ಕೆಲವು ವರ್ಷಗಳ ಹಿಂದೆ ಪ್ರಾರಂಭವಾದ ಸುಮಂತ್ ಅಭಿನಯದ ಚಿತ್ರವು, ಇದೀಗ ‘ಚೇಸರ್’ ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಸದ್ಯ ಟೀಸರ್ ಬಿಡುಗಡೆಯಾಗಿದೆ. ಧ್ರುವಸರ್ಜಾ ಟೀಸರ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.

ಚಿತ್ರವನ್ನು ಮಾಲತಿ ಶೇಖರ್ ಶಿವಮೊಗ್ಗ ನಿರ್ಮಿಸಿದ್ದು, ಉಪೇಂದ್ರ ಅಭಿನಯದ ‘ಬುದ್ಧಿವಂತ 2′ ಚಿತ್ರದ ಖ್ಯಾತಿಯ ಎಂ.ಜಯರಾಮ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಾಯಕನಾಗಿ ಸುಮಂತ್ ಶೈಲೇಂದ್ರ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ಮಿಕ್ಕಂತೆ ರವಿಶಂಕರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, “ಕಡ್ಡಿಪುಡಿ’ ಚಂದ್ರು ಮುಂತಾದವರು ನಟಿಸಿದ್ದಾರೆ.

ನನ್ನ ಸ್ನೇಹಿತನ ಪ್ರೇಮ ವಿವಾಹಕ್ಕೆ ಸಾಕ್ಷಿ ಹಾಕಲು ಸಬ್‌ ರಿಜಿಸ್ಟ್ರಾರ್ ಕಚೇರಿಗೆ ಹೋಗಿದ್ದಾಗ ಅಲ್ಲಿ ನನಗೆ ಅವರು ಹೇಳಿದ ಕಥೆಯೇ ‘ಚೇಸರ್’ ಎಂದ ನಿರ್ದೇಶಕ ಎಂ.ಜಯರಾಮ, ಈ ಕಥೆಯನ್ನು ಮೆಚ್ಚಿ‌ ಸಿನಿಮಾ ನಿರ್ಮಾಣ ಮಾಡಿದ ಮಾಲು ಶೇಖರ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ಇಡೀ ತಂಡಕ್ಕೆ ವಿಶೇಷವಾಗಿ ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ’ ಎಂದರು.

ನಿರ್ಮಾಪಕಿಯಾಗಲು ನನ್ನ ಕುಟುಂಬದ ಸಹಕಾರವೇ ಕಾರಣ ಎಂದ ನಿರ್ಮಾಪಕಿ ಮಾಲತಿ ಶೇಖರ್, 10 ವರ್ಷಗಳ ಹಿಂದೆ “ಅಂಜನಿ ಪುತ್ರ’ ಚಿತ್ರದಲ್ಲಿ ಪುನೀತ್ ರಾಜ್‌ ಕುಮಾರ್ ಅವರ ಚಿಕ್ಕಮ್ಮನ ಪಾತ್ರದಲ್ಲಿ ಅಭಿನಯಿಸಿದ್ದೆ. ಈ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದೇನೆ. ಧ್ರುವ ಸರ್ಜಾ ಟೀಸರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ’ ಎಂದರು.

ಆಂದೋಲನ ಡೆಸ್ಕ್

Recent Posts

ಇರಾನ್‌ ಹೋರಾಟ ಕಂಡು ಆಘಾತಗೊಂಡೆವು, ಶೀಘ್ರದಲ್ಲೇ ಯುದ್ಧ ನಿಲ್ಲಲಿದೆ : ಡೊನಾಲ್ಡ್ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…

55 mins ago

ಹೊರ್ಮುಜ್‌ ಜಲಸಂಧಿ | ಮನವಿ ತಿರಸ್ಕರಿಸಿದ ಮಿತ್ರ ರಾಷ್ಟ್ರಗಳು : ಟ್ರಂಪ್‌ಗೆ ಹಿನ್ನಡೆ

ವಾಷಿಂಗ್ಟನ್‌ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್‌ ಜಲಸಂಧಿಯ ಮೂಲಕ…

1 hour ago

ನಿರ್ವಹಣೆ ಇಲ್ಲದೆ ಸೊರಗಿದ ಸ್ಮಶಾನ!

ಮಂಚೇಗೌಡನಕೊಪ್ಪಲಿನ ಸ್ಮಶಾನ ಸರಿಪಡಿಸಲು ನಿವಾಸಿಗಳ ಆಗ್ರಹ ಎಚ್. ಎಸ್. ದಿನೇಶ್‌ಕುಮಾರ್ ಮೈಸೂರು : ದುರ್ವಾಸನೆ ಬೀರುವ ಶೌಚಾಲಯ.., ಎಲ್ಲೆಂದರಲ್ಲಿ ಹರಡಿಕೊಂಡಿರುವ…

2 hours ago

ಓದುಗರ ಪತ್ರ | ಬೀದಿನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…

2 hours ago

ಗುಂಡ್ಲುಪೇಟೆ | ವಿದ್ಯುತ್ ಸ್ಪರ್ಶಿಸಿ ಹುಲಿ ಸಾವು

ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…

3 hours ago

ಓದುಗರ ಪತ್ರ | ಪ್ರಾಣಿ, ಪಕ್ಷಿಗಳಿಗೆ ನೀರು ಕೊಡಿ

ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…

3 hours ago