ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಮಜಾ ಭಾರತ ಖ್ಯಾತಿಯ ಸುಶ್ಮಿತಾ ಜಗ್ಗಪ್ಪ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರೀಲ್ ನಲ್ಲಿ ಗಂಡ ಹೆಂಡತಿಯಾಗಿ ನಟಿಸುತ್ತಿದ್ದ ಈ ಜೋಡಿ ಇದೀಗ ನಿಜ ಜೀವನದಲ್ಲೂ ಸತಿಪತಿಗಳಾಗಿದ್ದಾರೆ.
ನೆನ್ನೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಸಿಂಧೂರ ಕನ್ವೆನ್ಷನ್ ಹಾಲ್ ನಲ್ಲಿ ಬಂಧು ಬಾಂಧವರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.
ಸುಶ್ಮಿತಾ ಜಗ್ಗಪ್ಪ ಮದುವೆಗೆ ನಟ ರವಿಚಂದ್ರನ್, ಪ್ರಜ್ವಲ್ ದೇವರಾಜ್, ನಿರಂಜನ್ ದೇಶಪಾಂಡೆ ದಂಪತಿ, ಮಂಜು ಪಾವಗಡ, ಶೃತಿ ಪುತ್ರಿ ಗೌರಿ, ಮಜಾ ಭಾರತ ತಂಡ ಸೇರಿದಂತೆ, ಕಿರುತೆರೆ ಹಾಗೂ ಬೆಳ್ಳಿತೆರೆಯ ಹಲವಾರು ನಟ ನಟಿಯರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದರು.
ಇತ್ತೀಚಿಗೆ ಸುಶ್ಮಿತ ಹಾಗೂ ಜಗ್ಗಪ್ಪ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವೇಳೆ ಜಗಪ್ಪ, ಸುಶ್ಮಿತಾ ಅವರಿಗೆ ಐದು ಗುಲಾಬಿಗಳನ್ನು ಹಿಡಿದುಕೊಂಡು ಒಂದೊಂದಾಗಿ ನೀಡುವ ಮೂಲಕ ಪ್ರಪೋಸ್ ಮಾಡಿದ್ದರು.
ಸುಶ್ಮಿತಾ ಹಾಗು ಜಗ್ಗಪ್ಪ ಜೋಡಿ ಜೊತೆಯಾಗಿ ಒಂದೇ ವೇದಿಕೆಯಲ್ಲಿ ಅನೇಕ ಸಲ ಗಂಡ ಹೆಂಡತಿ ಪಾತ್ರ ಮಾಡಿದ್ದಾರೆ. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರು ಕೂಡ ಪರಸ್ಪರ ಪ್ರೀತಿಸುತ್ತಿರುವುದು ಎಲ್ಲರಿಗೂ ತಿಳಿದಿತ್ತು. ಜೀ ಕನ್ನಡ ವಾಹಿನಿಯ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮದಲ್ಲಿ ಸುಶ್ಮಿತಾ ಜಗಪ್ಪ ಅವರಿಗೆ ವಿಭಿನ್ನವಾಗಿ ಪ್ರಪೋಸ್ ಮಾಡಿ ಗಮನ ಸೆಳೆದಿದ್ದರು.
ನವೆಂಬರ್ 18ರಂದು ಈ ಜೋಡಿಯ ಮೆಹಂದಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆದಿತ್ತು ಮೆಹಂದಿ ಕಾರ್ಯಕ್ರಮದ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರೂ ಕೂಡ ಮ್ಯಾಚಿಂಗ್ ಡ್ರೆಸ್ ತೊಟ್ಟು ಮಿಂಚಿದ್ದರು.
ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…
ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…
ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…
ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…
ಬೀಗ ಹಾಕಿದ್ದ ಮನೆಗಳೇ ಕಳ್ಳರ ಟಾರ್ಗೆಟ್, ಲಾಕರ್ಗಳನ್ನು ಒಡೆದು ನಗ,ನಾಣ್ಯ ದೋಚಿದ ದುಷ್ಕರ್ಮಿಗಳು ಮೇಲುಕೋಟೆ: ಇಲ್ಲಿನ ಒಕ್ಕಲಿಗರ ಬೀದಿಯ ಸುತ್ತಮುತ್ತಲ…
ದಾ. ರಾ. ಮಹೇಶ್ ವೀರನಹೊಸಹಳ್ಳಿ: ಮೂರು ದಿನಗಳಿಂದ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡನ್ನು ಓಡಿಸಲು ಹೋದ ಜನರ ಗುಂಪನ್ನೇ ಆನೆಗಳು…