ತಮಿಳುನಾಡು: ನಯನತಾರಾ ಹಾಗೂ ವಿಘ್ನೇಶ್ ಶಿವನ್ ದಂಪತಿ ಮದುವೆ ಆದ ನಾಲ್ಕೇ ತಿಂಗಳಿಗೆ ಮಗು ಪಡೆದಿದ್ದಾರೆ. ಬಾಡಿಗೆ ತಾಯ್ತನದ ಮೂಲಕ ಮಗು ಪಡೆದ ಬಗ್ಗೆ ದಂಪತಿ ಮಾಹಿತಿ ಹಂಚಿಕೊಂಡಿದ್ದಾರೆ. ಈಗ ಇವರು ಮಗು ಪಡೆದ ವಿಚಾರ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಬಾಡಿಗೆ ತಾಯ್ತನದ ವಿಚಾರದಲ್ಲಿ ಸರ್ಕಾರ ಒಂದಷ್ಟು ನಿಯಮಗಳನ್ನು ರೂಪಿಸಿದೆ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಗಾಳಿಗೆ ತೂರಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಪ್ರಕರಣದಲ್ಲಿ ತನಿಖೆಗೆ ಆದೇಶಿಸಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಬಾಡಿಗೆ ತಾಯ್ತನ (ನಿಯಂತ್ರಣ) ಕಾಯ್ದೆ ಜಾರಿಗೆ ತರಲಾಗಿತ್ತು. ಈ ಕಾಯ್ದೆ ಪ್ರಕಾರ ಬಾಡಿಗೆ ತಾಯಿಯು ಆರೋಗ್ಯವಾಗಿರಬೇಕು ಹಾಗೂ ಆಕೆಯ ವಯಸ್ಸು 21-35ರ ಅಂತದರಲ್ಲಿ ಇರಬೇಕು. ಆಕೆ ಜೀವಿತಾವಧಿಯಲ್ಲಿ ಒಮ್ಮೆ ಮಾತ್ರ ಬಾಡಿಗೆ ತಾಯ್ತನವನ್ನು ಆಯ್ಕೆ ಮಾಡಬಹುದು. ಇದರ ಜತೆಗೆ ವಾಣಿಜ್ಯ ಬಾಡಿಗೆ ತಾಯ್ತನದ ಮೇಲೆ ನಿರ್ಬಂಧ ಹೇರಲಾಗಿದೆ. ಅಂದರೆ ಮಗುವನ್ನು ಹೆರುವ ಮಹಿಳೆ ದಂಪತಿಯಿಂದ ಹಣ ಪಡೆಯುವಂತಿಲ್ಲ. ಈ ನಿಯಮಗಳನ್ನು ನಯತಾರಾ ಹಾಗೂ ವಿಘ್ನೇಶ್ ಶಿವನ್ ಪಾಲಿಸಿಲ್ಲ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರ ಈ ಸಂಬಂಧ ಸ್ಪಷ್ಟನೆ ನೀಡಲು ಸೂಚಿಸಿದೆ. ವೈದ್ಯಕೀಯ ಸೇವೆಗಳ ನಿರ್ದೇಶನಾಲಯ ಈ ಸಂಬಂಧ ತನಿಖೆ ನಡೆಸಲಿದೆ.
ಹಲವು ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಮದುವೆ ಆದವರು ನಯನತಾರಾ ಹಾಗೂ ವಿಘ್ನೇಶ್ ಶಿವನ್. ನಟಿಯಾಗಿ ನಯನತಾರಾ ಅವರಿಗೆ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಇದೆ. ಅದೇ ರೀತಿ, ವಿಘ್ನೇಶ್ ಶಿವನ್ ಅವರು ನಿರ್ದೇಶಕನಾಗಿ ಬ್ಯುಸಿ ಆಗಿದ್ದಾರೆ. ಇವರಿಬ್ಬರು ಬಾಡಿಗೆ ತಾಯಿ ಮೂಲಕ ಮಗು ಪಡೆಯಬಹುದು ಎಂಬ ಅನುಮಾನ ಮೊದಲೇ ಮೂಡಿತ್ತು. ಆ ಬಗ್ಗೆ ಒಂದಷ್ಟು ಸುದ್ದಿಗಳು ಹರಿದಾಡಿದ್ದವು. ಆ ಅನುಮಾನ ಈಗ ನಿಜವಾಗಿದೆ. ಈ ಮಧ್ಯೆ ಅವರು ಸಮಸ್ಯೆಗೆ ಸಿಲುಕಿದ್ದಾರೆ.
ಬಾಡಿಗೆ ತಾಯಿ ಮೂಲಕ ಜನಿಸಿರುವ ಈ ಅವಳಿ ಗಂಡು ಮಕ್ಕಳಿಗೆ ಉಯಿರ್ ಮತ್ತು ಉಳಗಂ ಎಂದು ಹೆಸರು ಇಡಲಾಗಿದೆ. ‘ನಯನ್ ಮತ್ತು ನಾನು ಅಪ್ಪ-ಅಮ್ಮ ಆಗಿದ್ದೇವೆ. ನಮಗೆ ಅವಳಿ ಗಂಡು ಮಕ್ಕಳು ಜನಿಸಿದ್ದಾರೆ. ನಮ್ಮ ಪ್ರಾರ್ಥನೆ, ಹಿರಿಯರ ಆಶೀರ್ವಾದವು ಈ ಮಕ್ಕಳ ರೂಪದಲ್ಲಿ ಸಿಕ್ಕಿದೆ. ನಮ್ಮ ಉಯಿರ್ ಮತ್ತು ಉಳಗಂ ಮೇಲೆ ನಿಮ್ಮ ಆಶೀರ್ವಾದ ಇರಲಿ’ ಎಂದು ವಿಘ್ನೇಶ್ ಶಿವನ್ ಪೋಸ್ಟ್ ಮಾಡಿದ್ದರು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…