ಚಿತ್ರ ಮಂಜರಿ

ಸನ್ನಿ ಡಿಯೋಲ್‌ ಬಂಗಲೆ ಹರಾಜು: ಒಂದೇ ದಿನದಲ್ಲಿ ನೋಟಿಸ್‌ ವಾಪಸ್‌ ಪಡೆದ ಬ್ಯಾಂಕ್‌ ಆಫ್‌ ಬರೋಡಾ

ಮುಂಬೈ: ಮುಂಬೈನ ಜುಹು ಪ್ರದೇಶದಲ್ಲಿರುವ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್‌ ಅವರ ಬಂಗಲೆಯ ಹರಾಜು ನೋಟಿಸ್‌ ವಾಪಸ್‌ ಪಡೆದುಕೊಳ್ಳಲಾಗಿದೆ ಎಂದು ಬ್ಯಾಂಕ್‌ ಆಫ್‌ ಬರೋಡಾ ಇಂದು ಹೇಳಿದೆ.

ಭಾನುವಾರ ಬ್ಯಾಂಕ್‌ ಇ-ಹರಾಜು ಮೂಲಕ ಸನ್ನಿ ಅವರ ಆಸ್ತಿಯನ್ನು ಆಗಸ್ಟ್‌ 25 ರಂದು ಹರಾಜು ಹಾಕಿ ಬಾಕಿಯಿರುವ ರೂ. 56 ಕೋಟಿ ಮೊತ್ತವನ್ನು ಈ ಮೂಲಕ ವಸೂಲು ಮಾಡಲಾಗುವುದು ಎಂದು ಹೇಳಿತ್ತು. ಗುರುದಾಸ್ಪುರ್‌ ಕ್ಷೇತ್ರದ ಸಂಸದರಾಗಿರುವ ಸನ್ನಿ ಡಿಯೋಲ್‌ ಡಿಸೆಂಬರ್‌ 2022ರಿಂದ ಬ್ಯಾಂಕ್‌ ಆಫ್‌ ಬರೋಡಾಗೆ ಅವರು ವಾಪಸ್‌ ನೀಡಬೇಕಿರುವ ರೂ 55.99 ಕೋಟಿ ನೀಡಿಲ್ಲ.

ಸನ್ನಿಯ ಬಂಗಲೆ- ಸನ್ನಿ ವಿಲ್ಲಾ ಹೊರತಾಗಿ ಅದರ ಸುತ್ತ ಇರುವ 599.44 ಚದರ ಮೀಟರ್‌ ಪ್ರದೇಶ ಹಾಗೂ ನಟನ ಕುಟುಂಬದ ಒಡೆತನದ ಸನ್ನಿ ಸೌಂಡ್ಸ್‌ ಕಂಪೆನಿಯನ್ನೂ ಹರಾಜು ಹಾಕಲಾಗುವುದು ಎಂದು ಬ್ಯಾಂಕ್‌ ಭಾನುವಾರ ಹೇಳಿತ್ತು. ಈ ಸಂಸ್ಥೆ ಸಾಲಕ್ಕೆ ಗ್ಯಾರೆಂಟರ್‌ ಆಗಿದ್ದರೆ ಸನ್ನಿ ಡಿಯೋಲ್‌ ತಂದೆ ಧರ್ಮೇಂದ್ರ ವೈಯಕ್ತಿಕ ಗ್ಯಾರಂಟರ್‌ ಆಗಿದ್ದರು.

ಆದರೆ ಇಂದು ಏಕಾಏಕಿ ಬ್ಯಾಂಕ್‌ ತಾಂತ್ರಿಕ ಕಾರಣಗಳನ್ನು ಮುಂದೊಡ್ಡಿ ಹರಾಜು ನೋಟಿಸ್‌ ವಾಪಸ್‌ ಪಡೆದಿದೆ.

ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನೋಟಿಸ್‌ ವಾಪಸಾತಿಗೆ ಕಾರಣವಾದ ತಾಂತ್ರಿಕ ಸಮಸ್ಯೆಯನ್ನು ಯಾರು ಉಂಟು ಮಾಡಿದರು ಎಂದು ಪ್ರಶ್ನಿಸಿದೆ.

“ಬ್ಯಾಂಕ್‌ 24 ಗಂಟೆಗಳಿಗೂ ಕಡಿಮೆ ಅವಧಿಯಲ್ಲಿ ತನ್ನ ನೋಟಿಸ್‌ ವಾಪಸ್‌ ಪಡೆದಿರುವುದಕ್ಕೆ ಕಾರಣವೇನು” ಎಂದು ಪ್ರಶ್ನಿಸಿ ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ಟ್ವೀಟ್‌ ಮಾಡಿದ್ದಾರೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

4 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

9 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

9 hours ago