ಚಿತ್ರ ಮಂಜರಿ

ಹೊಸ ಬಾಳಿಗೆ ಕಾಲಿಟ್ಟ ಸುಶ್ಮಿತಾ ಜಗ್ಗಪ್ಪ

ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಮಜಾ ಭಾರತ ಖ್ಯಾತಿಯ ಸುಶ್ಮಿತಾ ಜಗ್ಗಪ್ಪ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರೀಲ್ ನಲ್ಲಿ ಗಂಡ ಹೆಂಡತಿಯಾಗಿ ನಟಿಸುತ್ತಿದ್ದ ಈ ಜೋಡಿ ಇದೀಗ ನಿಜ ಜೀವನದಲ್ಲೂ ಸತಿಪತಿಗಳಾಗಿದ್ದಾರೆ.

ನೆನ್ನೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಸಿಂಧೂರ ಕನ್ವೆನ್ಷನ್ ಹಾಲ್ ನಲ್ಲಿ ಬಂಧು ಬಾಂಧವರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.

ಸುಶ್ಮಿತಾ ಜಗ್ಗಪ್ಪ ಮದುವೆಗೆ ನಟ ರವಿಚಂದ್ರನ್, ಪ್ರಜ್ವಲ್ ದೇವರಾಜ್, ನಿರಂಜನ್ ದೇಶಪಾಂಡೆ ದಂಪತಿ, ಮಂಜು ಪಾವಗಡ, ಶೃತಿ ಪುತ್ರಿ ಗೌರಿ, ಮಜಾ ಭಾರತ ತಂಡ ಸೇರಿದಂತೆ, ಕಿರುತೆರೆ ಹಾಗೂ ಬೆಳ್ಳಿತೆರೆಯ ಹಲವಾರು ನಟ ನಟಿಯರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದರು.

ಇತ್ತೀಚಿಗೆ ಸುಶ್ಮಿತ ಹಾಗೂ ಜಗ್ಗಪ್ಪ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವೇಳೆ ಜಗಪ್ಪ, ಸುಶ್ಮಿತಾ ಅವರಿಗೆ ಐದು ಗುಲಾಬಿಗಳನ್ನು ಹಿಡಿದುಕೊಂಡು ಒಂದೊಂದಾಗಿ ನೀಡುವ ಮೂಲಕ ಪ್ರಪೋಸ್ ಮಾಡಿದ್ದರು.

ಸುಶ್ಮಿತಾ ಹಾಗು ಜಗ್ಗಪ್ಪ ಜೋಡಿ ಜೊತೆಯಾಗಿ ಒಂದೇ ವೇದಿಕೆಯಲ್ಲಿ ಅನೇಕ ಸಲ ಗಂಡ ಹೆಂಡತಿ ಪಾತ್ರ ಮಾಡಿದ್ದಾರೆ. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರು ಕೂಡ ಪರಸ್ಪರ ಪ್ರೀತಿಸುತ್ತಿರುವುದು ಎಲ್ಲರಿಗೂ ತಿಳಿದಿತ್ತು. ಜೀ ಕನ್ನಡ ವಾಹಿನಿಯ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮದಲ್ಲಿ ಸುಶ್ಮಿತಾ ಜಗಪ್ಪ ಅವರಿಗೆ ವಿಭಿನ್ನವಾಗಿ ಪ್ರಪೋಸ್ ಮಾಡಿ ಗಮನ ಸೆಳೆದಿದ್ದರು.

ನವೆಂಬರ್ 18ರಂದು ಈ ಜೋಡಿಯ ಮೆಹಂದಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆದಿತ್ತು ಮೆಹಂದಿ ಕಾರ್ಯಕ್ರಮದ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರೂ ಕೂಡ ಮ್ಯಾಚಿಂಗ್ ಡ್ರೆಸ್ ತೊಟ್ಟು ಮಿಂಚಿದ್ದರು.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

13 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

13 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

14 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

19 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

19 hours ago