ಚಿತ್ರ ಮಂಜರಿ

ತಮಿಳು ಸ್ಟಾರ್ ನಟ ಧನುಶ್​ಗೆ ನಿರ್ಮಾಪಕರ ಸಂಘದಿಂದ ನೊಟೀಸ್ : ಬ್ಯಾನ್ ಮಾಡುವ ಎಚ್ಚರಿಕೆ

ನಟ ಧನುಶ್, ದಕ್ಷಿಣ ಭಾರತದ ಪ್ರತಿಭಾವಂತ ನಟ. ಯಾವುದೇ ರೀತಿಯ ಪಾತ್ರವಾದರೂ ಲೀಲಾಜಾಲವಾಗಿ ನಿರ್ವಹಿಸಬಲ್ಲ ನಟ ಧನುಶ್. ಬಾಲಿವುಡ್​ನಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿರುವ ಧನುಶ್​ ಹಾಲಿವುಡ್​ನಲ್ಲ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾನಲ್ಲಿ ಹಾಲಿವುಡ್ ಸ್ಟಾರ್ ನಟರೊಡನೆ ನಟಿಸಿ ಬಂದಿದ್ದಾರೆ. ಆದರೆ ಇದೀಗ ಹಠಾತ್ತನೆ ತಮಿಳು ಚಿತ್ರರಂಗದ ನಿರ್ಮಾಪಕರ ಸಂಘ ಧನುಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು ನೊಟೀಸ್ ಜಾರಿ ಮಾಡಿದೆ. ತಮಿಳು ಚಿತ್ರರಂಗದಿಂದ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಸ್ಟಾರ್ ನಟ ಧನುಶ್ ಅವರಿಗೆ ತಮಿಳು ಚಿತ್ರರಂಗದ ನಿರ್ಮಾಪಕ ಸಂಘವು ನೊಟೀಸ್ ನೀಡಿದ್ದು ಧನುಶ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನಟ ಧನುಶ್ ಮಾತ್ರವೇ ಅಲ್ಲದೆ ಇತರೆ ಕೆಲವು ಜನಪ್ರಿಯ ತಮಿಳು ನಟರಿಗೂ ನೊಟೀಸ್ ನೀಡಲಾಗಿದೆ ಎನ್ನಲಾಗುತ್ತಿದೆ. ನಟ ಧನುಶ್ ನಿರ್ಮಾಪಕರೊಬ್ಬರಿಗೆ ಮುಂಗಡ ಹಣ ಪಡೆದು ಈಗ ಸಿನಿಮಾದಲ್ಲಿ ನಟಿಸಲು ಸೂಕ್ತ ಡೇಟ್ಸ್ ನೀಡುತ್ತಿಲ್ಲವಂತೆ ಮಾತ್ರವಲ್ಲದೆ ಸಬೂಬುಗಳನ್ನು ಹೇಳುತ್ತಿದ್ದಾರಂತೆ. ಇದೇ ಕಾರಣಕ್ಕೆ ಧನುಶ್​ಗೆ ನೊಟೀಸ್ ನೀಡಿದೆ ನಿರ್ಮಾಪಕ ಸಂಘ.

ನಟ ಧನುಶ್, ತಮಿಳಿನ ಶ್ರೀ ತೆನಂದಾಲ್ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಒಂದಕ್ಕಾಗಿ ಮುಂಗಡ ಪಡೆದಿದ್ದರು. ಆದರೆ ಆ ಸಿನಿಮಾದಲ್ಲಿ ಈ ವರೆಗೆ ನಟಿಸಿಲ್ಲ. ಹಾಗಾಗಿ ತೆನಂದಾಲ್ ನಿರ್ಮಾಣ ಸಂಸ್ಥೆಯು ತಮಿಳು ಫಿಲಂ ಪ್ರೊಡ್ಯೂಸರ್ಸ್ ಕೌನ್ಸಿಲ್​ಗೆ (ಟಿಎಫ್​ಪಿಸಿ) ದೂರು ನೀಡಿತ್ತು. ಹಾಗಾಗಿ ಈಗ ಟಿಎಫ್​ಪಿಸಿಯು ಧನುಶ್​ಗೆ ನೊಟೀಸ್ ಜಾರಿ ಮಾಡಿದ್ದು, ನಿರ್ಮಾಪಕರ ಸಂಘದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ಸಹ ನೀಡಿದೆ.
ಧನುಶ್ ಮಾತ್ರವೇ ಅಲ್ಲದೆ ತಮಿಳಿನ ಇತರೆ ನಟರಾದ ಸಿಲಂಬರಸನ್ ಅಲಿಯಾಸ್ ಸಿಂಭು. ಎಸ್​ಜೆ ಸೂರ್ಯ, ವಿಶಾಲ್ ಹಾಸ್ಯನಟ ಯೋಗಿಬಾಬು ಅವರುಗಳಿಗೂ ನಿರ್ಮಾಪಕರ ಸಂಘ ನೊಟೀಸ್ ನೀಡಿದ್ದು ಅಶಿಸ್ತಿನ ಕಾರಣದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ನೀಡಿದೆ. ಪಡೆದ ಮುಂಗಡಕ್ಕೆ ಸಿನಿಮಾ ಮಾಡಿ ಕೊಡಿ ಇಲ್ಲವಾ ಬಡ್ಡಿ ಸಮೇತ ಮುಂಗಡ ಹಣ ವಾಪಸ್ ಮಾಡಿ ಎಂದು ನಿರ್ಮಾಪಕರ ಸಂಘ ನಟರಿಗೆ ಷರತ್ತು ಹಾಕಿದೆ.

ಕೆಲವು ದಿನಗಳ ಹಿಂದಷ್ಟೆ ಮಲಯಾಳಂ ಚಿತ್ರರಂಗದಲ್ಲಿ ನಿರ್ಮಾಪಕರ ಸಂಘವು ಇಬ್ಬರು ಜನಪ್ರಿಯ ನಟರ ಮೇಲೆ ನಿಷೇಧ ಹೇರಿತ್ತು. ಒಬ್ಬ ನಟ ಕ್ಷಮೆ ಕೇಳಿದ ಬಳಿಕ ಆತನ ಮೇಲಿದ್ದ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು. ಇನ್ನೊಬ್ಬ ನಟನ ಮೇಲಿನ ನಿಷೇಧ ಜಾರಿಯಲ್ಲಿದೆ. ಈಗ ಅದೇ ಮಾದರಿಯನ್ನು ತಮಿಳು ಚಿತ್ರರಂಗದ ನಿರ್ಮಾಪಕರ ಸಂಘವೂ ಮಾಡ ಹೊರಟಿದೆ.

ನಟ ಧನುಶ್, ತಮಿಳಿನ ಅತ್ಯಂತ ವೃತ್ತಿಪರ ನಟರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಆದರೆ ಮುಂಗಡ ಪಡೆದು ಸಿನಿಮಾದಲ್ಲಿ ಏಕೆ ನಟಿಸಿಲ್ಲ ಎಂಬುದು ತಿಳಿದು ಬಂದಿಲ್ಲ. ಧನುಶ್ ನಟಿಸಿರುವ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅದಾದ ಬಳಿಕ ಬಾಲಿವುಡ್ ಸಿನಿಮಾದಲ್ಲಿ ಧನುಶ್ ನಟಿಸುತ್ತಿದ್ದಾರೆ. ಆ ಬಳಿಕ ಆಯರತ್ತಿಲ್ ಒರುವನ್ ಸಿನಿಮಾದಲ್ಲಿ ಧನುಶ್ ನಟಿಸಲಿದ್ದಾರೆ.

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

10 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago