ಬೆಂಗಳೂರು : ಕನ್ನಡ ಚಿತ್ರರಂಗದ ನಟಿ ಮರ್ಯಾ ಅವರು ನಿರ್ಮಾಣ ಮಾಡುತ್ತಿರುವ . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಕುರಿತು ವಿವಾದವೊಂದು ತಲೆ ಎತ್ತಿದೆ.
ಹೌದು, ನಟಿ ರಮ್ಯಾ ಅವರು . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಚಿತ್ರೀಕರಣವನ್ನೂ ಮುಗಿಸಲಾಗಿದ್ದು ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಸಿನಿಮಾ ತೆರೆ ಕಾಣುವ ಮುನ್ನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಶೀರ್ಷಿಕೆ ನನ್ನದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.
. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ನನ್ನ ಸಿನಿಮಾ ಅರ್ಧಕ್ಕೆ ನಿಂತಿದೆ. ಅದನ್ನು ಮುಂದುವರೆಸಬೇಕು. ಹಾಗಾಗಿ ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕೆಂದು ಎಂದು ಲಾಯರ್ ಮೂಲಕ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.
ಪತ್ರದಲ್ಲೇನಿದೆ ?
‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.
ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…