ಚಿತ್ರ ಮಂಜರಿ

ತಮಿಳು ಸ್ಟಾರ್ ನಟ ಧನುಶ್​ಗೆ ನಿರ್ಮಾಪಕರ ಸಂಘದಿಂದ ನೊಟೀಸ್ : ಬ್ಯಾನ್ ಮಾಡುವ ಎಚ್ಚರಿಕೆ

ನಟ ಧನುಶ್, ದಕ್ಷಿಣ ಭಾರತದ ಪ್ರತಿಭಾವಂತ ನಟ. ಯಾವುದೇ ರೀತಿಯ ಪಾತ್ರವಾದರೂ ಲೀಲಾಜಾಲವಾಗಿ ನಿರ್ವಹಿಸಬಲ್ಲ ನಟ ಧನುಶ್. ಬಾಲಿವುಡ್​ನಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿರುವ ಧನುಶ್​ ಹಾಲಿವುಡ್​ನಲ್ಲ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾನಲ್ಲಿ ಹಾಲಿವುಡ್ ಸ್ಟಾರ್ ನಟರೊಡನೆ ನಟಿಸಿ ಬಂದಿದ್ದಾರೆ. ಆದರೆ ಇದೀಗ ಹಠಾತ್ತನೆ ತಮಿಳು ಚಿತ್ರರಂಗದ ನಿರ್ಮಾಪಕರ ಸಂಘ ಧನುಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು ನೊಟೀಸ್ ಜಾರಿ ಮಾಡಿದೆ. ತಮಿಳು ಚಿತ್ರರಂಗದಿಂದ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಸ್ಟಾರ್ ನಟ ಧನುಶ್ ಅವರಿಗೆ ತಮಿಳು ಚಿತ್ರರಂಗದ ನಿರ್ಮಾಪಕ ಸಂಘವು ನೊಟೀಸ್ ನೀಡಿದ್ದು ಧನುಶ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನಟ ಧನುಶ್ ಮಾತ್ರವೇ ಅಲ್ಲದೆ ಇತರೆ ಕೆಲವು ಜನಪ್ರಿಯ ತಮಿಳು ನಟರಿಗೂ ನೊಟೀಸ್ ನೀಡಲಾಗಿದೆ ಎನ್ನಲಾಗುತ್ತಿದೆ. ನಟ ಧನುಶ್ ನಿರ್ಮಾಪಕರೊಬ್ಬರಿಗೆ ಮುಂಗಡ ಹಣ ಪಡೆದು ಈಗ ಸಿನಿಮಾದಲ್ಲಿ ನಟಿಸಲು ಸೂಕ್ತ ಡೇಟ್ಸ್ ನೀಡುತ್ತಿಲ್ಲವಂತೆ ಮಾತ್ರವಲ್ಲದೆ ಸಬೂಬುಗಳನ್ನು ಹೇಳುತ್ತಿದ್ದಾರಂತೆ. ಇದೇ ಕಾರಣಕ್ಕೆ ಧನುಶ್​ಗೆ ನೊಟೀಸ್ ನೀಡಿದೆ ನಿರ್ಮಾಪಕ ಸಂಘ.

