ಮುಂಬೈ: ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಪಾತಕಿ ಲಾರೆನ್ಸ್ ಬಿಷ್ಣೊಯ್ನಿಂದ ಹಾಗೂ ಗ್ಯಾಂಗ್ಸ್ಟರ್ ಗೋಲ್ಡಿ ಬ್ರಾರ್ನಿಂದ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಮುಂಬೈ ಪೊಲೀಸರು ಭದ್ರತೆ ಒದಗಿಸಿದ್ದಾರೆ.
ಸೋಮವಾರ ಬೆಳಿಗ್ಗೆಯಿಂದ ಮುಂಬೈ ಪೊಲೀಸರು ಬಾಂದ್ರಾದ ಸಲ್ಮಾನ್ ನಿವಾಸಕ್ಕೆ ಪೊಲೀಸ್ ಭದ್ರತೆಯನ್ನು ಆರಂಭಿಸಿದ್ದಾರೆ.
ಸಲ್ಮಾನ್ ಖಾನ್ ನನ್ನ ಹಾಗೂ ನನ್ನ ಗುಂಪಿನ ಕ್ಷಮೆ ಕೇಳಬೇಕು. ಇಲ್ಲದಿದ್ದರೇ ಸಲ್ಮಾನ್ ಖಾನ್ ಅವರನ್ನು ಶೀಘ್ರದಲ್ಲೇ ಕೊಲ್ಲುತ್ತೇವೆ, ಅವರ ಇಲ್ಲವೇ ಅಹಂ ಇಳಿಸುತ್ತೇವೆ ಎಂದು ಲಾರೆನ್ಸ್ ಬಿಷ್ಣೋಯ್ ಬೆದರಿಕೆ ಹಾಕಿದ್ದ.
ಮತ್ತೊಂದು ಬೆದರಿಕೆ: ದೂರು ದಾಖಲು
ಲಾರೆನ್ಸ್ ಬಿಷ್ಣೋಯ್ ಶುಕ್ರವಾರ ಸಲ್ಮಾನ್ ಖಾನ್ಗೆ ಬೆದರಿಕೆ ಸಂದೇಶ ಕಳಿಸಿದ್ದ ನಂತರ ಈಗ ಮತ್ತೊಂದು ಬೆದರಿಕೆ ಪತ್ರ ಸಲ್ಮಾನ್ ಖಾನ್ ಕಚೇರಿಗೆ ಈ ಮೇಲ್ ಮೂಲಕ ಬಂದಿದೆ.
ಅದರಲ್ಲಿ ‘ಸಲ್ಮಾನ್ ನೀನು ಗೋಲ್ಡಿ ಬ್ರಾರ್ನ್ನು ಮುಖಾಮುಖಿಯಾಗಿ ಭೇಟಿಯಾಗಬೇಕು. ಇಲ್ಲದಿದ್ದರೇ ಮುಂದಾಗುವ ಅನಾಹುತಕ್ಕೆ ನೀನೆ ಹೊಣೆ.. ಮುಂದಿನ ಸಾರಿ ಖಂಡಿತ’ ಎಂದು ಹೇಳಲಾಗಿದೆ. ಈ ಪತ್ರವನ್ನು ಗೋಲ್ಡಿ ಬ್ರಾರ್ ಸಹಾಯಕ ಕಳಿಸಿದ್ದಾನೆ ಎಂದು ಹೇಳಲಾಗಿದೆ.
ಬೆದರಿಕೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಕಚೇರಿಯ ಸಿಬ್ಬಂದಿ ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಸಿಧು ಮೂಸೆವಾಲಾ ಹತ್ಯೆ ಪ್ರಕಣದಲ್ಲಿ ಪ್ರಮುಖ ಆರೋಪಿಯೂ ಆಗಿರುವ ಗೋಲ್ಡಿ ಬ್ರಾರ್ ಕೆನಡಾದಲ್ಲಿರುವ ಭಾರತ ಮೂಲದ ಗ್ಯಾಂಗ್ಸ್ಟರ್ ಆಗಿದ್ದಾನೆ. ಸದ್ಯ ಪಂಜಾಬ್ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಲಾರೆನ್ಸ್ ಬಿಷ್ಣೊಯ್ ಪಂಜಾಬ್ನ ಬತಿಂಡಾದ ಜೈಲಿನಲ್ಲಿದ್ದಾನೆ.
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…