ಚಿತ್ರ ಮಂಜರಿ

ಹೊಸ ಬಾಳಿಗೆ ಕಾಲಿಟ್ಟ ಸುಶ್ಮಿತಾ ಜಗ್ಗಪ್ಪ

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಮಜಾ ಭಾರತ ಖ್ಯಾತಿಯ ಸುಶ್ಮಿತಾ ಜಗ್ಗಪ್ಪ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರೀಲ್ ನಲ್ಲಿ ಗಂಡ ಹೆಂಡತಿಯಾಗಿ ನಟಿಸುತ್ತಿದ್ದ ಈ ಜೋಡಿ ಇದೀಗ ನಿಜ ಜೀವನದಲ್ಲೂ ಸತಿಪತಿಗಳಾಗಿದ್ದಾರೆ.

ನೆನ್ನೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಸಿಂಧೂರ ಕನ್ವೆನ್ಷನ್ ಹಾಲ್ ನಲ್ಲಿ ಬಂಧು ಬಾಂಧವರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.

ಸುಶ್ಮಿತಾ ಜಗ್ಗಪ್ಪ ಮದುವೆಗೆ ನಟ ರವಿಚಂದ್ರನ್, ಪ್ರಜ್ವಲ್ ದೇವರಾಜ್, ನಿರಂಜನ್ ದೇಶಪಾಂಡೆ ದಂಪತಿ, ಮಂಜು ಪಾವಗಡ, ಶೃತಿ ಪುತ್ರಿ ಗೌರಿ, ಮಜಾ ಭಾರತ ತಂಡ ಸೇರಿದಂತೆ, ಕಿರುತೆರೆ ಹಾಗೂ ಬೆಳ್ಳಿತೆರೆಯ ಹಲವಾರು ನಟ ನಟಿಯರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದರು.

ಇತ್ತೀಚಿಗೆ ಸುಶ್ಮಿತ ಹಾಗೂ ಜಗ್ಗಪ್ಪ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವೇಳೆ ಜಗಪ್ಪ, ಸುಶ್ಮಿತಾ ಅವರಿಗೆ ಐದು ಗುಲಾಬಿಗಳನ್ನು ಹಿಡಿದುಕೊಂಡು ಒಂದೊಂದಾಗಿ ನೀಡುವ ಮೂಲಕ ಪ್ರಪೋಸ್ ಮಾಡಿದ್ದರು.

ಸುಶ್ಮಿತಾ ಹಾಗು ಜಗ್ಗಪ್ಪ ಜೋಡಿ ಜೊತೆಯಾಗಿ ಒಂದೇ ವೇದಿಕೆಯಲ್ಲಿ ಅನೇಕ ಸಲ ಗಂಡ ಹೆಂಡತಿ ಪಾತ್ರ ಮಾಡಿದ್ದಾರೆ. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರು ಕೂಡ ಪರಸ್ಪರ ಪ್ರೀತಿಸುತ್ತಿರುವುದು ಎಲ್ಲರಿಗೂ ತಿಳಿದಿತ್ತು. ಜೀ ಕನ್ನಡ ವಾಹಿನಿಯ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮದಲ್ಲಿ ಸುಶ್ಮಿತಾ ಜಗಪ್ಪ ಅವರಿಗೆ ವಿಭಿನ್ನವಾಗಿ ಪ್ರಪೋಸ್ ಮಾಡಿ ಗಮನ ಸೆಳೆದಿದ್ದರು.

ನವೆಂಬರ್ 18ರಂದು ಈ ಜೋಡಿಯ ಮೆಹಂದಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆದಿತ್ತು ಮೆಹಂದಿ ಕಾರ್ಯಕ್ರಮದ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರೂ ಕೂಡ ಮ್ಯಾಚಿಂಗ್ ಡ್ರೆಸ್ ತೊಟ್ಟು ಮಿಂಚಿದ್ದರು.

lokesh

Recent Posts

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

18 mins ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

31 mins ago

ಮೆಟ್ರೋ ದರ ಹೆಚ್ಚಳ ವಿಚಾರ: ಚೇರ್ಮನ್‌ ಜೊತೆ ಮಾತುಕತೆ ನಡೆಸುತ್ತೇನೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌

ಮಂಗಳೂರು: ಮೆಟ್ರೋ ದರ ಶೇಕಡಾ.5ರಷ್ಟು ಹೆಚ್ಚಳ ಸಂಬಂಧ ಇಂದು ಅಥವಾ ನಾಳೆ ಮೆಟ್ರೋ ಚೇರ್ಮನ್‌ ಜೊತೆ ಮಾತನಾಡುವೆ ಎಂದು ಡಿಸಿಎಂ…

46 mins ago

ಮೈಸೂರು: 140 ಕೋಟಿ ಮೌಲ್ಯದ ಜಾಗ ಅತಿಕ್ರಮಣ ತೆರವು ಕಾರ್ಯಾಚರಣೆ

ಮೈಸೂರು: ವಿಜಯನಗರ 3ನೇ ಹಂತದಲ್ಲಿನ ಸುಮಾರು 7 ಎಕರೆ ಜಾಗದ ಅತಿಕ್ರಮಣ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ಮುಂಜಾನೆ ನಡೆಯಿತು.…

1 hour ago

ದ್ವಿಚಕ್ರ ವಾಹನ ಮತ್ತು ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ನಂಜನಗೂಡು: ದ್ವಿಚಕ್ರ ವಾಹನ ಹಾಗೂ ಗೊಬ್ಬರದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

2 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

5 hours ago