ಚಿತ್ರ ಮಂಜರಿ

ರಜನಿ ಸಿನಿಮಾಗೆ ಠಕ್ಕರ್ : ತಮಿಳು ಜೈಲರ್ ದಿನವೇ ಮಲಯಾಳಂ ಜೈಲರ್ ರಿಲೀಸ್

ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಕನ್ನಡದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕಾಂಬಿನೇಷನ್ ನ ಜೈಲರ್ ಸಿನಿಮಾ ಬಿಡುಗಡೆಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ಟೈಟಲ್ ಸಂಕಷ್ಟ ಎದುರಾಗಿತ್ತು. ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದ್ದು, ಈ ಸಂದರ್ಭದಲ್ಲಿ ಮಲಯಾಳಂ ನಿರ್ದೇಶಕರೊಬ್ಬರು ಟೈಟಲ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದರು.

ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ ಜೈಲರ್ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಕೂಡ ಬಿಡುಗಡೆಗೆ ಸಿದ್ಧವಾಗಿತ್ತು. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರೆದಿತ್ತು.

ಈಗ ಸಕ್ಕಿರ್ ಮಡತ್ತಿಲ್ಲ ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಜೊತೆಗೆ ರಜನಿಕಾಂತ್ ನಟನೆಯ ಜೈಲರ್ ಸಿನಿಮಾ ರಿಲೀಸ್ ದಿನವೇ ಮಲಯಾಳಂನಲ್ಲಿ ತಮ್ಮ ಜೈಲರ್ ಚಿತ್ರವನ್ನು ರಿಲೀಸ್ ಮಾಡುವುದಾಗಿ ಘೋಷಿಸಿದ್ದಾರೆ. ಆಗಸ್ಟ್ 10ಕ್ಕೆ ತಮ್ಮ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಅವರು ತಿಳಿಸಿದ್ದಾರೆ.

ಸೂಪರ್‌ಸ್ಟಾರ್ ರಜನಿಕಾಂತ್ ನಟನೆಯ ಜೈಲರ್ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.

ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್, ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಅವಕಾಶ ಸಿಗಲಿದೆ.

ಅಣ್ಣಾತ್ತೆ ಬಳಿಕ ರಜನಿ ನಟಿಸಿರುವ 169ನೇ ಸಿನಿಮಾ ಜೈಲರ್. ತಲೈವ ಹೊಸ ಸಿನಿಮಾ ಎಂಟ್ರಿಗೆ ಕಾದು‌ ಕುಳಿತಿರುವ ಅಭಿಮಾನಿಗಳು ಹಬ್ಬ ಮಾಡಲು ಸಜ್ಜಾಗಿದ್ದಾರೆ. ರಾಕ್ ಸ್ಟಾರ್ ಅನಿರುದ್ಧ್ ರವಿಚಂದರ್ ಸಂಗೀತ‌ ನಿರ್ದೇಶನದ ಜೈಲರ್ ಸಿನಿಮಾವನ್ನೂ ಚೆನ್ನೈ, ಮಂಗಳೂರು, ಹೈದರಾಬಾದ್, ಕೇರಳ ಸೇರಿದಂತೆ ಹಲವೆಡೆ ಶೂಟಿಂಗ್ ನಡೆಸಲಾಗಿದೆ. ಸ್ಯಾಂಪಲ್ಸ್ ಮೂಲಕ ಭಾರಿ ಕ್ರೇಜ್ ಹೆಚ್ಚಿಸಿರುವ ರಜನಿಕಾಂತ್ ಸಿನಿಮಾ ಆಗಸ್ಟ್ 10ಕ್ಕೆ ಥಿಯೇಟರ್ ಗೆ ಎಂಟ್ರಿ ಕೊಡಲಿದೆ.

ಒಟ್ಟು ಮೂರು ಭಾಷೆಗಳಲ್ಲಿ ಏಕಕಾಲಕ್ಕೆ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಮೂರು ಭಾಷೆಯ ಕಲಾವಿದರು ಚಿತ್ರದಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಕನ್ನಡದ ಶಿವರಾಜ್ ಕುಮಾರ್, ತಮಿಳಿನ ಸೂಪರ್ ಸ್ಟಾರ್ ಜೊತೆ ತೆರೆ ಹಂಚಿಕೊಂಡಿರುವುದು ಸಹಜವಾಗಿಯೇ ಅವರ ಅಭಿಮಾನಿಗಳಿಗೆ ಸಂಭ್ರಮ ತಂದಿದೆ.

lokesh

Recent Posts

ಕಾಂಗ್ರೆಸ್‌ನಿಂದ ಎಂಎಲ್‌ಸಿ ಅಬ್ದುಲ್‌ ಜಬ್ಬಾರ್‌ ಅಮಾನತು

ಬೆಂಗಳೂರು: ಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…

15 mins ago

ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕಾರ

ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್‌ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್‌…

38 mins ago

ಶ್ರೀರಂಗಪಟ್ಟಣದ ಮುತ್ತು ಮಾರಮ್ಮ ದೇವಿ ಕರಗ: ಕೊಂಡದಲ್ಲಿ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

1 hour ago

ಶ್ರೀ ಗುರು ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…

2 hours ago

ಅಂಡಮಾನ್‌ ಸಮುದ್ರದಲ್ಲಿ ಮುಳುಗಿದ ವಲಸಿಗರಿದ್ದ ದೋಣಿ: 250 ಜನ ಕಣ್ಮರೆ

ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್‌ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…

3 hours ago

ಹನೂರು| ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ: ರೈತ ಮುಖಂಡರ ಆಕ್ರೋಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…

3 hours ago