ಚಿತ್ರ ಮಂಜರಿ

ಗೋಲ್ಡಿ ಬ್ರಾರ್‌ ಜೊತೆ ಮಾತನಾಡು, ಇಲ್ಲದಿದ್ದರೆ.. ನಟ ಸಲ್ಮಾನ್‌ಗೆ ಮತ್ತೆ ಬೆದರಿಕೆ

ಮುಂಬೈ: ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಪಾತಕಿ ಲಾರೆನ್ಸ್‌ ಬಿಷ್ಣೊಯ್‌ನಿಂದ ಹಾಗೂ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ.

ಸೋಮವಾರ ಬೆಳಿಗ್ಗೆಯಿಂದ ಮುಂಬೈ ಪೊಲೀಸರು ಬಾಂದ್ರಾದ ಸಲ್ಮಾನ್ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ಆರಂಭಿಸಿದ್ದಾರೆ.

ಸಲ್ಮಾನ್ ಖಾನ್ ನನ್ನ ಹಾಗೂ ನನ್ನ ಗುಂಪಿನ ಕ್ಷಮೆ ಕೇಳಬೇಕು. ಇಲ್ಲದಿದ್ದರೇ ಸಲ್ಮಾನ್‌ ಖಾನ್‌ ಅವರನ್ನು ಶೀಘ್ರದಲ್ಲೇ ಕೊಲ್ಲುತ್ತೇವೆ, ಅವರ ಇಲ್ಲವೇ ಅಹಂ ಇಳಿಸುತ್ತೇವೆ ಎಂದು ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿದ್ದ.

ಮತ್ತೊಂದು ಬೆದರಿಕೆ: ದೂರು ದಾಖಲು

ಲಾರೆನ್ಸ್‌ ಬಿಷ್ಣೋಯ್ ಶುಕ್ರವಾರ ಸಲ್ಮಾನ್ ಖಾನ್‌ಗೆ ಬೆದರಿಕೆ ಸಂದೇಶ ಕಳಿಸಿದ್ದ ನಂತರ ಈಗ ಮತ್ತೊಂದು ಬೆದರಿಕೆ ಪತ್ರ ಸಲ್ಮಾನ್‌ ಖಾನ್‌ ಕಚೇರಿಗೆ ಈ ಮೇಲ್ ಮೂಲಕ ಬಂದಿದೆ.

ಅದರಲ್ಲಿ ‘ಸಲ್ಮಾನ್ ನೀನು ಗೋಲ್ಡಿ ಬ್ರಾರ್‌ನ್ನು ಮುಖಾಮುಖಿಯಾಗಿ ಭೇಟಿಯಾಗಬೇಕು. ಇಲ್ಲದಿದ್ದರೇ ಮುಂದಾಗುವ ಅನಾಹುತಕ್ಕೆ ನೀನೆ ಹೊಣೆ.. ಮುಂದಿನ ಸಾರಿ ಖಂಡಿತ’ ಎಂದು ಹೇಳಲಾಗಿದೆ. ಈ ಪತ್ರವನ್ನು ಗೋಲ್ಡಿ ಬ್ರಾರ್‌ ಸಹಾಯಕ ಕಳಿಸಿದ್ದಾನೆ ಎಂದು ಹೇಳಲಾಗಿದೆ.

ಬೆದರಿಕೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಕಚೇರಿಯ ಸಿಬ್ಬಂದಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಿಧು ಮೂಸೆವಾಲಾ ಹತ್ಯೆ ಪ್ರಕಣದಲ್ಲಿ ಪ್ರಮುಖ ಆರೋಪಿಯೂ ಆಗಿರುವ ಗೋಲ್ಡಿ ಬ್ರಾರ್‌ ಕೆನಡಾದಲ್ಲಿರುವ ಭಾರತ ಮೂಲದ ಗ್ಯಾಂಗ್‌ಸ್ಟರ್ ಆಗಿದ್ದಾನೆ. ಸದ್ಯ ಪಂಜಾಬ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಲಾರೆನ್ಸ್‌ ಬಿಷ್ಣೊಯ್‌ ಪಂಜಾಬ್‌ನ ಬತಿಂಡಾದ ಜೈಲಿನಲ್ಲಿದ್ದಾನೆ.

andolanait

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

19 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

30 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

37 mins ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

46 mins ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

8 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

10 hours ago