ಚಿತ್ರ ಮಂಜರಿ

ತಮಿಳು ಸ್ಟಾರ್ ನಟ ಧನುಶ್​ಗೆ ನಿರ್ಮಾಪಕರ ಸಂಘದಿಂದ ನೊಟೀಸ್ : ಬ್ಯಾನ್ ಮಾಡುವ ಎಚ್ಚರಿಕೆ

ನಟ ಧನುಶ್, ದಕ್ಷಿಣ ಭಾರತದ ಪ್ರತಿಭಾವಂತ ನಟ. ಯಾವುದೇ ರೀತಿಯ ಪಾತ್ರವಾದರೂ ಲೀಲಾಜಾಲವಾಗಿ ನಿರ್ವಹಿಸಬಲ್ಲ ನಟ ಧನುಶ್. ಬಾಲಿವುಡ್​ನಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿರುವ ಧನುಶ್​ ಹಾಲಿವುಡ್​ನಲ್ಲ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾನಲ್ಲಿ ಹಾಲಿವುಡ್ ಸ್ಟಾರ್ ನಟರೊಡನೆ ನಟಿಸಿ ಬಂದಿದ್ದಾರೆ. ಆದರೆ ಇದೀಗ ಹಠಾತ್ತನೆ ತಮಿಳು ಚಿತ್ರರಂಗದ ನಿರ್ಮಾಪಕರ ಸಂಘ ಧನುಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು ನೊಟೀಸ್ ಜಾರಿ ಮಾಡಿದೆ. ತಮಿಳು ಚಿತ್ರರಂಗದಿಂದ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಸ್ಟಾರ್ ನಟ ಧನುಶ್ ಅವರಿಗೆ ತಮಿಳು ಚಿತ್ರರಂಗದ ನಿರ್ಮಾಪಕ ಸಂಘವು ನೊಟೀಸ್ ನೀಡಿದ್ದು ಧನುಶ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನಟ ಧನುಶ್ ಮಾತ್ರವೇ ಅಲ್ಲದೆ ಇತರೆ ಕೆಲವು ಜನಪ್ರಿಯ ತಮಿಳು ನಟರಿಗೂ ನೊಟೀಸ್ ನೀಡಲಾಗಿದೆ ಎನ್ನಲಾಗುತ್ತಿದೆ. ನಟ ಧನುಶ್ ನಿರ್ಮಾಪಕರೊಬ್ಬರಿಗೆ ಮುಂಗಡ ಹಣ ಪಡೆದು ಈಗ ಸಿನಿಮಾದಲ್ಲಿ ನಟಿಸಲು ಸೂಕ್ತ ಡೇಟ್ಸ್ ನೀಡುತ್ತಿಲ್ಲವಂತೆ ಮಾತ್ರವಲ್ಲದೆ ಸಬೂಬುಗಳನ್ನು ಹೇಳುತ್ತಿದ್ದಾರಂತೆ. ಇದೇ ಕಾರಣಕ್ಕೆ ಧನುಶ್​ಗೆ ನೊಟೀಸ್ ನೀಡಿದೆ ನಿರ್ಮಾಪಕ ಸಂಘ.

