ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಟಿ ರಮ್ಯಾ ಅವರು ಗೌರಿ ಗಣೇಶ ಹಬ್ಬದಲ್ಲಿ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದಾರಂತೆ. ಹೌದು ನಟಿ ರಮ್ಯಾ ಅವರು ನಾಳೆ ನಾಡಿನ ಜನತೆಗೆ ಹಾಗೂ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಹಂಚಿಕೊಳ್ಳಲಿದ್ದಾರಂತೆ. ಈ ಬಗ್ಗೆ ಸ್ವತಃ ರಮ್ಯಾ ಅವರೇ ಟ್ವೀಟ್ ಮಾಡಿದ್ದು,
ನಾಳೆ ಅಂದರೆ ಗಣೇʻಶ ಹಬ್ಬದಂದು ಬೆಳಿಗ್ಗೆ 11.15 ಕ್ಕೆ ದೊಡ್ಡ ಅನೌನ್ಸ್ಮೆಂಟ್ ಇದೆಯೆಂದು ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಜೊತೆಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ನಟಿ ರಮ್ಯಾ ಅವರು ಮತ್ತೆ ಚಿತ್ರರಂಗದತ್ತ ಮುಖ ಮಾಡಲಿದ್ದಾರಾ ? ಅವರ ಹೊಸಸಿನಿಮಾ ಯಾವುದು ? ಮದುವೆ ಬಗ್ಗೆ ಸಿಹಿ ಸುದ್ದಿ ನೀಡಲಿದ್ದಾರಾ ? ಎಂಬಿತ್ಯಾದಿ ಪ್ರಶ್ನೆಗಳನ್ನು ಅಭಿಮಾನಿಗಳಲ್ಲಿ ಹುಟ್ಟುಹಾಕಿದೆ.
ಈ ಎಲ್ಲಾ ಕುತೂಹಲದ ಪ್ರಶ್ನೆಗಳಿಗೆ ನಟಿ ರಮ್ಯಾ ಅವರು ನಾಳೆ ಉತ್ತರಿಸಲಿದ್ದಾರೆ. ಅಭಿಮಾನಿಕೆಲವು ದಿನಗಳ ಹಿಂದೆ ನಟ ಕಮ್ ನಿರ್ದೇಶಕ ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲಿ ಮೋಹಕ ತಾರೆ ಅಭಿನಯಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಅಂತಾ ಹೇಳಲಾಗಿತ್ತು. ಇದೀಗ ರಾಜ್ ಬಿ ಶೆಟ್ಟಿ ರಮ್ಯಾ ಅವರ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳೋದು ಪಕ್ಕಾ ಆಗಿದೆ.
ಮತ್ತೊಂದು ಖುಷಿ ವಿಚಾರ ಅಂದ್ರೆ ರಮ್ಯಾ ನಟಿಸುವುದರ ಜೊತೆಗೆ ಸ್ವತಃ ನಿರ್ಮಾಣ ಮಾಡುತ್ತಿರೋದು. ಈ ಮೂಲಕ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಚಿತ್ರರಂಗದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುವ ಕಾಲ ಕೂಡಿ ಬಂದಿದ್ದು, ಅಭಿಮಾನಿಗಳು ಸಂತಸದಿಂದಿದ್ದಾರೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…