ಮುಂಬೈ: ಮುಂಬೈನ ಜುಹು ಪ್ರದೇಶದಲ್ಲಿರುವ ನಟ, ಬಿಜೆಪಿ ಸಂಸದ ಸನ್ನಿ ಡಿಯೋಲ್ ಅವರ ಬಂಗಲೆಯ ಹರಾಜು ನೋಟಿಸ್ ವಾಪಸ್ ಪಡೆದುಕೊಳ್ಳಲಾಗಿದೆ ಎಂದು ಬ್ಯಾಂಕ್ ಆಫ್ ಬರೋಡಾ ಇಂದು ಹೇಳಿದೆ.
ಭಾನುವಾರ ಬ್ಯಾಂಕ್ ಇ-ಹರಾಜು ಮೂಲಕ ಸನ್ನಿ ಅವರ ಆಸ್ತಿಯನ್ನು ಆಗಸ್ಟ್ 25 ರಂದು ಹರಾಜು ಹಾಕಿ ಬಾಕಿಯಿರುವ ರೂ. 56 ಕೋಟಿ ಮೊತ್ತವನ್ನು ಈ ಮೂಲಕ ವಸೂಲು ಮಾಡಲಾಗುವುದು ಎಂದು ಹೇಳಿತ್ತು. ಗುರುದಾಸ್ಪುರ್ ಕ್ಷೇತ್ರದ ಸಂಸದರಾಗಿರುವ ಸನ್ನಿ ಡಿಯೋಲ್ ಡಿಸೆಂಬರ್ 2022ರಿಂದ ಬ್ಯಾಂಕ್ ಆಫ್ ಬರೋಡಾಗೆ ಅವರು ವಾಪಸ್ ನೀಡಬೇಕಿರುವ ರೂ 55.99 ಕೋಟಿ ನೀಡಿಲ್ಲ.
ಸನ್ನಿಯ ಬಂಗಲೆ- ಸನ್ನಿ ವಿಲ್ಲಾ ಹೊರತಾಗಿ ಅದರ ಸುತ್ತ ಇರುವ 599.44 ಚದರ ಮೀಟರ್ ಪ್ರದೇಶ ಹಾಗೂ ನಟನ ಕುಟುಂಬದ ಒಡೆತನದ ಸನ್ನಿ ಸೌಂಡ್ಸ್ ಕಂಪೆನಿಯನ್ನೂ ಹರಾಜು ಹಾಕಲಾಗುವುದು ಎಂದು ಬ್ಯಾಂಕ್ ಭಾನುವಾರ ಹೇಳಿತ್ತು. ಈ ಸಂಸ್ಥೆ ಸಾಲಕ್ಕೆ ಗ್ಯಾರೆಂಟರ್ ಆಗಿದ್ದರೆ ಸನ್ನಿ ಡಿಯೋಲ್ ತಂದೆ ಧರ್ಮೇಂದ್ರ ವೈಯಕ್ತಿಕ ಗ್ಯಾರಂಟರ್ ಆಗಿದ್ದರು.
ಆದರೆ ಇಂದು ಏಕಾಏಕಿ ಬ್ಯಾಂಕ್ ತಾಂತ್ರಿಕ ಕಾರಣಗಳನ್ನು ಮುಂದೊಡ್ಡಿ ಹರಾಜು ನೋಟಿಸ್ ವಾಪಸ್ ಪಡೆದಿದೆ.
ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್ ನೋಟಿಸ್ ವಾಪಸಾತಿಗೆ ಕಾರಣವಾದ ತಾಂತ್ರಿಕ ಸಮಸ್ಯೆಯನ್ನು ಯಾರು ಉಂಟು ಮಾಡಿದರು ಎಂದು ಪ್ರಶ್ನಿಸಿದೆ.
“ಬ್ಯಾಂಕ್ 24 ಗಂಟೆಗಳಿಗೂ ಕಡಿಮೆ ಅವಧಿಯಲ್ಲಿ ತನ್ನ ನೋಟಿಸ್ ವಾಪಸ್ ಪಡೆದಿರುವುದಕ್ಕೆ ಕಾರಣವೇನು” ಎಂದು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಜೈರಾಂ ರಮೇಶ್ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…