ಹೈದರಾಬಾದ್: ಕನ್ನಡದ ಸ್ಟಾರ್ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್ ತೆಲುಗಿನ ದಿಲ್ ರಾಜು ಬ್ಯಾನರ್ ಅಡಿಯಲ್ಲಿ ನಟಿಸುತ್ತಿದ್ದಾರೆ.
ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ದಿಲ್ ರಾಜು ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ದಳಪತಿ ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಬಾಕ್ಸ್ ಆಫೀಸ್ನಲ್ಲಿ 300+ ಕೋಟಿ ರೂಪಾಯಿ ಗಳಿಕೆ ಮಾಡಿತು.
ಯಶ್ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಯಶ್ ಜೊತೆ ದಿಲ್ ರಾಜು ಸಿನಿಮಾ ಮಾಡುವುದು ಖಚಿತವಾಗಿದೆ. ಆದರೆ ಯಶ್ ಅವರ 19ನೇ ಅಥವಾ 20ನೇ ಸಿನಿಮಾವೇ? ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಯಶ್ ಅವರ 19ನೇ ಚಿತ್ರಕ್ಕೆ ದಿಲ್ ರಾಜು ಬಂಡವಾಳ ಹಾಕುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಇತ್ತೀಚೆಗೆ ಟ್ವಿಟರ್ನಲ್ಲಿ ಆಸ್ಕ್ ಮಿ ಎನಿಥಿಂಗ್ ಸೆಷನ್ ನಡೆಸಲಾಯಿತು. ಈ ವೇಳೆ ಯಶ್ ಅಭಿಮಾನಿಯೊಬ್ಬರು ‘ಯಶ್ ಜೊತೆ ಸಿನಿಮಾ ನಿರೀಕ್ಷಿಸಬಹುದೇ’ ಎಂದು ದಿಲ್ ರಾಜುಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ದಿಲ್ ರಾಜು ಪರವಾಗಿ ಉತ್ತರಿಸಿರುವ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಸಂಸ್ಥೆ ‘ಹೌದು’ ಎನ್ನುವ ಉತ್ತರ ನೀಡಿದೆ.
ದಿಲ್ ರಾಜು ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸದ್ಯ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…