ಚಿತ್ರ ಮಂಜರಿ

ಯಶ್‌ ಜೊತೆ ಸಿನಿಮಾ ಖಚಿತಪಡಿಸಿದ ತೆಲುಗು ನಿರ್ಮಾಪಕ ದಿಲ್ ರಾಜು

ಹೈದರಾಬಾದ್‌: ಕನ್ನಡದ ಸ್ಟಾರ್‌ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್‌ ತೆಲುಗಿನ ದಿಲ್ ರಾಜು ಬ್ಯಾನರ್‌ ಅಡಿಯಲ್ಲಿ ನಟಿಸುತ್ತಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ದಿಲ್‌ ರಾಜು ಬಿಗ್‌ ಬಜೆಟ್‌ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ದಳಪತಿ ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಬಾಕ್ಸ್ ಆಫೀಸ್​ನಲ್ಲಿ 300+ ಕೋಟಿ ರೂಪಾಯಿ ಗಳಿಕೆ ಮಾಡಿತು.

ಯಶ್ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಯಶ್‌ ಜೊತೆ ದಿಲ್‌ ರಾಜು ಸಿನಿಮಾ ಮಾಡುವುದು ಖಚಿತವಾಗಿದೆ. ಆದರೆ ಯಶ್‌ ಅವರ 19ನೇ ಅಥವಾ 20ನೇ ಸಿನಿಮಾವೇ? ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಯಶ್ ಅವರ 19ನೇ ಚಿತ್ರಕ್ಕೆ ದಿಲ್ ರಾಜು ಬಂಡವಾಳ ಹಾಕುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇತ್ತೀಚೆಗೆ ಟ್ವಿಟರ್​ನಲ್ಲಿ ಆಸ್ಕ್ ಮಿ ಎನಿಥಿಂಗ್ ಸೆಷನ್ ನಡೆಸಲಾಯಿತು. ಈ ವೇಳೆ ಯಶ್ ಅಭಿಮಾನಿಯೊಬ್ಬರು ‘ಯಶ್ ಜೊತೆ ಸಿನಿಮಾ ನಿರೀಕ್ಷಿಸಬಹುದೇ’ ಎಂದು ದಿಲ್​ ರಾಜುಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ದಿಲ್ ರಾಜು ಪರವಾಗಿ ಉತ್ತರಿಸಿರುವ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಸಂಸ್ಥೆ ‘ಹೌದು’ ಎನ್ನುವ ಉತ್ತರ ನೀಡಿದೆ.

ದಿಲ್ ರಾಜು ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸದ್ಯ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್​’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

andolanait

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

2 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

13 hours ago