ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಮಜಾ ಭಾರತ ಖ್ಯಾತಿಯ ಸುಶ್ಮಿತಾ ಜಗ್ಗಪ್ಪ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರೀಲ್ ನಲ್ಲಿ ಗಂಡ ಹೆಂಡತಿಯಾಗಿ ನಟಿಸುತ್ತಿದ್ದ ಈ ಜೋಡಿ ಇದೀಗ ನಿಜ ಜೀವನದಲ್ಲೂ ಸತಿಪತಿಗಳಾಗಿದ್ದಾರೆ.
ನೆನ್ನೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಸಿಂಧೂರ ಕನ್ವೆನ್ಷನ್ ಹಾಲ್ ನಲ್ಲಿ ಬಂಧು ಬಾಂಧವರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.
ಸುಶ್ಮಿತಾ ಜಗ್ಗಪ್ಪ ಮದುವೆಗೆ ನಟ ರವಿಚಂದ್ರನ್, ಪ್ರಜ್ವಲ್ ದೇವರಾಜ್, ನಿರಂಜನ್ ದೇಶಪಾಂಡೆ ದಂಪತಿ, ಮಂಜು ಪಾವಗಡ, ಶೃತಿ ಪುತ್ರಿ ಗೌರಿ, ಮಜಾ ಭಾರತ ತಂಡ ಸೇರಿದಂತೆ, ಕಿರುತೆರೆ ಹಾಗೂ ಬೆಳ್ಳಿತೆರೆಯ ಹಲವಾರು ನಟ ನಟಿಯರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದರು.
ಇತ್ತೀಚಿಗೆ ಸುಶ್ಮಿತ ಹಾಗೂ ಜಗ್ಗಪ್ಪ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವೇಳೆ ಜಗಪ್ಪ, ಸುಶ್ಮಿತಾ ಅವರಿಗೆ ಐದು ಗುಲಾಬಿಗಳನ್ನು ಹಿಡಿದುಕೊಂಡು ಒಂದೊಂದಾಗಿ ನೀಡುವ ಮೂಲಕ ಪ್ರಪೋಸ್ ಮಾಡಿದ್ದರು.
ಸುಶ್ಮಿತಾ ಹಾಗು ಜಗ್ಗಪ್ಪ ಜೋಡಿ ಜೊತೆಯಾಗಿ ಒಂದೇ ವೇದಿಕೆಯಲ್ಲಿ ಅನೇಕ ಸಲ ಗಂಡ ಹೆಂಡತಿ ಪಾತ್ರ ಮಾಡಿದ್ದಾರೆ. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರು ಕೂಡ ಪರಸ್ಪರ ಪ್ರೀತಿಸುತ್ತಿರುವುದು ಎಲ್ಲರಿಗೂ ತಿಳಿದಿತ್ತು. ಜೀ ಕನ್ನಡ ವಾಹಿನಿಯ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮದಲ್ಲಿ ಸುಶ್ಮಿತಾ ಜಗಪ್ಪ ಅವರಿಗೆ ವಿಭಿನ್ನವಾಗಿ ಪ್ರಪೋಸ್ ಮಾಡಿ ಗಮನ ಸೆಳೆದಿದ್ದರು.
ನವೆಂಬರ್ 18ರಂದು ಈ ಜೋಡಿಯ ಮೆಹಂದಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆದಿತ್ತು ಮೆಹಂದಿ ಕಾರ್ಯಕ್ರಮದ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರೂ ಕೂಡ ಮ್ಯಾಚಿಂಗ್ ಡ್ರೆಸ್ ತೊಟ್ಟು ಮಿಂಚಿದ್ದರು.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…