ಚಿತ್ರ ಮಂಜರಿ

ಇವರೇ ನೋಡಿ ʼಸ್ವಾತಿ ಮುತ್ತಿನ ಮಳೆ ಹನಿಯʼ ನಾಯಕಿ

ನಾಯಕ ನಟಿಯನ್ನು ಪರಿಚಯಿಸಿದ ಚಿತ್ರತಂಡ 

ಮೋಹಕ ತಾರೆ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಮತ್ತು ರಾಜ್‌ ಬಿ.ಶೆಟ್ಟಿ ನಟಿಸಿ, ನಿರ್ದೇಶನ ಹೇಳಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಾತ್ರದ ಪರಿಚಯವನ್ನು ಚಿತ್ರ ತಂಡ ಇಂದು (ಸೋಮವಾರ) ಅನಾವರಣ ಮಾಡಿದೆ.

ಇತ್ತೀಚೆಗೆ ಚಿತ್ರೀಕರಣ ಪೂರ್ಣಗೊಳಿಸಿರುವ ಈ ಚಿತ್ರತಂಡ ಸದ್ಯ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳಲ್ಲಿ ತಲ್ಲೀನವಾಗಿದೆ. ಇದರ ನಡುವೆ ಇಂದು ‘ಪ್ರೇರಣಾ’ ಎಂಬ ಪಾತ್ರವನ್ನು ಪರಿಚಯ ಮಾಡಿಕೊಂಡಿದೆ. ಪಾತ್ರ ಪರಿಚಯಕ್ಕೆ ಸಿನಿ ಪ್ರೇಕ್ಷಕರು ಫುಲ್​ ಮಾರ್ಕ್ಸ್​ ನೀಡಿದ್ದಾರೆ.ನಟಿ ಸಿರಿ ರವಿಕುಮಾರ್‌ ಈ ಚಿತ್ರದಲ್ಲಿ ‘ಪ್ರೇರಣಾ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಿರ್ದೇಶಕ ರಾಜ್‌ ಬಿ.ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ‘ಪ್ರೇರಣಾ’ಳನ್ನು ಪರಿಚಯಿಸಿದ್ದಾರೆ. ನೀವು ಎಷ್ಟು ಅದ್ಭುತವಾದ ನಟಿ ಎನ್ನುವುದನ್ನು ಪ್ರೇಕ್ಷಕರಿಗೆ ತೋರಿಸಲು ಕಾತರದಿಂದಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.

‘ಸಕುಟುಂಬ ಸಮೇತ’, ‘ಆಬ್ರಕಡಾಬ್ರ’ ಸಿನಿಮಾದಲ್ಲಿ ನಟಿಸಿದ್ದ ಸಿರಿ ರವಿಕುಮಾರ್‌, ಸದ್ಯ ಅಭಿಜಿತ್‌ ಮಹೇಶ್‌ ನಿರ್ದೇಶನದ ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲೂ ಬಣ್ಣಹಚ್ಚಿದ್ದಾರೆ. ದಿಗಂತ್, ರಿಷಬ್ ಶೆಟ್ಟಿ, ಅಚ್ಯುತಕುಮಾರ್ ಮುಖ್ಯಪಾತ್ರದಲ್ಲಿ ನಟಿಸಿದ್ದು, ಶೀಘ್ರದಲ್ಲೇ ಈ ಚಿತ್ರ ತೆರೆಗೆ ಬರಲಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago