ಚಿತ್ರ ಮಂಜರಿ

ಇವರೇ ನೋಡಿ ʼಸ್ವಾತಿ ಮುತ್ತಿನ ಮಳೆ ಹನಿಯʼ ನಾಯಕಿ

ನಾಯಕ ನಟಿಯನ್ನು ಪರಿಚಯಿಸಿದ ಚಿತ್ರತಂಡ 

ಮೋಹಕ ತಾರೆ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಮತ್ತು ರಾಜ್‌ ಬಿ.ಶೆಟ್ಟಿ ನಟಿಸಿ, ನಿರ್ದೇಶನ ಹೇಳಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಾತ್ರದ ಪರಿಚಯವನ್ನು ಚಿತ್ರ ತಂಡ ಇಂದು (ಸೋಮವಾರ) ಅನಾವರಣ ಮಾಡಿದೆ.

ಇತ್ತೀಚೆಗೆ ಚಿತ್ರೀಕರಣ ಪೂರ್ಣಗೊಳಿಸಿರುವ ಈ ಚಿತ್ರತಂಡ ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತಲ್ಲೀನವಾಗಿದೆ. ಇದರ ನಡುವೆ ಇಂದು ‘ಪ್ರೇರಣಾ’ ಎಂಬ ಪಾತ್ರವನ್ನು ಪರಿಚಯ ಮಾಡಿಕೊಂಡಿದೆ. ಪಾತ್ರ ಪರಿಚಯಕ್ಕೆ ಸಿನಿ ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ.ನಟಿ ಸಿರಿ ರವಿಕುಮಾರ್‌ ಈ ಚಿತ್ರದಲ್ಲಿ ‘ಪ್ರೇರಣಾ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಿರ್ದೇಶಕ ರಾಜ್‌ ಬಿ.ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ‘ಪ್ರೇರಣಾ’ಳನ್ನು ಪರಿಚಯಿಸಿದ್ದಾರೆ. ನೀವು ಎಷ್ಟು ಅದ್ಭುತವಾದ ನಟಿ ಎನ್ನುವುದನ್ನು ಪ್ರೇಕ್ಷಕರಿಗೆ ತೋರಿಸಲು ಕಾತರದಿಂದಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

‘ಸಕುಟುಂಬ ಸಮೇತ’, ‘ಆಬ್ರಕಡಾಬ್ರ’ ಸಿನಿಮಾದಲ್ಲಿ ನಟಿಸಿದ್ದ ಸಿರಿ ರವಿಕುಮಾರ್‌, ಸದ್ಯ ಅಭಿಜಿತ್‌ ಮಹೇಶ್‌ ನಿರ್ದೇಶನದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲೂ ಬಣ್ಣಹಚ್ಚಿದ್ದಾರೆ. ದಿಗಂತ್, ರಿಷಬ್ ಶೆಟ್ಟಿ, ಅಚ್ಯುತಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿದ್ದು, ಶೀಘ್ರದಲ್ಲೇ ಈ ಚಿತ್ರ ತೆರೆಗೆ ಬರಲಿದೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

3 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

3 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

4 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

6 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

10 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

10 hours ago