ಚಿತ್ರ ಮಂಜರಿ

ತೆಲುಗು ನಟ ನಾನಿ ಅಭಿಯನದ ‘ದಸರಾ’ ಸಿನಿಮಾ ಏ.27ರಂದು ಒಟಿಟಿಯಲ್ಲಿ ಬಿಡುಗಡೆ

ಮುಂಬೈ: ತೆಲುಗು ನಟ ನಾನಿ ಅಭಿಯನದ ಪ್ಯಾನ್ ಇಂಡಿಯಾ ಸಿನಿಮಾ ‘ದಸರಾ’ ಏಪ್ರಿಲ್‌ 27ರಂದು ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.
ಈ ಕುರಿತು ನೆಟ್‌ಫ್ಲಿಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹಂಚಿಕೊಂಡಿದೆ.

‘ಈಗ ಪಟಾಕಿಗಳ ಸದ್ದು ಕೇಳಿಸುವ ಸಮಯ ಏಕೆಂದರೆ ಈ ವರ್ಷದ ಆರಂಭದಲ್ಲಿ ತೆರೆ ಕಂಡಿದ್ದ ‘ದಸರಾ’ ಚಿತ್ರವು ಇದೀಗ ಇದೇ 27ರಂದು ಒಟಿಟಿಯಲ್ಲಿ ಬರಲಿದೆ ಎಂದು ನೆಟ್‌ಫ್ಲಿಕ್ಸ್‌ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ.

‘ದಸರಾ’ವನ್ನು ಶ್ರೀಕಾಂತ್ ಒಡೆಲಾ ನಿರ್ದೇಶಿಸಿದ್ದು, ಚಿತ್ರದಲ್ಲಿ ಹಳ್ಳಿಯ ಸೊಗಡನ್ನು ಬಿಂಬಿಸಲಾಗಿದೆ.

ದಸರಾ ಚಿತ್ರವು ಮಾರ್ಚ್ 30ರಂದು ತೆಲುಗು, ತಮಿಳು, ಮಲಯಾಳಂ, ಕನ್ನಡ ಸೇರಿದಂತೆ ಹಿಂದಿ ಭಾಷೆಯಲ್ಲಿ ಬಿಡುಗಡೆಗೊಂಡಿತ್ತು. ಚಿತ್ರವು ವಿಶ್ವದಾದ್ಯಂತ ಗಲ್ಲಾಪೆಟ್ಟಿಗೆಯಲ್ಲಿ ₹100 ಕೋಟಿ ಗಳಿಕೆ ಕಂಡಿದೆ.

‘ದಸರಾ’ ಚಿತ್ರದಲ್ಲಿ ಕೀರ್ತಿ ಸುರೇಶ್, ದೀಕ್ಷಿತ್ ಶೆಟ್ಟಿ, ಶೈನ್ ಟಾಮ್ ಚಾಕೋ, ಸಮುದ್ರಕನಿ, ಸಾಯಿ ಕುಮಾರ್ ಮತ್ತು ಪೂರ್ಣಾ ಕೂಡ ನಟಿಸಿದ್ದಾರೆ.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago