ಚಿತ್ರ ಮಂಜರಿ

ತೈಕ್ಕುಡಂ ಬ್ರಿಜ್‌ʼ ಮೊಕದ್ದಮೆ: ʼಕಾಂತಾರʼ ಚಲನಚಿತ್ರದ ‘ವರಾಹರೂಪಂ’ ಹಾಡಿಗೆ ಕೇರಳ ನ್ಯಾಯಾಲಯದ ನಿರ್ಬಂಧ

ತಿರುವನಂತಪುರ: ಕೇರಳದ ಜನಪ್ರಿಯ ಸಂಗೀತ ತಂಡ ʼತೈಕ್ಕುಡಂ ಬ್ರಿಜ್‌ʼನ ಅನುಮತಿ ಪಡೆಯದೆ ಇತ್ತೀಚೆಗೆ ಬಿಡುಗಡೆಯಾದ ಕನ್ನಡದ ಸೂಪರ್‌ಹಿಟ್‌ ಚಲನಚಿತ್ರ ‘ಕಾಂತಾರ’ದ ‘ವರಾಹ ರೂಪಂ’ ಹಾಡನ್ನು ಪ್ರದರ್ಶಿಸದಂತೆ ಕೇರಳದ ನ್ಯಾಯಾಲಯವೊಂದು  ತಡೆ ನೀಡಿದೆ.

ಇನ್‌ಸ್ಟಾಗ್ರಾಮ್‌ನಲ್ಲಿ ನೀಡಿರುವ ಹೇಳಿಕೆ ಪ್ರಕಾರ ತನ್ನ ‘ನವರಸಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದ್ದು ಹಾಡಿಗೆ ತಡೆ ನೀಡುವಂತೆ ಕೋರಿ ʼತೈಕ್ಕುಡಂ ಬ್ರಿಜ್‌ʼ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೋರಿಕ್ಕೋಡ್‌ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಈ ಆದೇಶ ನೀಡಿದರು.

ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು ಮಾತ್ರವಲ್ಲದೇ ಆನ್‌ಲೈನ್‌ ಸಿನಿಮಾ ವೇದಿಕೆಗಳಾದ ಅಮೆಜಾನ್‌, ಸ್ಪಾಟಿಫೈ, ಯೂಟ್ಯೂಬ್‌, ವಿಂಕ್‌ ಮ್ಯೂಸಿಕ್‌, ಜಿಯೋಸಾವನ್‌ ಮತ್ತಿತರರು ತಂಡದ ಅನುಮತಿ ಇಲ್ಲದೇ ʼವರಾಹ ರೂಪಂʼ ಹಾಡನ್ನು ಪ್ರದರ್ಶಿಸದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಸಂಗೀತ ತಂಡದ ಇನ್‌ಸ್ಟಾಗ್ರಾಂ ಪೋಸ್ಟ್‌ ತಿಳಿಸಿದೆ.

ಸೆ. 30ರಂದು ಬಿಡುಗಡೆಯಾದ ರಿಷಬ್ ಶೆಟ್ಟಿ ಅಭಿನಯದ ಬ್ಲಾಕ್ ‌ಬಸ್ಟರ್ ಕನ್ನಡ ಚಲನಚಿತ್ರ ಕಾಂತಾರ ಮತ್ತು ಅದರ ಸಂಗೀತ ಸಂಯೋಜಕ ಬಿ ಅಜನೀಶ್ ಲೋಕನಾಥ್ ಅನತಿ ಕಾಲದಲ್ಲಿಯೇ ‘ವರಾಹ ರೂಪಂ’ ಹಾಡಿನ ಹಕ್ಕುಸ್ವಾಮ್ಯ ಉಲ್ಲಂಘನೆಯ ಆರೋಪ ಎದುರಿಸಿದರು.

