ಚಿತ್ರ ಮಂಜರಿ

ತಮಿಳು ಸ್ಟಾರ್ ನಟ ಧನುಶ್​ಗೆ ನಿರ್ಮಾಪಕರ ಸಂಘದಿಂದ ನೊಟೀಸ್ : ಬ್ಯಾನ್ ಮಾಡುವ ಎಚ್ಚರಿಕೆ

ನಟ ಧನುಶ್, ದಕ್ಷಿಣ ಭಾರತದ ಪ್ರತಿಭಾವಂತ ನಟ. ಯಾವುದೇ ರೀತಿಯ ಪಾತ್ರವಾದರೂ ಲೀಲಾಜಾಲವಾಗಿ ನಿರ್ವಹಿಸಬಲ್ಲ ನಟ ಧನುಶ್. ಬಾಲಿವುಡ್​ನಲ್ಲೂ ದೊಡ್ಡ ಅಭಿಮಾನಿ ವರ್ಗ ಹೊಂದಿರುವ ಧನುಶ್​ ಹಾಲಿವುಡ್​ನಲ್ಲ ದೊಡ್ಡ ನಿರ್ಮಾಣ ಸಂಸ್ಥೆಯ ಸಿನಿಮಾನಲ್ಲಿ ಹಾಲಿವುಡ್ ಸ್ಟಾರ್ ನಟರೊಡನೆ ನಟಿಸಿ ಬಂದಿದ್ದಾರೆ. ಆದರೆ ಇದೀಗ ಹಠಾತ್ತನೆ ತಮಿಳು ಚಿತ್ರರಂಗದ ನಿರ್ಮಾಪಕರ ಸಂಘ ಧನುಶ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು ನೊಟೀಸ್ ಜಾರಿ ಮಾಡಿದೆ. ತಮಿಳು ಚಿತ್ರರಂಗದಿಂದ ಬ್ಯಾನ್ ಮಾಡುವುದಾಗಿ ಎಚ್ಚರಿಕೆ ನೀಡಿದೆ.

ಸ್ಟಾರ್ ನಟ ಧನುಶ್ ಅವರಿಗೆ ತಮಿಳು ಚಿತ್ರರಂಗದ ನಿರ್ಮಾಪಕ ಸಂಘವು ನೊಟೀಸ್ ನೀಡಿದ್ದು ಧನುಶ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ. ನಟ ಧನುಶ್ ಮಾತ್ರವೇ ಅಲ್ಲದೆ ಇತರೆ ಕೆಲವು ಜನಪ್ರಿಯ ತಮಿಳು ನಟರಿಗೂ ನೊಟೀಸ್ ನೀಡಲಾಗಿದೆ ಎನ್ನಲಾಗುತ್ತಿದೆ. ನಟ ಧನುಶ್ ನಿರ್ಮಾಪಕರೊಬ್ಬರಿಗೆ ಮುಂಗಡ ಹಣ ಪಡೆದು ಈಗ ಸಿನಿಮಾದಲ್ಲಿ ನಟಿಸಲು ಸೂಕ್ತ ಡೇಟ್ಸ್ ನೀಡುತ್ತಿಲ್ಲವಂತೆ ಮಾತ್ರವಲ್ಲದೆ ಸಬೂಬುಗಳನ್ನು ಹೇಳುತ್ತಿದ್ದಾರಂತೆ. ಇದೇ ಕಾರಣಕ್ಕೆ ಧನುಶ್​ಗೆ ನೊಟೀಸ್ ನೀಡಿದೆ ನಿರ್ಮಾಪಕ ಸಂಘ.