ನಟ ಧನುಶ್, ತಮಿಳಿನ ಶ್ರೀ ತೆನಂದಾಲ್ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಒಂದಕ್ಕಾಗಿ ಮುಂಗಡ ಪಡೆದಿದ್ದರು. ಆದರೆ ಆ ಸಿನಿಮಾದಲ್ಲಿ ಈ ವರೆಗೆ ನಟಿಸಿಲ್ಲ. ಹಾಗಾಗಿ ತೆನಂದಾಲ್ ನಿರ್ಮಾಣ ಸಂಸ್ಥೆಯು ತಮಿಳು ಫಿಲಂ ಪ್ರೊಡ್ಯೂಸರ್ಸ್ ಕೌನ್ಸಿಲ್​ಗೆ (ಟಿಎಫ್​ಪಿಸಿ) ದೂರು ನೀಡಿತ್ತು. ಹಾಗಾಗಿ ಈಗ ಟಿಎಫ್​ಪಿಸಿಯು ಧನುಶ್​ಗೆ ನೊಟೀಸ್ ಜಾರಿ ಮಾಡಿದ್ದು, ನಿರ್ಮಾಪಕರ ಸಂಘದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ಸಹ ನೀಡಿದೆ.
ಧನುಶ್ ಮಾತ್ರವೇ ಅಲ್ಲದೆ ತಮಿಳಿನ ಇತರೆ ನಟರಾದ ಸಿಲಂಬರಸನ್ ಅಲಿಯಾಸ್ ಸಿಂಭು. ಎಸ್​ಜೆ ಸೂರ್ಯ, ವಿಶಾಲ್ ಹಾಸ್ಯನಟ ಯೋಗಿಬಾಬು ಅವರುಗಳಿಗೂ ನಿರ್ಮಾಪಕರ ಸಂಘ ನೊಟೀಸ್ ನೀಡಿದ್ದು ಅಶಿಸ್ತಿನ ಕಾರಣದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ನೀಡಿದೆ. ಪಡೆದ ಮುಂಗಡಕ್ಕೆ ಸಿನಿಮಾ ಮಾಡಿ ಕೊಡಿ ಇಲ್ಲವಾ ಬಡ್ಡಿ ಸಮೇತ ಮುಂಗಡ ಹಣ ವಾಪಸ್ ಮಾಡಿ ಎಂದು ನಿರ್ಮಾಪಕರ ಸಂಘ ನಟರಿಗೆ ಷರತ್ತು ಹಾಕಿದೆ.

ಕೆಲವು ದಿನಗಳ ಹಿಂದಷ್ಟೆ ಮಲಯಾಳಂ ಚಿತ್ರರಂಗದಲ್ಲಿ ನಿರ್ಮಾಪಕರ ಸಂಘವು ಇಬ್ಬರು ಜನಪ್ರಿಯ ನಟರ ಮೇಲೆ ನಿಷೇಧ ಹೇರಿತ್ತು. ಒಬ್ಬ ನಟ ಕ್ಷಮೆ ಕೇಳಿದ ಬಳಿಕ ಆತನ ಮೇಲಿದ್ದ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು. ಇನ್ನೊಬ್ಬ ನಟನ ಮೇಲಿನ ನಿಷೇಧ ಜಾರಿಯಲ್ಲಿದೆ. ಈಗ ಅದೇ ಮಾದರಿಯನ್ನು ತಮಿಳು ಚಿತ್ರರಂಗದ ನಿರ್ಮಾಪಕರ ಸಂಘವೂ ಮಾಡ ಹೊರಟಿದೆ.

ನಟ ಧನುಶ್, ತಮಿಳಿನ ಅತ್ಯಂತ ವೃತ್ತಿಪರ ನಟರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಆದರೆ ಮುಂಗಡ ಪಡೆದು ಸಿನಿಮಾದಲ್ಲಿ ಏಕೆ ನಟಿಸಿಲ್ಲ ಎಂಬುದು ತಿಳಿದು ಬಂದಿಲ್ಲ. ಧನುಶ್ ನಟಿಸಿರುವ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅದಾದ ಬಳಿಕ ಬಾಲಿವುಡ್ ಸಿನಿಮಾದಲ್ಲಿ ಧನುಶ್ ನಟಿಸುತ್ತಿದ್ದಾರೆ. ಆ ಬಳಿಕ ಆಯರತ್ತಿಲ್ ಒರುವನ್ ಸಿನಿಮಾದಲ್ಲಿ ಧನುಶ್ ನಟಿಸಲಿದ್ದಾರೆ.

lokesh

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

9 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

9 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

10 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

10 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

10 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

11 hours ago