂದು ಹರಾಜು ಹಾಕಿ ಬಾಕಿಯಿರುವ ರೂ. 56 ಕೋಟಿ ಮೊತ್ತವನ್ನು ಈ ಮೂಲಕ ವಸೂಲು ಮಾಡಲಾಗುವುದು ಎಂದು ಹೇಳಿತ್ತು. ಗುರುದಾಸ್ಪುರ್‌ ಕ್ಷೇತ್ರದ ಸಂಸದರಾಗಿರುವ ಸನ್ನಿ ಡಿಯೋಲ್‌ ಡಿಸೆಂಬರ್‌ 2022ರಿಂದ ಬ್ಯಾಂಕ್‌ ಆಫ್‌ ಬರೋಡಾಗೆ ಅವರು ವಾಪಸ್‌ ನೀಡಬೇಕಿರುವ ರೂ 55.99 ಕೋಟಿ ನೀಡಿಲ್ಲ.

ಸನ್ನಿಯ ಬಂಗಲೆ- ಸನ್ನಿ ವಿಲ್ಲಾ ಹೊರತಾಗಿ ಅದರ ಸುತ್ತ ಇರುವ 599.44 ಚದರ ಮೀಟರ್‌ ಪ್ರದೇಶ ಹಾಗೂ ನಟನ ಕುಟುಂಬದ ಒಡೆತನದ ಸನ್ನಿ ಸೌಂಡ್ಸ್‌ ಕಂಪೆನಿಯನ್ನೂ ಹರಾಜು ಹಾಕಲಾಗುವುದು ಎಂದು ಬ್ಯಾಂಕ್‌ ಭಾನುವಾರ ಹೇಳಿತ್ತು. ಈ ಸಂಸ್ಥೆ ಸಾಲಕ್ಕೆ ಗ್ಯಾರೆಂಟರ್‌ ಆಗಿದ್ದರೆ ಸನ್ನಿ ಡಿಯೋಲ್‌ ತಂದೆ ಧರ್ಮೇಂದ್ರ ವೈಯಕ್ತಿಕ ಗ್ಯಾರಂಟರ್‌ ಆಗಿದ್ದರು.

ಆದರೆ ಇಂದು ಏಕಾಏಕಿ ಬ್ಯಾಂಕ್‌ ತಾಂತ್ರಿಕ ಕಾರಣಗಳನ್ನು ಮುಂದೊಡ್ಡಿ ಹರಾಜು ನೋಟಿಸ್‌ ವಾಪಸ್‌ ಪಡೆದಿದೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನೋಟಿಸ್‌ ವಾಪಸಾತಿಗೆ ಕಾರಣವಾದ ತಾಂತ್ರಿಕ ಸಮಸ್ಯೆಯನ್ನು ಯಾರು ಉಂಟು ಮಾಡಿದರು ಎಂದು ಪ್ರಶ್ನಿಸಿದೆ.

“ಬ್ಯಾಂಕ್‌ 24 ಗಂಟೆಗಳಿಗೂ ಕಡಿಮೆ ಅವಧಿಯಲ್ಲಿ ತನ್ನ ನೋಟಿಸ್‌ ವಾಪಸ್‌ ಪಡೆದಿರುವುದಕ್ಕೆ ಕಾರಣವೇನು” ಎಂದು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ಟ್ವೀಟ್‌ ಮಾಡಿದ್ದಾರೆ.

andolanait

Recent Posts

ಟಿ-20 ವಿಶ್ವಕಪ್‌ | ಸ್ಕಾಟ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ 5 ವಿಕೆಟ್‌ ಗೆಲುವು

ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ…

5 hours ago

ಡಿಕೆಶಿ ಮುಖ್ಯಮಂತ್ರಿ ಆಗೇ ಆಗ್ತರೆ : ಶಾಸಕ ಗಣಿಗ ರವಿಕುಮಾರ್‌

ಮಂಡ್ಯ: ಡಿ.ಕೆ. ಶಿವಕುಮಾರ್ ಅವರು ಅತಿ ಶೀಘ್ರದಲ್ಲೇ ಮುಖ್ಯಮಂತ್ರಿ ಆಗೇ ಆಗುತ್ತಾರೆ. ಇದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪಿ.ರವಿಕುಮಾರ್‌…

5 hours ago

ಮೈಸೂರು | ಶಿವರಾತ್ರಿಗೆ ಎಲ್ಲೆಡೆ ಸಿದ್ಧತೆ

ಮೈಸೂರು : ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಮಹಾ ಶಿವರಾತ್ರಿ ಆಚರಣೆಗೆ ಶಿವ ದೇವಾಲಯಗಳು ಸಂಪೂರ್ಣ ಸಜ್ಜಾಗಿವೆ. ನಗರದ ಪ್ರಮುಖ…

5 hours ago

ಮೈಸೂರು | 4 ಲಕ್ಷ ಮೌಲ್ಯದ ಡ್ರಗ್ಸ್ ವಶ‌ ; ಆರೋಪಿ ಬಂಧನ

ಮೈಸೂರು : ನಗರದಲ್ಲಿ ಅಕ್ರಮ ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದ ವಿರುದ್ಧ ಮಂಡಿ ಪೊಲೀಸ್ ಠಾಣಾ ಅಧಿಕಾರಿಗಳು ನಡೆಸಿದ…

5 hours ago

2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ; ಕಂದಾಯ ಇಲಾಖೆಯಲ್ಲಿ ಕ್ರಾಂತಿಕಾರಿ ಪ್ರಗತಿ : ಸಿಎಂ ಮೆಚ್ಚುಗೆ

ಹಾವೇರಿ : ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ…

7 hours ago

ರಾಜ್ಯದ 22 ಸಾವಿರಕ್ಕೂ ಹೆಚ್ಚು ರೈತರಿಗೆ ಪಿಎಂ-ಕಿಸಾನ್ ಹಣ ಬಿಡುಗಡೆ

​ಬೆಂಗಳೂರು : ಕರ್ನಾಟಕದ ಸಾವಿರಾರು ರೈತರಿಗೆ ಪಿಎಂ-ಕಿಸಾನ್ ಯೋಜನೆಯಡಿ ಬಾಕಿ ಉಳಿದಿದ್ದ ಹಣವನ್ನು ಬಿಡುಗಡೆ ಮಾಡುವಂತೆ ಕೃಷಿ ಸಚಿವ ಚಲುವರಾಯಸ್ವಾಮಿ…

8 hours ago