ಚಿತ್ರ ಮಂಜರಿ

ಹೊಸ ಬಾಳಿಗೆ ಕಾಲಿಟ್ಟ ಸುಶ್ಮಿತಾ ಜಗ್ಗಪ್ಪ

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಮಜಾ ಭಾರತ ಖ್ಯಾತಿಯ ಸುಶ್ಮಿತಾ ಜಗ್ಗಪ್ಪ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರೀಲ್ ನಲ್ಲಿ ಗಂಡ ಹೆಂಡತಿಯಾಗಿ ನಟಿಸುತ್ತಿದ್ದ ಈ ಜೋಡಿ ಇದೀಗ ನಿಜ ಜೀವನದಲ್ಲೂ ಸತಿಪತಿಗಳಾಗಿದ್ದಾರೆ.

ನೆನ್ನೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಸಿಂಧೂರ ಕನ್ವೆನ್ಷನ್ ಹಾಲ್ ನಲ್ಲಿ ಬಂಧು ಬಾಂಧವರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.

ಸುಶ್ಮಿತಾ ಜಗ್ಗಪ್ಪ ಮದುವೆಗೆ ನಟ ರವಿಚಂದ್ರನ್, ಪ್ರಜ್ವಲ್ ದೇವರಾಜ್, ನಿರಂಜನ್ ದೇಶಪಾಂಡೆ ದಂಪತಿ, ಮಂಜು ಪಾವಗಡ, ಶೃತಿ ಪುತ್ರಿ ಗೌರಿ, ಮಜಾ ಭಾರತ ತಂಡ ಸೇರಿದಂತೆ, ಕಿರುತೆರೆ ಹಾಗೂ ಬೆಳ್ಳಿತೆರೆಯ ಹಲವಾರು ನಟ ನಟಿಯರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದರು.

ಇತ್ತೀಚಿಗೆ ಸುಶ್ಮಿತ ಹಾಗೂ ಜಗ್ಗಪ್ಪ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವೇಳೆ ಜಗಪ್ಪ, ಸುಶ್ಮಿತಾ ಅವರಿಗೆ ಐದು ಗುಲಾಬಿಗಳನ್ನು ಹಿಡಿದುಕೊಂಡು ಒಂದೊಂದಾಗಿ ನೀಡುವ ಮೂಲಕ ಪ್ರಪೋಸ್ ಮಾಡಿದ್ದರು.

ಸುಶ್ಮಿತಾ ಹಾಗು ಜಗ್ಗಪ್ಪ ಜೋಡಿ ಜೊತೆಯಾಗಿ ಒಂದೇ ವೇದಿಕೆಯಲ್ಲಿ ಅನೇಕ ಸಲ ಗಂಡ ಹೆಂಡತಿ ಪಾತ್ರ ಮಾಡಿದ್ದಾರೆ. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರು ಕೂಡ ಪರಸ್ಪರ ಪ್ರೀತಿಸುತ್ತಿರುವುದು ಎಲ್ಲರಿಗೂ ತಿಳಿದಿತ್ತು. ಜೀ ಕನ್ನಡ ವಾಹಿನಿಯ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮದಲ್ಲಿ ಸುಶ್ಮಿತಾ ಜಗಪ್ಪ ಅವರಿಗೆ ವಿಭಿನ್ನವಾಗಿ ಪ್ರಪೋಸ್ ಮಾಡಿ ಗಮನ ಸೆಳೆದಿದ್ದರು.

ನವೆಂಬರ್ 18ರಂದು ಈ ಜೋಡಿಯ ಮೆಹಂದಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆದಿತ್ತು ಮೆಹಂದಿ ಕಾರ್ಯಕ್ರಮದ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರೂ ಕೂಡ ಮ್ಯಾಚಿಂಗ್ ಡ್ರೆಸ್ ತೊಟ್ಟು ಮಿಂಚಿದ್ದರು.

lokesh

Recent Posts

ಸರ್ಕಾರಿ ಶಾಲೆಗಳಿಗೆ ಗುಡ್‌ನ್ಯೂಸ್‌ : ಶಾಲಾ ಕೊಠಡಿ ದುರಸ್ಥಿಗೆ ರೂ.360 ಕೋಟಿ ಬಿಡುಗಡೆ

ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…

8 seconds ago

ಹೊಸ ತಾಲ್ಲೂಕುಗಳಿಗೆ ಸದ್ಯಕ್ಕಿಲ್ಲ ಆಸ್ಪತ್ರೆ ಭಾಗ್ಯ

ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…

6 mins ago

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ

ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ…

13 mins ago

ಹನಗೂಡಿನಲ್ಲಿ ಹುಲಿ ದರ್ಶನ : ಭೀಮನೊಂದಿಗೆ ಕೂಂಬಿಂಗ್‌ ಆರಂಭ

ಹುಣಸೂರು : ಹನಗೋಡು ಹೋಬಳಿ ನಾಗಮಂಗಲ ಮತ್ತು ಮುತ್ತುರಾಯನಹೊಸಹಳ್ಳಿ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು, ಈ ಸಂಬಂಧ ಅರಣ್ಯ ಇಲಾಖೆ ಬುಧವಾರ…

20 mins ago

ಬೋನಿಗೆ ಬಿದ್ದ ಗಂಡು ಚಿರತೆ : ಗ್ರಾಮಸ್ಥರ ಆತಂಕ ದೂರ

ತಿ.ನರಸೀಪುರ : ತಾಲ್ಲೂಕಿನ ಬೂದಹಳ್ಳಿ ಗ್ರಾಮದಲ್ಲಿ ಗುರುವಾರ 6 ವರ್ಷದ ಗಂಡು ಚಿರತೆಯೊಂದು ಅರಣ್ಯಾಧಿಕಾರಿಗಳು ಇಟ್ಟಿದ್ದ ಬೋನಿಗೆ ಸಿಕ್ಕಿ ಬಿದ್ದಿದೆ.…

25 mins ago

ಗೋವಾ ಅವಘಡ : ಭಾರತದಿಂದ ಪರಾರಿಯಾದ ಲುತ್ರಾ ಸೋದರರು ಥಾಯ್ಲೆಂಡ್‌ನಲ್ಲಿ ವಶಕ್ಕೆ

ಪಣಜಿ : ಗೋವಾ ಬೆಂಕಿ ಅವಘಡ ಪ್ರಕರಣದಲ್ಲಿ ಭಾರತದಿಂದ ಪರಾರಿಯಾಗಿದ್ದ ನೈಟ್ ಕ್ಲಬ್ ಮಾಲೀಕರಾದ ಸೌರಭ್ ಲುತ್ರಾ ಮತ್ತು ಗೌರವ್…

1 hour ago