ಲಕ್ನೋ : ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್’ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾವು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ.
ಈಗಾಗಲೇ 400 ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಆಗಿದ್ದು, ಹಳೆಯ ದಾಖಲೆಗಳನ್ನೆಲ್ಲ ಬ್ರೇಕ್ ಮಾಡಿ, ಹೊಸ ದಾಖಲೆಗಳನ್ನು ಈ ಸಿನಿಮಾ ಸೃಷ್ಟಿಸಿದೆ. ಈ ಮಧ್ಯೆ ನಟ ರಜನಿಕಾಂತ್ ಅವರು ಲಖನೌಗೆ ಭೇಟಿ ನೀಡಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಜೊತೆಗೆ ‘ಜೈಲರ್’ ಸಿನಿಮಾವನ್ನು ವೀಕ್ಷಣೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.
ಲಖನೌ ಏರ್ಪೋರ್ಟ್ಗೆ ಬಂದ ನಂತರ ಪ್ರತಿಕ್ರಿಯೆ ನೀಡಿರುವ ನಟ ರಜನಿಕಾಂತ್, ‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ನನ್ನ ಸಿನಿಮಾವನ್ನು ವೀಕ್ಷಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ. ಜೊತೆಗೆ ‘ಜೈಲರ್’ ಸಿನಿಮಾವು ಇಷ್ಟೊಂದು ದೊಡ್ಡ ಯಶಸ್ಸು ಪಡೆದುಕೊಂಡಿರುವುದರ ಬಗ್ಗೆಯೂ ಪ್ರತಿಕ್ರಿಯಿಸಿರುವ ಅವರು, ‘ಎಲ್ಲ ದೇವರ ಆಶೀರ್ವಾದ..’ ಎಂದಿದ್ದಾರೆ.
ಅಂದಹಾಗೆ, ಉತ್ತರ ಪ್ರದೇಶದಲ್ಲಿ ರಜನಿಕಾಂತ್ ಅವರು ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲಿನ ಹಲವು ಧಾರ್ಮಿಕ ಕ್ಷೇತ್ರಗಳಿಗೆ ರಜನಿ ಭೇಟಿ ನೀಡಲಿದ್ದಾರೆ. ಎರಡು ವರ್ಷದ ಬಳಿಕ ಬೆಳ್ಳಿತೆರೆಗೆ ಕಮ್ಬ್ಯಾಕ್ ಮಾಡಿದ ತಲೈವಾ ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಬೆಂಗಳೂರು ಸೇರಿದಂತೆ ದೇಶದ ಎಲ್ಲೆಡೆ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…