ನಾಯಕ ನಟಿಯನ್ನು ಪರಿಚಯಿಸಿದ ಚಿತ್ರತಂಡ
ಮೋಹಕ ತಾರೆ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ರಾಜ್ ಬಿ.ಶೆಟ್ಟಿ ನಟಿಸಿ, ನಿರ್ದೇಶನ ಹೇಳಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಾತ್ರದ ಪರಿಚಯವನ್ನು ಚಿತ್ರ ತಂಡ ಇಂದು (ಸೋಮವಾರ) ಅನಾವರಣ ಮಾಡಿದೆ.
ಇತ್ತೀಚೆಗೆ ಚಿತ್ರೀಕರಣ ಪೂರ್ಣಗೊಳಿಸಿರುವ ಈ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತಲ್ಲೀನವಾಗಿದೆ. ಇದರ ನಡುವೆ ಇಂದು ‘ಪ್ರೇರಣಾ’ ಎಂಬ ಪಾತ್ರವನ್ನು ಪರಿಚಯ ಮಾಡಿಕೊಂಡಿದೆ. ಪಾತ್ರ ಪರಿಚಯಕ್ಕೆ ಸಿನಿ ಪ್ರೇಕ್ಷಕರು ಫುಲ್ ಮಾರ್ಕ್ಸ್ ನೀಡಿದ್ದಾರೆ.ನಟಿ ಸಿರಿ ರವಿಕುಮಾರ್ ಈ ಚಿತ್ರದಲ್ಲಿ ‘ಪ್ರೇರಣಾ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಿರ್ದೇಶಕ ರಾಜ್ ಬಿ.ಶೆಟ್ಟಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ‘ಪ್ರೇರಣಾ’ಳನ್ನು ಪರಿಚಯಿಸಿದ್ದಾರೆ. ನೀವು ಎಷ್ಟು ಅದ್ಭುತವಾದ ನಟಿ ಎನ್ನುವುದನ್ನು ಪ್ರೇಕ್ಷಕರಿಗೆ ತೋರಿಸಲು ಕಾತರದಿಂದಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.
‘ಸಕುಟುಂಬ ಸಮೇತ’, ‘ಆಬ್ರಕಡಾಬ್ರ’ ಸಿನಿಮಾದಲ್ಲಿ ನಟಿಸಿದ್ದ ಸಿರಿ ರವಿಕುಮಾರ್, ಸದ್ಯ ಅಭಿಜಿತ್ ಮಹೇಶ್ ನಿರ್ದೇಶನದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲೂ ಬಣ್ಣಹಚ್ಚಿದ್ದಾರೆ. ದಿಗಂತ್, ರಿಷಬ್ ಶೆಟ್ಟಿ, ಅಚ್ಯುತಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿದ್ದು, ಶೀಘ್ರದಲ್ಲೇ ಈ ಚಿತ್ರ ತೆರೆಗೆ ಬರಲಿದೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…