ನಟ ಧನುಶ್, ತಮಿಳಿನ ಶ್ರೀ ತೆನಂದಾಲ್ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಒಂದಕ್ಕಾಗಿ ಮುಂಗಡ ಪಡೆದಿದ್ದರು. ಆದರೆ ಆ ಸಿನಿಮಾದಲ್ಲಿ ಈ ವರೆಗೆ ನಟಿಸಿಲ್ಲ. ಹಾಗಾಗಿ ತೆನಂದಾಲ್ ನಿರ್ಮಾಣ ಸಂಸ್ಥೆಯು ತಮಿಳು ಫಿಲಂ ಪ್ರೊಡ್ಯೂಸರ್ಸ್ ಕೌನ್ಸಿಲ್​ಗೆ (ಟಿಎಫ್​ಪಿಸಿ) ದೂರು ನೀಡಿತ್ತು. ಹಾಗಾಗಿ ಈಗ ಟಿಎಫ್​ಪಿಸಿಯು ಧನುಶ್​ಗೆ ನೊಟೀಸ್ ಜಾರಿ ಮಾಡಿದ್ದು, ನಿರ್ಮಾಪಕರ ಸಂಘದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ಸಹ ನೀಡಿದೆ.
ಧನುಶ್ ಮಾತ್ರವೇ ಅಲ್ಲದೆ ತಮಿಳಿನ ಇತರೆ ನಟರಾದ ಸಿಲಂಬರಸನ್ ಅಲಿಯಾಸ್ ಸಿಂಭು. ಎಸ್​ಜೆ ಸೂರ್ಯ, ವಿಶಾಲ್ ಹಾಸ್ಯನಟ ಯೋಗಿಬಾಬು ಅವರುಗಳಿಗೂ ನಿರ್ಮಾಪಕರ ಸಂಘ ನೊಟೀಸ್ ನೀಡಿದ್ದು ಅಶಿಸ್ತಿನ ಕಾರಣದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ನೀಡಿದೆ. ಪಡೆದ ಮುಂಗಡಕ್ಕೆ ಸಿನಿಮಾ ಮಾಡಿ ಕೊಡಿ ಇಲ್ಲವಾ ಬಡ್ಡಿ ಸಮೇತ ಮುಂಗಡ ಹಣ ವಾಪಸ್ ಮಾಡಿ ಎಂದು ನಿರ್ಮಾಪಕರ ಸಂಘ ನಟರಿಗೆ ಷರತ್ತು ಹಾಕಿದೆ.

ಕೆಲವು ದಿನಗಳ ಹಿಂದಷ್ಟೆ ಮಲಯಾಳಂ ಚಿತ್ರರಂಗದಲ್ಲಿ ನಿರ್ಮಾಪಕರ ಸಂಘವು ಇಬ್ಬರು ಜನಪ್ರಿಯ ನಟರ ಮೇಲೆ ನಿಷೇಧ ಹೇರಿತ್ತು. ಒಬ್ಬ ನಟ ಕ್ಷಮೆ ಕೇಳಿದ ಬಳಿಕ ಆತನ ಮೇಲಿದ್ದ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು. ಇನ್ನೊಬ್ಬ ನಟನ ಮೇಲಿನ ನಿಷೇಧ ಜಾರಿಯಲ್ಲಿದೆ. ಈಗ ಅದೇ ಮಾದರಿಯನ್ನು ತಮಿಳು ಚಿತ್ರರಂಗದ ನಿರ್ಮಾಪಕರ ಸಂಘವೂ ಮಾಡ ಹೊರಟಿದೆ.

ನಟ ಧನುಶ್, ತಮಿಳಿನ ಅತ್ಯಂತ ವೃತ್ತಿಪರ ನಟರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಆದರೆ ಮುಂಗಡ ಪಡೆದು ಸಿನಿಮಾದಲ್ಲಿ ಏಕೆ ನಟಿಸಿಲ್ಲ ಎಂಬುದು ತಿಳಿದು ಬಂದಿಲ್ಲ. ಧನುಶ್ ನಟಿಸಿರುವ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅದಾದ ಬಳಿಕ ಬಾಲಿವುಡ್ ಸಿನಿಮಾದಲ್ಲಿ ಧನುಶ್ ನಟಿಸುತ್ತಿದ್ದಾರೆ. ಆ ಬಳಿಕ ಆಯರತ್ತಿಲ್ ಒರುವನ್ ಸಿನಿಮಾದಲ್ಲಿ ಧನುಶ್ ನಟಿಸಲಿದ್ದಾರೆ.

lokesh

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

34 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

1 hour ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

1 hour ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

2 hours ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

2 hours ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

2 hours ago