ಬೆಂಗಳೂರು : ಕನ್ನಡ ಚಿತ್ರರಂಗದ ನಟಿ ಮರ್ಯಾ ಅವರು ನಿರ್ಮಾಣ ಮಾಡುತ್ತಿರುವ . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಕುರಿತು ವಿವಾದವೊಂದು ತಲೆ ಎತ್ತಿದೆ.
ಹೌದು, ನಟಿ ರಮ್ಯಾ ಅವರು . ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾದ ಚಿತ್ರೀಕರಣವನ್ನೂ ಮುಗಿಸಲಾಗಿದ್ದು ಬಿಡುಗಡೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಸಿನಿಮಾ ತೆರೆ ಕಾಣುವ ಮುನ್ನವೇ ಸ್ವಾತಿ ಮುತ್ತಿನ ಮಳೆ ಹನಿಯೇ ಶೀರ್ಷಿಕೆ ನನ್ನದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರು ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.
. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ನನ್ನ ಸಿನಿಮಾ ಅರ್ಧಕ್ಕೆ ನಿಂತಿದೆ. ಅದನ್ನು ಮುಂದುವರೆಸಬೇಕು. ಹಾಗಾಗಿ ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕೆಂದು ಎಂದು ಲಾಯರ್ ಮೂಲಕ ವಾಣಿಜ್ಯ ಮಂಡಳಿಗೆ ಪತ್ರವೊಂದನ್ನು ಬರೆದಿದ್ದಾರೆ.
ಪತ್ರದಲ್ಲೇನಿದೆ ?
‘ನನ್ನ ಕಕ್ಷಿದಾರರು ನಿರ್ಮಿಸುವ ಮೇಲ್ಕಂಡ ಸ್ವಾತಿ ಮುತ್ತಿನ ಮಳೆ ಹನಿಯೆ’ ಹೆಸರಿನ ಚಿತ್ರದ ತಾರಾಗಣದಲ್ಲಿ ಅಂಬರೀಶ್, ಸುಹಾಸಿನಿ ಮತ್ತು ಇತರ ಕಲಾವಿದರು ನಟಿಸಿದ್ದು. ಶೇಕಡಾ 80ರಷ್ಟು ಚಿತ್ರೀಕರಣ ಕೂಡ ಮುಗಿದಿದೆ. ಮೇಲ್ಕಂಡ ಚಿತ್ರದ ನಾಯಕ ನಟ ಅಂಬರೀಶ್ ನಿಧನ ಹೊಂದಿ ನಂತರ ಚಿತ್ರದ ಚಿತ್ರೀಕರಣವು ಕಾರಣಾಂತರಗಳಿಂದ ನಿಂತಿದೆ. ನನ್ನ ಕಕ್ಷಿದಾರರು ಹೇಳುವ ಹಾಗೆ ಮೇಲ್ಕಂಡ ಚಿತ್ರ ಶೀರ್ಷಿಕೆ ಅವರೇ ನಿರ್ದೇಶಿಸಿರುವ ಬಣ್ಣದ ಗೆಜ್ಜೆ ಚಿತ್ರದ ಹಾಡಿನ ಶೀರ್ಷಿಕೆಯಾಗಿರುತ್ತದೆ’ ಎಂದು ಸಿಂಗ್ ಬಾಬು ಪರ ವಕೀಲ ಎಸ್.ಆರ್. ಶ್ರೀನಿವಾಸ್ ಮೂರ್ತಿ ಪತ್ರ ಬರೆದಿದ್ದಾರೆ.
ಅಲ್ಲದೇ, ತಾವು ನಿರ್ಮಾಣ ಮಾಡುವ ಚಿತ್ರಕ್ಕೆ ಮೇಲ್ಕಂಡ ಶೀರ್ಷಿಕೆಯನ್ನು ಅಂದರೆ ಸ್ವಾತಿ ಮುತ್ತಿನ ಮಳೆ ಹನಿಯೇ ಶಿರ್ಷಿಕೆಯನ್ನಾಗಲಿ, ಹಾಡನ್ನಾಗಲು ಯಾವುದೇ ರೀತಿ ಉಪಯೋಗಿಸಲು ಅಥವಾ ನೋಂದಾಯಿಸಲು ನನ್ನ ಕಕ್ಷಿದಾರರ ವಿನಃ ಯಾರಿಗೂ ಯಾವುದೇ ವಿಧವಾದ ಹಕ್ಕು ಇರುವುದಿಲ್ಲ. ಒಂದು ವೇಳೆ ನಾನು ನೀಡಿರುವ ಈ ವಕೀಲರ ನೋಟಿಸಿನ ನಂತರವೂ ನೀವು ಬೇರೆ ನಿರ್ಮಾಪಕರಿಗೆ ಈ ಚಿತ್ರದ ಶೀರ್ಷಿಕೆಯನ್ನು ನೋಂದಾವಣೆ ಮಾಡಿಕೊಡಲು ಮತ್ತು ಚಿತ್ರ ನಿರ್ಮಾಣ ಮಾಡಲು ಅವಕಾಶ ಕೊಟ್ಟಿದ್ದೆ ಆದರೆ, ನನ್ನ ಕಕ್ಷಿದಾರರು ನೊಂದಾಣಿಕೆ ಮಾಡಿರುವ ಶೀರ್ಷಿಕೆಯ ಕೃತಿ ಚೌರ್ಯವಾಗುತ್ತದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…