ನಟ ಧನುಶ್, ತಮಿಳಿನ ಶ್ರೀ ತೆನಂದಾಲ್ ನಿರ್ಮಾಣ ಸಂಸ್ಥೆಯಿಂದ ಸಿನಿಮಾ ಒಂದಕ್ಕಾಗಿ ಮುಂಗಡ ಪಡೆದಿದ್ದರು. ಆದರೆ ಆ ಸಿನಿಮಾದಲ್ಲಿ ಈ ವರೆಗೆ ನಟಿಸಿಲ್ಲ. ಹಾಗಾಗಿ ತೆನಂದಾಲ್ ನಿರ್ಮಾಣ ಸಂಸ್ಥೆಯು ತಮಿಳು ಫಿಲಂ ಪ್ರೊಡ್ಯೂಸರ್ಸ್ ಕೌನ್ಸಿಲ್​ಗೆ (ಟಿಎಫ್​ಪಿಸಿ) ದೂರು ನೀಡಿತ್ತು. ಹಾಗಾಗಿ ಈಗ ಟಿಎಫ್​ಪಿಸಿಯು ಧನುಶ್​ಗೆ ನೊಟೀಸ್ ಜಾರಿ ಮಾಡಿದ್ದು, ನಿರ್ಮಾಪಕರ ಸಂಘದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ಸಹ ನೀಡಿದೆ.
ಧನುಶ್ ಮಾತ್ರವೇ ಅಲ್ಲದೆ ತಮಿಳಿನ ಇತರೆ ನಟರಾದ ಸಿಲಂಬರಸನ್ ಅಲಿಯಾಸ್ ಸಿಂಭು. ಎಸ್​ಜೆ ಸೂರ್ಯ, ವಿಶಾಲ್ ಹಾಸ್ಯನಟ ಯೋಗಿಬಾಬು ಅವರುಗಳಿಗೂ ನಿರ್ಮಾಪಕರ ಸಂಘ ನೊಟೀಸ್ ನೀಡಿದ್ದು ಅಶಿಸ್ತಿನ ಕಾರಣದಿಂದ ನಿಷೇಧ ಹೇರುವ ಎಚ್ಚರಿಕೆಯನ್ನು ನೀಡಿದೆ. ಪಡೆದ ಮುಂಗಡಕ್ಕೆ ಸಿನಿಮಾ ಮಾಡಿ ಕೊಡಿ ಇಲ್ಲವಾ ಬಡ್ಡಿ ಸಮೇತ ಮುಂಗಡ ಹಣ ವಾಪಸ್ ಮಾಡಿ ಎಂದು ನಿರ್ಮಾಪಕರ ಸಂಘ ನಟರಿಗೆ ಷರತ್ತು ಹಾಕಿದೆ.

ಕೆಲವು ದಿನಗಳ ಹಿಂದಷ್ಟೆ ಮಲಯಾಳಂ ಚಿತ್ರರಂಗದಲ್ಲಿ ನಿರ್ಮಾಪಕರ ಸಂಘವು ಇಬ್ಬರು ಜನಪ್ರಿಯ ನಟರ ಮೇಲೆ ನಿಷೇಧ ಹೇರಿತ್ತು. ಒಬ್ಬ ನಟ ಕ್ಷಮೆ ಕೇಳಿದ ಬಳಿಕ ಆತನ ಮೇಲಿದ್ದ ನಿಷೇಧವನ್ನು ಹಿಂತೆಗೆದುಕೊಳ್ಳಲಾಯಿತು. ಇನ್ನೊಬ್ಬ ನಟನ ಮೇಲಿನ ನಿಷೇಧ ಜಾರಿಯಲ್ಲಿದೆ. ಈಗ ಅದೇ ಮಾದರಿಯನ್ನು ತಮಿಳು ಚಿತ್ರರಂಗದ ನಿರ್ಮಾಪಕರ ಸಂಘವೂ ಮಾಡ ಹೊರಟಿದೆ.

ನಟ ಧನುಶ್, ತಮಿಳಿನ ಅತ್ಯಂತ ವೃತ್ತಿಪರ ನಟರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಆದರೆ ಮುಂಗಡ ಪಡೆದು ಸಿನಿಮಾದಲ್ಲಿ ಏಕೆ ನಟಿಸಿಲ್ಲ ಎಂಬುದು ತಿಳಿದು ಬಂದಿಲ್ಲ. ಧನುಶ್ ನಟಿಸಿರುವ ಕ್ಯಾಪ್ಟನ್ ಮಿಲ್ಲರ್ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಅದಾದ ಬಳಿಕ ಬಾಲಿವುಡ್ ಸಿನಿಮಾದಲ್ಲಿ ಧನುಶ್ ನಟಿಸುತ್ತಿದ್ದಾರೆ. ಆ ಬಳಿಕ ಆಯರತ್ತಿಲ್ ಒರುವನ್ ಸಿನಿಮಾದಲ್ಲಿ ಧನುಶ್ ನಟಿಸಲಿದ್ದಾರೆ.

lokesh

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

4 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

5 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

5 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

6 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

7 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

7 hours ago