ಕೆಲವು ವರ್ಷಗಳ ಹಿಂದೆ ಪ್ರಾರಂಭವಾದ ಸುಮಂತ್ ಅಭಿನಯದ ಚಿತ್ರವು, ಇದೀಗ ‘ಚೇಸರ್’ ಹೆಸರಿನಲ್ಲಿ ಬಿಡುಗಡೆಯಾಗುತ್ತಿದೆ. ಚಿತ್ರವು ಸದ್ಯದಲ್ಲೇ ಬಿಡುಗಡೆಯಾಗಲಿದ್ದು, ಸದ್ಯ ಟೀಸರ್ ಬಿಡುಗಡೆಯಾಗಿದೆ. ಧ್ರುವಸರ್ಜಾ ಟೀಸರ್ ಬಿಡುಗಡೆ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.
ಚಿತ್ರವನ್ನು ಮಾಲತಿ ಶೇಖರ್ ಶಿವಮೊಗ್ಗ ನಿರ್ಮಿಸಿದ್ದು, ಉಪೇಂದ್ರ ಅಭಿನಯದ ‘ಬುದ್ಧಿವಂತ 2′ ಚಿತ್ರದ ಖ್ಯಾತಿಯ ಎಂ.ಜಯರಾಮ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಾಯಕನಾಗಿ ಸುಮಂತ್ ಶೈಲೇಂದ್ರ ನಾಯಕಿಯಾಗಿ ರಕ್ಷ ಮೆನನ್ ನಟಿಸಿದ್ದಾರೆ. ಮಿಕ್ಕಂತೆ ರವಿಶಂಕರ್, ರಂಗಾಯಣ ರಘು, ಸಾಧು ಕೋಕಿಲ, ಚಿಕ್ಕಣ್ಣ, ಕುರಿ ಪ್ರತಾಪ್, ಸುಚೇಂದ್ರ ಪ್ರಸಾದ್, “ಕಡ್ಡಿಪುಡಿ’ ಚಂದ್ರು ಮುಂತಾದವರು ನಟಿಸಿದ್ದಾರೆ.
ನನ್ನ ಸ್ನೇಹಿತನ ಪ್ರೇಮ ವಿವಾಹಕ್ಕೆ ಸಾಕ್ಷಿ ಹಾಕಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗಿದ್ದಾಗ ಅಲ್ಲಿ ನನಗೆ ಅವರು ಹೇಳಿದ ಕಥೆಯೇ ‘ಚೇಸರ್’ ಎಂದ ನಿರ್ದೇಶಕ ಎಂ.ಜಯರಾಮ, ಈ ಕಥೆಯನ್ನು ಮೆಚ್ಚಿ ಸಿನಿಮಾ ನಿರ್ಮಾಣ ಮಾಡಿದ ಮಾಲು ಶೇಖರ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ಇಡೀ ತಂಡಕ್ಕೆ ವಿಶೇಷವಾಗಿ ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ’ ಎಂದರು.
ನಿರ್ಮಾಪಕಿಯಾಗಲು ನನ್ನ ಕುಟುಂಬದ ಸಹಕಾರವೇ ಕಾರಣ ಎಂದ ನಿರ್ಮಾಪಕಿ ಮಾಲತಿ ಶೇಖರ್, 10 ವರ್ಷಗಳ ಹಿಂದೆ “ಅಂಜನಿ ಪುತ್ರ’ ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್ ಅವರ ಚಿಕ್ಕಮ್ಮನ ಪಾತ್ರದಲ್ಲಿ ಅಭಿನಯಿಸಿದ್ದೆ. ಈ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದೇನೆ. ಧ್ರುವ ಸರ್ಜಾ ಟೀಸರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ’ ಎಂದರು.
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…
ಮೈಸೂರು: ಸಹಕಾರ ಮಹಾಮಂಡಲದ ಅಧ್ಯಕ್ಷ ಸ್ಥಾನಕ್ಕೆ ಜಿ.ಟಿ. ದೇವೇಗೌಡ ಆಯ್ಕೆಯಾಗಿರುವುದು ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…
ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…