ಚಿತ್ರ ಮಂಜರಿ

ನಟನೆಗೆ ಗುಡ್ ಬೈ ಹೇಳುತ್ತಾರಂತೆ ಸೂಪರ್ ಸ್ಟಾರ್ ರಜನಿಕಾಂತ್

ಚನೈ : ಸೂಪರ್ ಸ್ಟಾರ್ ರಜನಿಕಾಂತ್ ಸದ್ಯ ಜೈಲರ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಜೈಲರ್ ಸಿನಿಮಾದಲ್ಲಿ ಬೇರೆ ಬೇರೆ ಭಾಷೆಯ ಸ್ಟಾರ್ಸ್ ಕೂಡ ನಟಿಸಿದ್ದಾರೆ. ಕನ್ನಡದ ಸ್ಟಾರ್ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೈಲರ್ ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ರಜನಿಕಾಂತ್ ಜೊತೆ ನಟಿಸುತ್ತಿದ್ದಾರೆ. ಈಗಾಗಲೇ ಟೀಸರ್ ರಿಲೀಸ್ ಆಗಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸೂಪರ್ ಸ್ಟಾರ್ ಅವರನ್ನು ಮತ್ತೆ ತೆರೆಮೇಲೆ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಈ ನಡುವೆ ರಜನಿಕಾಂತ್ ಕಡೆಯಿಂದ ಬೇಸರ ಸುದ್ದಿ ವೈರಲ್ ಆಗಿದೆ. ತಲೈವಾ ನಟನೆಗೆ ಗುಡ್ ಬೈ ಹೇಳುತ್ತಿದ್ದಾರೆ ಎನ್ನುವ ಮಾತು ಕೇಳಿಬರುತ್ತಿದೆ.

ರಜನಿಕಾಂತ್ ಜೈಲರ್ ಸಿನಿಮಾ ಬಳಿಕ ಖ್ಯಾತ ನಿರ್ದೇಶಕ ಲೋಕೇಶ್ ಕನಗರಾಜ್ ಸಾರಥ್ಯ ಮೂಡಿ ಬರುತ್ತಿರುವ ಹೊಸ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಲೋಕೇಶ್ ಕನಗರಾಜ್ ಸಿನಿಮಾ ಬಳಿಕ ರಜನಿಕಾಂತ್ ನಿವೃತ್ತಿ ಪಡೆಯುತ್ತಿದ್ದಾರೆ ಎನ್ನುವ ಸುದ್ದಿ ತಮಿಳು ಸಿನಿಮಾರಂಗದಲ್ಲಿ ವೈರಲ್ ಆಗಿದೆ. ಅಂದಹಾಗೆ ರಜನಿಕಾಂತ್ ಬಗ್ಗೆ ಈ ರೀತಿಯ ಸುದ್ದಿ ವೈರಲ್ ಆಗಲು ಕಾರಣವಾಗಿದ್ದು ನಿರ್ದೇಶಕ ಮಿಸ್ಕಿನ್ ಹೇಳಿದ ಮಾತು. ಲೋಕೇಶ್ ಕನಗರಾಜ್ ಅವರ ಜೊತೆಗಿನ ಸಿನಿಮಾವೇ ರಜನಿಕಾಂತ್ ಅವರ ಕೊನೆಯ ಸಿನಿಮಾ ಆಗಲಿದೆ ಎಂದು ಹೇಳಿದ್ದಾರೆ. ಈ ಮಾತು ಈಗ ಸಂಚಲನ ಸೃಷ್ಟಿ ಮಾಡಿದೆ.

ನಿರ್ದೇಶಕ ಮಿಸ್ಕಿನ್ ಹೇಳಿದ ಮಾತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಆದರೆ ರಜನಿಕಾಂತ್ ಅಭಿಮಾನಿಗಳು ಇದನ್ನು ನಂಬಲು ರೆಡಿ ಇಲ್ಲ. ಸೂಪರ್ ಸ್ಟಾರ್ ಅವರನ್ನು ತೆರೆಮೇಲೆ ನೋಡದೆ ಇರಲು ಅಭಿಮಾನಿಗಳಿಗೆ ಸಾಧ್ಯನೆ ಇಲ್ಲ. ಹಾಗಾಗಿ ಇದು ಸುಳ್ಳು ಸುದ್ದಿ ಎಂದು ಹೇಳುತ್ತಿದ್ದಾರೆ. ರಜನಿಕಾಂತ್ ಇಂಥ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಭಿಮಾನಿಗಳು ಮಾದಿಸುತ್ತಿದ್ದಾರೆ. ಅಲ್ಲದೆ ಇಂಥ ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡುತ್ತಿದ್ದಾರೆ. ಸ್ವತಃ ರಜನಿಕಾಂತ್ ಅವರೇ ಹೇಳುವವರೆಗೂ ಇದನ್ನೆಲ್ಲ ನಂಬಲ್ಲ ಎಂದು ಹೇಳುತ್ತಿದ್ದಾರೆ.

ನಟ ರಜನಿಕಾಂತ್ 171ನೇ ಸಿನಿಮಾಗೆ ಲೋಕೇಶ್ ಕಗರಾಜ್ ಆಕ್ಷನ್ ಕಟ್ ಹೇಳುತ್ತಿದ್ದಾರೆ ಎಂದು ಮಿಸ್ಕಿನ್ ಹೇಳಿದ್ದಾರೆ. 72 ವರ್ಷ ನಟ ಸೂಪರ್‌ಸ್ಟಾರ್ ಅವರ ಮುಂದಿನ ಚಿತ್ರ ಜೈಲರ್ ಆಗಸ್ಟ್ 10ಕ್ಕೆ ರಿಲೀಸ್ ಆಗುತ್ತಿದೆ. ನೆಲ್ಸನ್ ದಿಲೀಪ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾ ಜೊತೆಗೆ ಮಗಳು ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ ಸಿನಿಮಾದಲ್ಲೂ ನಟಿಸಿದ್ದು ವಿಭಿನ್ನ ಗೆಟಪ್ ನಲ್ಲಿ ರಜನಿಕಾಂತ್ ಮೋಡಿ ಮಾಡಿದ್ದಾರೆ.

lokesh

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

7 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

7 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

7 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

7 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

7 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

7 hours ago