ಐದು ವರ್ಷಗಳ ಹಿಂದೆ ಬಿಡುಗಡೆಯಾದ ‘ನವರಸಂ’ ಎಂಬ ಹಾಡನ್ನು ʼವರಾಹ ರೂಪಂʼ ಗೀತೆ ಹೋಲುತ್ತದೆ ಎಂದು ಆರೋಪಿಸಿದ ʼತೈಕ್ಕುಡಂ ಬ್ರಿಜ್‌ʼ ಕೂಡಲೇ ಸಾಮಾಜಿಕ ಜಾಲತಾಣಗಳ ಮೂಲಕ ತನಗೂ ಚಿತ್ರಕ್ಕೂ ಯಾವುದೇ ಸಂಬಂಧ ಇಲ್ಲ ಮತ್ತು ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿತು.

ನಮ್ಮ ನವರಸಂ ಮತ್ತು ವರಾಹ ರೂಪಂ ಆಡಿಯೋ ವಿಚಾರದಲ್ಲಿ ಅನೇಕ ಅನಿವಾರ್ಯ ಹೋಲಿಕೆಗಳು ಇದ್ದುದರಿಂದ ಹಕ್ಕುಸ್ವಾಮ್ಯ ಕಾಯಿದೆಯ ಘೋರ ಉಲ್ಲಂಘನೆಯಾಗಿದೆ. ನಮ್ಮ ದೃಷ್ಟಿಯಲ್ಲಿ ಸ್ಫೂರ್ತಿ ಮತ್ತು ಕೃತಿಚೌರ್ಯಕ್ಕೂ ನಡುವಿನ ಗೆರೆ ಭಿನ್ನ ಮತ್ತು ನಿರ್ವಿವಾದಿತವಾಗಿದ್ದು ಇದಕ್ಕೆ ಕಾರಣರಾದ ಸಿನಿಮಾ ತಂಡದ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರುತ್ತೇವೆ. ಹಾಡನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಜೊತೆಗೆ ಸಿನಿಮಾದ ಸೃಜನಶೀಲ ತಂಡ ತನ್ನದೇ ಮೂಲ ಕೃತಿ ಎಂಬಂತೆ ಹಾಡನ್ನು ಬಿಡುಗಡೆ ಮಾಡಿದೆ ಎಂದು ಬ್ರಿಜ್‌ನ ಇನ್‌ಸ್ಟಾಗ್ರಾಂ ಪೋಸ್ಟ್‌ ವಿವರಿಸಿತ್ತು.

ಐದು ವರ್ಷಗಳ ಹಿಂದೆ ಮಾತೃಭೂಮಿ ಕಪ್ಪಾ ಟಿವಿಯ ಯುಟ್ಯೂಬ್ ವಾಹಿನಿಯಲ್ಲಿ ಬಿಡುಗಡೆಯಾದ ʼನವರಸಂʼ ಗೀತೆಯನ್ನು ಈವರೆಗೆ ಸುಮಾರು 53 ಲಕ್ಷ ಬಾರಿ ವೀಕ್ಷಿಸಲಾಗಿದೆ. ಕಳೆದ 9 ದಿನಗಳ ಹಿಂದೆ ʼಹೊಂಬಾಳೆ ಫಿಲಂಸ್‌ʼನ ಯೂಟ್ಯೂಬ್ ಚಾನೆಲ್‌ನಲ್ಲಿ ಬಿಡುಗಡೆಯಾದ ʼವರಾಹ ರೂಪಂʼ ಈಗಾಗಲೇ 1.7 ಕೋಟಿ ವೀಕ್ಷಣೆ ಪಡೆದಿದೆ. ʼತೈಕ್ಕುಡಂ ಬ್ರಿಜ್‌ʼ ಪರ ವಕೀಲ ಸತೀಶ್ ಮೂರ್ತಿ ವಾದ

andolana

Recent Posts

ಶತಕ ಬಾರಿಸಿದ ಸಿಎಂ ಎದುರು ಸವಾಲುಗಳೂ ಇವೆ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…

2 hours ago

ಎಐ; ಮನುಕುಲದ ವಿನಾಶಕ್ಕೆ ಕಾರಣವಾಗಲಿದೆಯೇ?

ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…

2 hours ago

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

3 hours ago

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು…

3 hours ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

3 hours ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

3 hours ago