ಚಿತ್ರ ಮಂಜರಿ

ಸಿಎಂ ಯೋಗಿ ಆದಿತ್ಯನಾಥ ಜೊತೆ ಜೈಲರ್‌ ವೀಕ್ಷಿಸಿದ ಸೂಪರ್‌ ಸ್ಟಾರ್‌

ಲಕ್ನೋ : ಸೂಪರ್ ಸ್ಟಾರ್ ರಜನಿಕಾಂತ್ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ‘ಜೈಲರ್’ ಚಿತ್ರ ವೀಕ್ಷಿಸಲಿದ್ದಾರೆ. ಸೂಪರ್ ಸ್ಟಾರ್’ ರಜನಿಕಾಂತ್ ಅಭಿನಯದ ‘ಜೈಲರ್’ ಸಿನಿಮಾವು ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿದೆ.

ಈಗಾಗಲೇ 400 ಕೋಟಿ ರೂಪಾಯಿಗಳಿಗೂ ಅಧಿಕ ಗಳಿಕೆ ಆಗಿದ್ದು, ಹಳೆಯ ದಾಖಲೆಗಳನ್ನೆಲ್ಲ ಬ್ರೇಕ್ ಮಾಡಿ, ಹೊಸ ದಾಖಲೆಗಳನ್ನು ಈ ಸಿನಿಮಾ ಸೃಷ್ಟಿಸಿದೆ. ಈ ಮಧ್ಯೆ ನಟ ರಜನಿಕಾಂತ್ ಅವರು ಲಖನೌಗೆ ಭೇಟಿ ನೀಡಿದ್ದು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಜೊತೆಗೆ ‘ಜೈಲರ್’ ಸಿನಿಮಾವನ್ನು ವೀಕ್ಷಣೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ.

ಲಖನೌ ಏರ್‌ಪೋರ್ಟ್‌ಗೆ ಬಂದ ನಂತರ ಪ್ರತಿಕ್ರಿಯೆ ನೀಡಿರುವ ನಟ ರಜನಿಕಾಂತ್, ‘ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ನನ್ನ ಸಿನಿಮಾವನ್ನು ವೀಕ್ಷಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ. ಜೊತೆಗೆ ‘ಜೈಲರ್‌’ ಸಿನಿಮಾವು ಇಷ್ಟೊಂದು ದೊಡ್ಡ ಯಶಸ್ಸು ಪಡೆದುಕೊಂಡಿರುವುದರ ಬಗ್ಗೆಯೂ ಪ್ರತಿಕ್ರಿಯಿಸಿರುವ ಅವರು, ‘ಎಲ್ಲ ದೇವರ ಆಶೀರ್ವಾದ..’ ಎಂದಿದ್ದಾರೆ.

ಅಂದಹಾಗೆ, ಉತ್ತರ ಪ್ರದೇಶದಲ್ಲಿ ರಜನಿಕಾಂತ್ ಅವರು ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಅಲ್ಲಿನ ಹಲವು ಧಾರ್ಮಿಕ ಕ್ಷೇತ್ರಗಳಿಗೆ ರಜನಿ ಭೇಟಿ ನೀಡಲಿದ್ದಾರೆ. ಎರಡು ವರ್ಷದ ಬಳಿಕ ಬೆಳ್ಳಿತೆರೆಗೆ ಕಮ್‌ಬ್ಯಾಕ್‌ ಮಾಡಿದ ತಲೈವಾ ಸಿನಿಮಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರು. ಬೆಂಗಳೂರು ಸೇರಿದಂತೆ ದೇಶದ ಎಲ್ಲೆಡೆ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

andolanait

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago