ಚಿತ್ರ ಮಂಜರಿ

ತಮಿಳು ಸ್ಟಾರ್ ನಟ ಧನುಶ್​ಗೆ ನಿರ್ಮಾಪಕರ ಸಂಘದಿಂದ ನೊಟೀಸ್ : ಬ್ಯಾನ್ ಮಾಡುವ ಎಚ್ಚರಿಕೆ

ನಟ ಧನುಶ್, ದಕ್ಷಿಣ ಭಾರತದ ಪ್ರತಿಭಾವಂತ ನಟ. ಯಾವುದೇ ರೀತಿಯ ಪಾತ್ರವಾದರೂ ಲೀಲಾಜಾಲವಾಗಿ ನಿರ್ವಹಿಸಬಲ್ಲ ನಟ ಧನುಶ್. ಬಾಲಿವುಡ್​ನಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿರುವ ಧನುಶ್​ ಹಾಲಿವುಡ್​ನಲ್ಲ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾನಲ್ಲಿ ಹಾಲಿವುಡ್ ಸ್ಟಾರ್ ನಟರೊಡನೆ ನಟಿಸಿ ಬಂದಿದ್ದಾರೆ. ಆದರೆ ಇದೀಗ ಹಠಾತ್ತನೆ ತಮಿಳು ಚಿತ್ರರಂಗದ ನಿರ್ಮಾಪಕರ ಸಂಘ ಧನುಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು ನೊಟೀಸ್ ಜಾರಿ ಮಾಡಿದೆ. ತಮಿಳು ಚಿತ್ರರಂಗದಿಂದ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಸ್ಟಾರ್ ನಟ ಧನುಶ್ ಅವರಿಗೆ ತಮಿಳು ಚಿತ್ರರಂಗದ ನಿರ್ಮಾಪಕ ಸಂಘವು ನೊಟೀಸ್ ನೀಡಿದ್ದು ಧನುಶ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನಟ ಧನುಶ್ ಮಾತ್ರವೇ ಅಲ್ಲದೆ ಇತರೆ ಕೆಲವು ಜನಪ್ರಿಯ ತಮಿಳು ನಟರಿಗೂ ನೊಟೀಸ್ ನೀಡಲಾಗಿದೆ ಎನ್ನಲಾಗುತ್ತಿದೆ. ನಟ ಧನುಶ್ ನಿರ್ಮಾಪಕರೊಬ್ಬರಿಗೆ ಮುಂಗಡ ಹಣ ಪಡೆದು ಈಗ ಸಿನಿಮಾದಲ್ಲಿ ನಟಿಸಲು ಸೂಕ್ತ ಡೇಟ್ಸ್ ನೀಡುತ್ತಿಲ್ಲವಂತೆ ಮಾತ್ರವಲ್ಲದೆ ಸಬೂಬುಗಳನ್ನು ಹೇಳುತ್ತಿದ್ದಾರಂತೆ. ಇದೇ ಕಾರಣಕ್ಕೆ ಧನುಶ್​ಗೆ ನೊಟೀಸ್ ನೀಡಿದೆ ನಿರ್ಮಾಪಕ ಸಂಘ.

