ಕಿರುತೆರೆ ಲೋಕದ ಜನಪ್ರಿಯ ರಿಯಾಲಿಟಿ ಶೋ ಮಜಾ ಭಾರತ ಖ್ಯಾತಿಯ ಸುಶ್ಮಿತಾ ಜಗ್ಗಪ್ಪ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ರೀಲ್ ನಲ್ಲಿ ಗಂಡ ಹೆಂಡತಿಯಾಗಿ ನಟಿಸುತ್ತಿದ್ದ ಈ ಜೋಡಿ ಇದೀಗ ನಿಜ ಜೀವನದಲ್ಲೂ ಸತಿಪತಿಗಳಾಗಿದ್ದಾರೆ.
ನೆನ್ನೆ ಬೆಂಗಳೂರಿನ ಜೆಪಿ ನಗರದಲ್ಲಿರುವ ಸಿಂಧೂರ ಕನ್ವೆನ್ಷನ್ ಹಾಲ್ ನಲ್ಲಿ ಬಂಧು ಬಾಂಧವರ ಸಮ್ಮುಖದಲ್ಲಿ ಸಪ್ತಪದಿ ತುಳಿದಿದ್ದಾರೆ.
ಸುಶ್ಮಿತಾ ಜಗ್ಗಪ್ಪ ಮದುವೆಗೆ ನಟ ರವಿಚಂದ್ರನ್, ಪ್ರಜ್ವಲ್ ದೇವರಾಜ್, ನಿರಂಜನ್ ದೇಶಪಾಂಡೆ ದಂಪತಿ, ಮಂಜು ಪಾವಗಡ, ಶೃತಿ ಪುತ್ರಿ ಗೌರಿ, ಮಜಾ ಭಾರತ ತಂಡ ಸೇರಿದಂತೆ, ಕಿರುತೆರೆ ಹಾಗೂ ಬೆಳ್ಳಿತೆರೆಯ ಹಲವಾರು ನಟ ನಟಿಯರು ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದರು.
ಇತ್ತೀಚಿಗೆ ಸುಶ್ಮಿತ ಹಾಗೂ ಜಗ್ಗಪ್ಪ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇವೇಳೆ ಜಗಪ್ಪ, ಸುಶ್ಮಿತಾ ಅವರಿಗೆ ಐದು ಗುಲಾಬಿಗಳನ್ನು ಹಿಡಿದುಕೊಂಡು ಒಂದೊಂದಾಗಿ ನೀಡುವ ಮೂಲಕ ಪ್ರಪೋಸ್ ಮಾಡಿದ್ದರು.
ಸುಶ್ಮಿತಾ ಹಾಗು ಜಗ್ಗಪ್ಪ ಜೋಡಿ ಜೊತೆಯಾಗಿ ಒಂದೇ ವೇದಿಕೆಯಲ್ಲಿ ಅನೇಕ ಸಲ ಗಂಡ ಹೆಂಡತಿ ಪಾತ್ರ ಮಾಡಿದ್ದಾರೆ. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರು ಕೂಡ ಪರಸ್ಪರ ಪ್ರೀತಿಸುತ್ತಿರುವುದು ಎಲ್ಲರಿಗೂ ತಿಳಿದಿತ್ತು. ಜೀ ಕನ್ನಡ ವಾಹಿನಿಯ ಭರ್ಜರಿ ಬ್ಯಾಚುಲರ್ಸ್ ಕಾರ್ಯಕ್ರಮದಲ್ಲಿ ಸುಶ್ಮಿತಾ ಜಗಪ್ಪ ಅವರಿಗೆ ವಿಭಿನ್ನವಾಗಿ ಪ್ರಪೋಸ್ ಮಾಡಿ ಗಮನ ಸೆಳೆದಿದ್ದರು.
ನವೆಂಬರ್ 18ರಂದು ಈ ಜೋಡಿಯ ಮೆಹಂದಿ ಕಾರ್ಯಕ್ರಮ ಬಹಳ ಅದ್ದೂರಿಯಾಗಿ ನಡೆದಿತ್ತು ಮೆಹಂದಿ ಕಾರ್ಯಕ್ರಮದ ಫೋಟೋಗಳು ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಸುಶ್ಮಿತಾ ಹಾಗೂ ಜಗ್ಗಪ್ಪ ಇಬ್ಬರೂ ಕೂಡ ಮ್ಯಾಚಿಂಗ್ ಡ್ರೆಸ್ ತೊಟ್ಟು ಮಿಂಚಿದ್ದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…