ತಮಿಳುನಾಡು: ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಮದುವೆ ಆದ ನಾಲ್ಕೇ ತಿಂಗಳಿಗೆ ಮಗು ಪಡೆದಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಗ್ಗೆ ದಂಪತಿ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಇವರು ಮಗು ಪಡೆದ ವಿಚಾರ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಬಾಡಿಗೆ ತಾಯ್ತನದ ವಿಚಾರದಲ್ಲಿ ಸರ್ಕಾರ ಒಂದಷ್ಟು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಗಾಳಿಗೆ ತೂರಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆ ಜಾರಿಗೆ ತರಲಾಗಿತ್ತು. ಈ ಕಾಯ್ದೆ ಪ್ರಕಾರ ಬಾಡಿಗೆ ತಾಯಿಯು ಆರೋಗ್ಯವಾಗಿರಬೇಕು ಹಾಗೂ ಆಕೆಯ ವಯಸ್ಸು 21-35ರ ಅಂತದರಲ್ಲಿ ಇರಬೇಕು. ಆಕೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಬಾಡಿಗೆ ತಾಯ್ತನವನ್ನು ಆಯ್ಕೆ ಮಾಡಬಹುದು. ಇದರ ಜತೆಗೆ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ. ಅಂದರೆ ಮಗುವನ್ನು ಹೆರುವ ಮಹಿಳೆ ದಂಪತಿಯಿಂದ ಹಣ ಪಡೆಯುವಂತಿಲ್ಲ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಶಿವನ್ ಪಾಲಿಸಿಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಸಂಬಂಧ ಸ್ಪಷ್ಟನೆ ನೀಡಲು ಸೂಚಿಸಿದೆ. ವೈದ್ಯಕೀಯ ಸೇವೆಗಳ ನಿರ್ದೇಶನಾಲಯ ಈ ಸಂಬಂಧ ತನಿಖೆ ನಡೆಸಲಿದೆ.
ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್ ಶಿವನ್. ನಟಿಯಾಗಿ ನಯನತಾರಾ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಅದೇ ರೀತಿ, ವಿಘ್ನೇಶ್ ಶಿವನ್ ಅವರು ನಿರ್ದೇಶಕನಾಗಿ ಬ್ಯುಸಿ ಆಗಿದ್ದಾರೆ. ಇವರಿಬ್ಬರು ಬಾಡಿಗೆ ತಾಯಿ ಮೂಲಕ ಮಗು ಪಡೆಯಬಹುದು ಎಂಬ ಅನುಮಾನ ಮೊದಲೇ ಮೂಡಿತ್ತು. ಆ ಬಗ್ಗೆ ಒಂದಷ್ಟು ಸುದ್ದಿಗಳು ಹರಿದಾಡಿದ್ದವು. ಆ ಅನುಮಾನ ಈಗ ನಿಜವಾಗಿದೆ. ಈ ಮಧ್ಯೆ ಅವರು ಸಮಸ್ಯೆಗೆ ಸಿಲುಕಿದ್ದಾರೆ.
ಬಾಡಿಗೆ ತಾಯಿ ಮೂಲಕ ಜನಿಸಿರುವ ಈ ಅವಳಿ ಗಂಡು ಮಕ್ಕಳಿಗೆ ಉಯಿರ್ ಮತ್ತು ಉಳಗಂ ಎಂದು ಹೆಸರು ಇಡಲಾಗಿದೆ. ‘ನಯನ್ ಮತ್ತು ನಾನು ಅಪ್ಪ-ಅಮ್ಮ ಆಗಿದ್ದೇವೆ. ನಮಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಪ್ರಾರ್ಥನೆ, ಹಿರಿಯರ ಆಶೀರ್ವಾದವು ಈ ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್ ಮತ್ತು ಉಳಗಂ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ವಿಘ್ನೇಶ್ ಶಿವನ್ ಪೋಸ್ಟ್ ಮಾಡಿದ್ದರು.
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…