ನಟ ಧನುಶ್, ತಮಿಳಿನ ಶ್ರೀ ತೆನಂದಾಲ್ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಒಂದಕ್ಕಾಗಿ ಮುಂಗಡ ಪಡೆದಿದ್ದರು. ಆದರೆ ಆ ಸಿನಿಮಾದಲ್ಲಿ ಈ ವರೆಗೆ ನಟಿಸಿಲ್ಲ. ಹಾಗಾಗಿ ತೆನಂದಾಲ್ ನಿರ್ಮಾಣ ಸಂಸ್ಥೆಯು ತಮಿಳು ಫಿಲಂ ಪ್ರೊಡ್ಯೂಸರ್ಸ್ ಕೌನ್ಸಿಲ್​ಗೆ (ಟಿಎಫ್​ಪಿಸಿ) ದೂರು ನೀಡಿತ್ತು. ಹಾಗಾಗಿ ಈಗ ಟಿಎಫ್​ಪಿಸಿಯು ಧನುಶ್​ಗೆ ನೊಟೀಸ್ ಜಾರಿ ಮಾಡಿದ್ದು, ನಿರ್ಮಾಪಕರ ಸಂಘದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ಸಹ ನೀಡಿದೆ.
ಧನುಶ್ ಮಾತ್ರವೇ ಅಲ್ಲದೆ ತಮಿಳಿನ ಇತರೆ ನಟರಾದ ಸಿಲಂಬರಸನ್ ಅಲಿಯಾಸ್ ಸಿಂಭು. ಎಸ್​ಜೆ ಸೂರ್ಯ, ವಿಶಾಲ್ ಹಾಸ್ಯನಟ ಯೋಗಿಬಾಬು ಅವರುಗಳಿಗೂ ನಿರ್ಮಾಪಕರ ಸಂಘ ನೊಟೀಸ್ ನೀಡಿದ್ದು ಅಶಿಸ್ತಿನ ಕಾರಣದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ನೀಡಿದೆ. ಪಡೆದ ಮುಂಗಡಕ್ಕೆ ಸಿನಿಮಾ ಮಾಡಿ ಕೊಡಿ ಇಲ್ಲವಾ ಬಡ್ಡಿ ಸಮೇತ ಮುಂಗಡ ಹಣ ವಾಪಸ್ ಮಾಡಿ ಎಂದು ನಿರ್ಮಾಪಕರ ಸಂಘ ನಟರಿಗೆ ಷರತ್ತು ಹಾಕಿದೆ.

ಕೆಲವು ದಿನಗಳ ಹಿಂದಷ್ಟೆ ಮಲಯಾಳಂ ಚಿತ್ರರಂಗದಲ್ಲಿ ನಿರ್ಮಾಪಕರ ಸಂಘವು ಇಬ್ಬರು ಜನಪ್ರಿಯ ನಟರ ಮೇಲೆ ನಿಷೇಧ ಹೇರಿತ್ತು. ಒಬ್ಬ ನಟ ಕ್ಷಮೆ ಕೇಳಿದ ಬಳಿಕ ಆತನ ಮೇಲಿದ್ದ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು. ಇನ್ನೊಬ್ಬ ನಟನ ಮೇಲಿನ ನಿಷೇಧ ಜಾರಿಯಲ್ಲಿದೆ. ಈಗ ಅದೇ ಮಾದರಿಯನ್ನು ತಮಿಳು ಚಿತ್ರರಂಗದ ನಿರ್ಮಾಪಕರ ಸಂಘವೂ ಮಾಡ ಹೊರಟಿದೆ.

ನಟ ಧನುಶ್, ತಮಿಳಿನ ಅತ್ಯಂತ ವೃತ್ತಿಪರ ನಟರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಆದರೆ ಮುಂಗಡ ಪಡೆದು ಸಿನಿಮಾದಲ್ಲಿ ಏಕೆ ನಟಿಸಿಲ್ಲ ಎಂಬುದು ತಿಳಿದು ಬಂದಿಲ್ಲ. ಧನುಶ್ ನಟಿಸಿರುವ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅದಾದ ಬಳಿಕ ಬಾಲಿವುಡ್ ಸಿನಿಮಾದಲ್ಲಿ ಧನುಶ್ ನಟಿಸುತ್ತಿದ್ದಾರೆ. ಆ ಬಳಿಕ ಆಯರತ್ತಿಲ್ ಒರುವನ್ ಸಿನಿಮಾದಲ್ಲಿ ಧನುಶ್ ನಟಿಸಲಿದ್ದಾರೆ.

lokesh

Recent Posts

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

29 mins ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

9 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

9 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

9 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

9 hours ago