ಬೆಂಗಳೂರು : ಕನ್ನಡ ಚಿತ್ರರಂಗದ ನಟಿ ಮರ್ಯಾ ಅವರು ನಿರ್ಮಾಣ ಮಾಡುತ್ತಿರುವ . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಕುರಿತು ವಿವಾದವೊಂದು ತಲೆ ಎತ್ತಿದೆ.
ಹೌದು, ನಟಿ ರಮ್ಯಾ ಅವರು . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಚಿತ್ರೀಕರಣವನ್ನೂ ಮುಗಿಸಲಾಗಿದ್ದು ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಸಿನಿಮಾ ತೆರೆ ಕಾಣುವ ಮುನ್ನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಶೀರ್ಷಿಕೆ ನನ್ನದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.
. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ನನ್ನ ಸಿನಿಮಾ ಅರ್ಧಕ್ಕೆ ನಿಂತಿದೆ. ಅದನ್ನು ಮುಂದುವರೆಸಬೇಕು. ಹಾಗಾಗಿ ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕೆಂದು ಎಂದು ಲಾಯರ್ ಮೂಲಕ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.
ಪತ್ರದಲ್ಲೇನಿದೆ ?
‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.
ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…
ಸರ್ಕಾರಿ ಶಾಲೆಗಳಿಗೆ ಮಕ್ಕಳು ಬರುತ್ತಿಲ್ಲ ಅಂತ ನೆಪ ಹೇಳಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿರುವುದು ಸರಿಯಲ್ಲ. ಖಾಸಗಿ ಶಾಲೆಗಳಲ್ಲಿ ಪ್ರವೇಶ…
ರಾಜ್ಯದಲ್ಲಿ ಕ್ರಿಕೆಟ್ ಗೀಳಿನ ಅಬ್ಬರದಲ್ಲಿ ಫುಟ್ಬಾಲ್ ಕ್ರೀಡೆ ಧೂಳೀಪಟ ವಾಗುತ್ತಿರುವುದು ಅತ್ಯಂತ ಆಘಾತಕಾರಿ. ಶೇ. ೯೦ ಕ್ಕೂ ಹೆಚ್ಚು ಫುಟ್ಬಾಲ್…
ಇಂದು ಜಗತ್ತಿಗೆ ಗಾಂಧಿ ಚಿಂತನೆ ಹೆಚ್ಚು ಪ್ರಸ್ತುತ: ಗಾಂಧಿ ಎಂದರೆ ಕೇವಲ ಇತಿಹಾಸದ ಪುಟಗಳಲ್ಲಿ ಉಳಿದಿರುವ ಸ್ವಾತಂತ್ರ್ಯ ಹೋರಾಟಗಾರ ಮಾತ್ರ ಅಲ್ಲ. ಸದಾ…
ಡಾ.ರಹಮತ್ ತರೀಕೆರೆ ಕರ್ನಾಟಕದಲ್ಲಿ ಗಾಂಧಿಗೆ ಸಂಬಂಧಿಸಿದಂತೆ ಪರಸ್ಪರ ವಿರುದ್ಧವೆನಿಸುವ ವಿದ್ಯಮಾನಗಳು ಜರುಗುತ್ತಿವೆ. ಉದಾ ಹರಣೆಗೆ- ೧. ಗಾಂಧಿ ಹಂತಕ ಗೋಡ್ಸೆ ಮತ್ತು…
ಗಾಂಧಿ ಅಭಿಯಾನ ಅರಿವಿನ ಯಾನ ನಾನು ಮೊದಲೇ ಹೇಳಿರುವಂತೆ, ನಮ್ಮ ತಂದೆ ಭಗಂದರ ರೋಗದಿಂದ ನರಳುತ್ತಿದ್ದರು. ಅವರ ಶುಶ್ರೂಷೆಯ ಅಧಿಕಾಂಶದ ಹೊರೆ…