ಚಿತ್ರ ಮಂಜರಿ

ಬಾಡಿಗೆ ತಾಯ್ತನದ ನಿಯಮ ಉಲ್ಲಂಘಿಸಿರುವ ನಯನ ತಾರಾ ದಂಪತಿಗೆ ತಮಿಳುನಾಡು ಸರ್ಕಾರ ಸ್ಪಷ್ಟನೆ ನೀಡಲು ಸೂಚನೆ

ತಮಿಳುನಾಡು: ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಮದುವೆ ಆದ ನಾಲ್ಕೇ ತಿಂಗಳಿಗೆ ಮಗು ಪಡೆದಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಗ್ಗೆ ದಂಪತಿ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಇವರು ಮಗು ಪಡೆದ ವಿಚಾರ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಬಾಡಿಗೆ ತಾಯ್ತನದ ವಿಚಾರದಲ್ಲಿ ಸರ್ಕಾರ ಒಂದಷ್ಟು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್  ಗಾಳಿಗೆ ತೂರಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆ ಜಾರಿಗೆ ತರಲಾಗಿತ್ತು. ಈ ಕಾಯ್ದೆ ಪ್ರಕಾರ ಬಾಡಿಗೆ ತಾಯಿಯು ಆರೋಗ್ಯವಾಗಿರಬೇಕು ಹಾಗೂ ಆಕೆಯ ವಯಸ್ಸು 21-35ರ ಅಂತದರಲ್ಲಿ ಇರಬೇಕು. ಆಕೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಬಾಡಿಗೆ ತಾಯ್ತನವನ್ನು ಆಯ್ಕೆ ಮಾಡಬಹುದು. ಇದರ ಜತೆಗೆ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ. ಅಂದರೆ ಮಗುವನ್ನು ಹೆರುವ ಮಹಿಳೆ ದಂಪತಿಯಿಂದ ಹಣ ಪಡೆಯುವಂತಿಲ್ಲ.  ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಶಿವನ್ ಪಾಲಿಸಿಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಸಂಬಂಧ ಸ್ಪಷ್ಟನೆ ನೀಡಲು ಸೂಚಿಸಿದೆ. ವೈದ್ಯಕೀಯ ಸೇವೆಗಳ ನಿರ್ದೇಶನಾಲಯ ಈ ಸಂಬಂಧ ತನಿಖೆ ನಡೆಸಲಿದೆ.

ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್​ ಶಿವನ್​. ನಟಿಯಾಗಿ ನಯನತಾರಾ ಅವರಿಗೆ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅದೇ ರೀತಿ, ವಿಘ್ನೇಶ್​ ಶಿವನ್​ ಅವರು ನಿರ್ದೇಶಕನಾಗಿ ಬ್ಯುಸಿ ಆಗಿದ್ದಾರೆ. ಇವರಿಬ್ಬರು ಬಾಡಿಗೆ ತಾಯಿ ಮೂಲಕ ಮಗು ಪಡೆಯಬಹುದು ಎಂಬ ಅನುಮಾನ ಮೊದಲೇ ಮೂಡಿತ್ತು. ಆ ಬಗ್ಗೆ ಒಂದಷ್ಟು ಸುದ್ದಿಗಳು ಹರಿದಾಡಿದ್ದವು. ಆ ಅನುಮಾನ ಈಗ ನಿಜವಾಗಿದೆ. ಈ ಮಧ್ಯೆ ಅವರು ಸಮಸ್ಯೆಗೆ ಸಿಲುಕಿದ್ದಾರೆ.

ಬಾಡಿಗೆ ತಾಯಿ ಮೂಲಕ ಜನಿಸಿರುವ ಈ ಅವಳಿ ಗಂಡು ಮಕ್ಕಳಿಗೆ ಉಯಿರ್​ ಮತ್ತು ಉಳಗಂ ಎಂದು ಹೆಸರು ಇಡಲಾಗಿದೆ. ‘ನಯನ್​ ಮತ್ತು ನಾನು ಅಪ್ಪ-ಅಮ್ಮ ಆಗಿದ್ದೇವೆ. ನಮಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಪ್ರಾರ್ಥನೆ, ಹಿರಿಯರ ಆಶೀರ್ವಾದವು ಈ ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್​ ಮತ್ತು ಉಳಗಂ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ವಿಘ್ನೇಶ್​ ಶಿವನ್​ ಪೋಸ್ಟ್​ ಮಾಡಿದ್ದರು.

andolana

Recent Posts

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

6 mins ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

22 mins ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

24 mins ago

ಭದ್ರತಾ ಪಡೆ-ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ: ಇಬ್ಬರು ನಕ್ಸಲರು ಹತ್ಯೆ

ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ.…

45 mins ago

ಬೆಂಗಳೂರಿನಲ್ಲಿ ಕೇರಳ ಪೊಲೀಸರ ಭರ್ಜರಿ ಕಾರ್ಯಾಚರಣೆ

ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಜಾಲದ ವಿರುದ್ಧ ಕೇರಳ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಆನ್‌ಲೈನ್‌ ಡೆಲಿವರಿ ಬಾಯ್ಸ್‌ ವೇಷದಲ್ಲಿ…

57 mins ago

ಕೊಡಗಿನಲ್ಲಿ ಗುಡ್ಡ ಕುಸಿತ ಸ್ಥಳಗಳಿಗೆ ಶಾಶ್ವತ ತಡೆಗೋಡೆ ಕಾಮಗಾರಿ ಶುರು

ಮಡಿಕೇರಿ: 2018ರ ದುರಂತದ ಬಳಿಕ ಕೊಡಗು ಜಿಲ್ಲೆಯಲ್ಲಿ ಪ್ರತಿವರ್ಷ ಮಳೆಗಾಲ ಆರಂಭವಾದರೆ ಸಾಕು ಜಿಲ್ಲೆಯ ಜನ ಬೆಚ್ಚಿ ಬೀಳುತ್ತಾರೆ. ಭಾರೀ…

1 hour ago