ಚಿತ್ರ ಮಂಜರಿ

‘ಸ್ವಾತಿ ಮುತ್ತಿನ ಮಳೆ ಹನಿ’ ನನ್ನದು : ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

ಬೆಂಗಳೂರು : ಕನ್ನಡ ಚಿತ್ರರಂಗದ ನಟಿ ಮರ್ಯಾ ಅವರು ನಿರ್ಮಾಣ ಮಾಡುತ್ತಿರುವ . ‘ಸ್ವಾತಿ ಮುತ್ತಿನ ಮಳೆ ಹನಿಯೇ’  ಸಿನಿಮಾದ ಕುರಿತು ವಿವಾದವೊಂದು ತಲೆ ಎತ್ತಿದೆ.
ಹೌದು, ನಟಿ ರಮ್ಯಾ ಅವರು . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಚಿತ್ರೀಕರಣವನ್ನೂ ಮುಗಿಸಲಾಗಿದ್ದು ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಸಿನಿಮಾ ತೆರೆ ಕಾಣುವ ಮುನ್ನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಶೀರ್ಷಿಕೆ ನನ್ನದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು  ಅವರು ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.


. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ನನ್ನ ಸಿನಿಮಾ ಅರ್ಧಕ್ಕೆ ನಿಂತಿದೆ. ಅದನ್ನು ಮುಂದುವರೆಸಬೇಕು. ಹಾಗಾಗಿ ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕೆಂದು ಎಂದು ಲಾಯರ್ ಮೂಲಕ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.

ಪತ್ರದಲ್ಲೇನಿದೆ ?

‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.

ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago