ಚಿತ್ರ ಮಂಜರಿ

ತೈಕ್ಕುಡಂ ಬ್ರಿಜ್‌ʼ ಮೊಕದ್ದಮೆ: ʼಕಾಂತಾರʼ ಚಲನಚಿತ್ರದ ‘ವರಾಹರೂಪಂ’ ಹಾಡಿಗೆ ಕೇರಳ ನ್ಯಾಯಾಲಯದ ನಿರ್ಬಂಧ

ತಿರುವನಂತಪುರ: ಕೇರಳದ ಜನಪ್ರಿಯ ಸಂಗೀತ ತಂಡ ʼತೈಕ್ಕುಡಂ ಬ್ರಿಜ್‌ʼನ ಅನುಮತಿ ಪಡೆಯದೆ ಇತ್ತೀಚೆಗೆ ಬಿಡುಗಡೆಯಾದ ಕನ್ನಡದ ಸೂಪರ್‌ಹಿಟ್‌ ಚಲನಚಿತ್ರ ‘ಕಾಂತಾರ’ದ ‘ವರಾಹ ರೂಪಂ’ ಹಾಡನ್ನು ಪ್ರದರ್ಶಿಸದಂತೆ ಕೇರಳದ ನ್ಯಾಯಾಲಯವೊಂದು  ತಡೆ ನೀಡಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ನೀಡಿರುವ ಹೇಳಿಕೆ ಪ್ರಕಾರ ತನ್ನ ‘ನವರಸಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದ್ದು ಹಾಡಿಗೆ ತಡೆ ನೀಡುವಂತೆ ಕೋರಿ ʼತೈಕ್ಕುಡಂ ಬ್ರಿಜ್‌ʼ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೋರಿಕ್ಕೋಡ್‌ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಈ ಆದೇಶ ನೀಡಿದರು.

ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು ಮಾತ್ರವಲ್ಲದೇ ಆನ್‌ಲೈನ್‌ ಸಿನಿಮಾ ವೇದಿಕೆಗಳಾದ ಅಮೆಜಾನ್‌, ಸ್ಪಾಟಿಫೈ, ಯೂಟ್ಯೂಬ್‌, ವಿಂಕ್‌ ಮ್ಯೂಸಿಕ್‌, ಜಿಯೋಸಾವನ್‌ ಮತ್ತಿತರರು ತಂಡದ ಅನುಮತಿ ಇಲ್ಲದೇ ʼವರಾಹ ರೂಪಂʼ ಹಾಡನ್ನು ಪ್ರದರ್ಶಿಸದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಸಂಗೀತ ತಂಡದ ಇನ್‌ಸ್ಟಾಗ್ರಾಂ ಪೋಸ್ಟ್‌ ತಿಳಿಸಿದೆ.

ಸೆ. 30ರಂದು ಬಿಡುಗಡೆಯಾದ ರಿಷಬ್ ಶೆಟ್ಟಿ ಅಭಿನಯದ ಬ್ಲಾಕ್ ‌ಬಸ್ಟರ್ ಕನ್ನಡ ಚಲನಚಿತ್ರ ಕಾಂತಾರ ಮತ್ತು ಅದರ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅನತಿ ಕಾಲದಲ್ಲಿಯೇ ‘ವರಾಹ ರೂಪಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪ ಎದುರಿಸಿದರು.

ಐದು ವರ್ಷಗಳ ಹಿಂದೆ ಬಿಡುಗಡೆಯಾದ ‘ನವರಸಂ’ ಎಂಬ ಹಾಡನ್ನು ʼವರಾಹ ರೂಪಂʼ ಗೀತೆ ಹೋಲುತ್ತದೆ ಎಂದು ಆರೋಪಿಸಿದ ʼತೈಕ್ಕುಡಂ ಬ್ರಿಜ್‌ʼ ಕೂಡಲೇ ಸಾಮಾಜಿಕ ಜಾಲತಾಣಗಳ ಮೂಲಕ ತನಗೂ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ ಮತ್ತು ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿತು.

ನಮ್ಮ ನವರಸಂ ಮತ್ತು ವರಾಹ ರೂಪಂ ಆಡಿಯೋ ವಿಚಾರದಲ್ಲಿ ಅನೇಕ ಅನಿವಾರ್ಯ ಹೋಲಿಕೆಗಳು ಇದ್ದುದರಿಂದ ಹಕ್ಕುಸ್ವಾಮ್ಯ ಕಾಯಿದೆಯ ಘೋರ ಉಲ್ಲಂಘನೆಯಾಗಿದೆ. ನಮ್ಮ ದೃಷ್ಟಿಯಲ್ಲಿ ಸ್ಫೂರ್ತಿ ಮತ್ತು ಕೃತಿಚೌರ್ಯಕ್ಕೂ ನಡುವಿನ ಗೆರೆ ಭಿನ್ನ ಮತ್ತು ನಿರ್ವಿವಾದಿತವಾಗಿದ್ದು ಇದಕ್ಕೆ ಕಾರಣರಾದ ಸಿನಿಮಾ ತಂಡದ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರುತ್ತೇವೆ. ಹಾಡನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಜೊತೆಗೆ ಸಿನಿಮಾದ ಸೃಜನಶೀಲ ತಂಡ ತನ್ನದೇ ಮೂಲ ಕೃತಿ ಎಂಬಂತೆ ಹಾಡನ್ನು ಬಿಡುಗಡೆ ಮಾಡಿದೆ ಎಂದು ಬ್ರಿಜ್‌ನ ಇನ್‌ಸ್ಟಾಗ್ರಾಂ ಪೋಸ್ಟ್‌ ವಿವರಿಸಿತ್ತು.

ಐದು ವರ್ಷಗಳ ಹಿಂದೆ ಮಾತೃಭೂಮಿ ಕಪ್ಪಾ ಟಿವಿಯ ಯುಟ್ಯೂಬ್ ವಾಹಿನಿಯಲ್ಲಿ ಬಿಡುಗಡೆಯಾದ ʼನವರಸಂʼ ಗೀತೆಯನ್ನು ಈವರೆಗೆ ಸುಮಾರು 53 ಲಕ್ಷ ಬಾರಿ ವೀಕ್ಷಿಸಲಾಗಿದೆ. ಕಳೆದ 9 ದಿನಗಳ ಹಿಂದೆ ʼಹೊಂಬಾಳೆ ಫಿಲಂಸ್‌ʼನ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ʼವರಾಹ ರೂಪಂʼ ಈಗಾಗಲೇ 1.7 ಕೋಟಿ ವೀಕ್ಷಣೆ ಪಡೆದಿದೆ. ʼತೈಕ್ಕುಡಂ ಬ್ರಿಜ್‌ʼ ಪರ ವಕೀಲ ಸತೀಶ್ ಮೂರ್ತಿ ವಾದ

andolana

Recent Posts

ಟ್ರೆಂಡ್‌ ಸೃಷ್ಟಿಸಿದ ಕಾಕ್ರೋಚ್‌ ಜನತಾ ಪಾರ್ಟಿ ; ಚಳವಳಿಯಾಗಿ ಬದಲಾದ ಸಿಜೆಪಿ

ಹೊಸದಿಲ್ಲಿ : ಜೆನ್‌ಝೀಗಳ ನೆಚ್ಚಿನ ತಾಣವಾಗಿರುವ ಇನ್‌ಸ್ಟಾಗ್ರಾಂ ಈಗ ಕೇವಲ ಮನರಂಜನೆಯ ತಾಣವಾಗಂತೂ ಇಲ್ಲ. ಬದಲಾಗಿ ಸಂಚಲನ ಸೃಷ್ಟಿಸುವ ಬಹುದೊಡ್ಡ…

6 mins ago

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

5 hours ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

5 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

6 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

14 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

17 hours ago