ಚಿತ್ರ ಮಂಜರಿ

‘ಸ್ವಾತಿ ಮುತ್ತಿನ ಮಳೆ ಹನಿ’ ನನ್ನದು : ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು

ಬೆಂಗಳೂರು : ಕನ್ನಡ ಚಿತ್ರರಂಗದ ನಟಿ ಮರ್ಯಾ ಅವರು ನಿರ್ಮಾಣ ಮಾಡುತ್ತಿರುವ . ‘ಸ್ವಾತಿ ಮುತ್ತಿನ ಮಳೆ ಹನಿಯೇ’  ಸಿನಿಮಾದ ಕುರಿತು ವಿವಾದವೊಂದು ತಲೆ ಎತ್ತಿದೆ.
ಹೌದು, ನಟಿ ರಮ್ಯಾ ಅವರು . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಚಿತ್ರೀಕರಣವನ್ನೂ ಮುಗಿಸಲಾಗಿದ್ದು ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಸಿನಿಮಾ ತೆರೆ ಕಾಣುವ ಮುನ್ನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಶೀರ್ಷಿಕೆ ನನ್ನದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು  ಅವರು ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.


. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ನನ್ನ ಸಿನಿಮಾ ಅರ್ಧಕ್ಕೆ ನಿಂತಿದೆ. ಅದನ್ನು ಮುಂದುವರೆಸಬೇಕು. ಹಾಗಾಗಿ ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕೆಂದು ಎಂದು ಲಾಯರ್ ಮೂಲಕ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.

ಪತ್ರದಲ್ಲೇನಿದೆ ?

‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.

ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ

andolanait

Recent Posts

ಮ.ಬೆಟ್ಟ | ಅಪರಿಚಿತ ವಾಹನ ಡಿಕ್ಕಿ : ಜಿಂಕೆ ಸಾವು

ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ…

6 mins ago

ಹನೂರು | ಚಿನ್ನ ನಿಕ್ಷೇಪದ ಶಂಕೆ ; ಗುಡ್ಡವನ್ನೇ ಅಗೆದ ಕಿಡಿಗೇಡಿಗಳು

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ…

18 mins ago

ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ ಆರಂಭ : ವರ್ಣರಂಜಿತ ಚಾಲನೆ

ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು…

22 mins ago

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…

26 mins ago

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

39 mins ago

ಗಂಗವಾಡಿ ಬಳಿ ಚಿರತೆ ದಾಳಿ : ಮೂರು ಕರು ಸಾವು

ಚಾಮರಾಜನಗರ : ತಾಲ್ಲೂಕಿನ ಗಂಗವಾಡಿ ಗ್ರಾಮದ ಬಳಿ ಶನಿವಾರ ರಾತ್ರಿ ಜಮೀನಿನಲ್ಲಿ ಕಟ್ಟಿ ಹಾಕಿದ್ದ ಕರುಗಳ ಮೇಲೆ ಚಿರತೆ ದಾಳಿ…

2 hours ago